![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Dec 23, 2021, 12:32 PM IST
ಚಿಂಚೋಳಿ: ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹಲಸಿ ಗ್ರಾಮದ ವೃತ್ತದಲ್ಲಿನ ಮಹಾತ್ಮ ಬಸವೇಶ್ವರ ಭಾವಚಿತ್ರಕ್ಕೆ ಸಗಣಿ ಬಳಿದು ಅಪಮಾನ ಮಾಡಿದ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ತಾಲೂಕು ವೀರಶೈವ ಲಿಂಗಾಯಿತ ಸಮಾಜದವರು ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.
ತಾಲೂಕು ವೀರಶೈವ ಸಮಾಜದ ಅಧ್ಯಕ್ಷ ಚಿತ್ರಶೇಖರ ಪಾಟೀಲ ಪ್ರತಿಭಟನೆ ಉದ್ದೇಶಿಸಿ ಮಾತನಾಡಿ, ಬೆಳಗಾವಿ ಜಿಲ್ಲೆಯಲ್ಲಿ ಎಂಇಎಸ್, ಶಿವಸೇನೆ ಕಾರ್ಯಕರ್ತರ ಪುಂಡಾಟಿಕೆ ಹೆಚ್ಚಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ದೇಶದ್ರೋಹಿಗಳ ಅಟ್ಟಹಾಸ ಮಿತಿ ಮೀರಿದೆ. ಆದ್ದರಿಂದ ರಾಜ್ಯದಲ್ಲಿ ಎಂಇಎಸ್, ಶಿವಸೇನೆ ಸಂಘಟನೆಗಳನ್ನು ಕೂಡಲೇ ರದ್ದುಪಡಿಸಬೇಕೆಂದು ಆಗ್ರಹಿಸಿದರು.
ಯುವ ಅಧ್ಯಕ್ಷ ಸಂಜೀವಕುಮಾರ ಪಾಟೀಲ ಹಲಸಿ ಗ್ರಾಮದ ಘಟನೆ ಖಂಡನೀಯವಾಗಿದೆ ಎಂದರು. ಮುಖಂಡರಾದ ಶರಣು ಮೋತಕಪಳ್ಳಿ, ನಾಗರಾಜ ಸೀಳಿನ, ನಾಗರಾಜ ಮಲಕೂಡ, ಸಂಪತ್ ಕುಮಾರ ಮುಸ್ತಾರಿ, ಜಗ್ಗು ಗಿರಣಿ, ಕಾಶಿನಾಥ ಪಾಟೀಲ ಎಂಪಳ್ಳಿ, ವಿರೂಪಾಕ್ಷ ಎಂಪಳ್ಳಿ, ಎಪಿಎಂಸಿ ಅಧ್ಯಕ್ಷ ಅಶೋಕ ಪಡಶೆಟ್ಟಿ, ಸುರೇಶ ದೇಶಪಾಂಡೆ ಪಾಲ್ಗೊಂಡಿದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
You seem to have an Ad Blocker on.
To continue reading, please turn it off or whitelist Udayavani.