ಅಂಡರ್‌-19 ಏಶ್ಯಕಪ್‌ ಕ್ರಿಕೆಟ್‌: ಹರ್ನೂರ್‌ ನೂರರ ಆಟ; ಭಾರತಕ್ಕೆ ಜಯ

ಯುಎಇ ವಿರುದ್ಧ 154 ರನ್‌ ಗೆಲುವು ; ಶನಿವಾರ ಪಾಕ್‌ ಎದುರಾಳಿ

Team Udayavani, Dec 24, 2021, 5:00 AM IST

ಅಂಡರ್‌-19 ಏಶ್ಯಕಪ್‌ ಕ್ರಿಕೆಟ್‌: ಹರ್ನೂರ್‌ ನೂರರ ಆಟ; ಭಾರತಕ್ಕೆ ಜಯ

ದುಬಾೖ: ಅಂಡರ್‌-19 ಏಕದಿನ ಏಶ್ಯ ಕಪ್‌ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಭಾರತ ಭರ್ಜರಿ ಗೆಲುವಿನ ಆರಂಭ ಪಡೆದಿದೆ. “ಎ’ ವಿಭಾಗದ ಪಂದ್ಯದಲ್ಲಿ ಆತಿಥೇಯ ಯುಎಇಯನ್ನು 154 ರನ್ನುಗಳಿಂದ ಬಗ್ಗುಬಡಿದಿದೆ. ಆರಂಭಕಾರ ಹರ್ನೂರ್‌ ಸಿಂಗ್‌ ಶವರ ಶತಕ ಭಾರತ ಸರದಿಯ ಆಕರ್ಷಣೆ ಆಗಿತ್ತು.

ಮೊದಲು ಬ್ಯಾಟಿಂಗ್‌ ಮಾಡಿದ ಭಾರತದ ಕಿರಿಯರು 5 ವಿಕೆಟಿಗೆ 282 ರನ್‌ ಬಾರಿಸಿದರೆ, ಯುಎಇ 34.3 ಓವರ್‌ಗಳಲ್ಲಿ 128ಕ್ಕೆ ಆಲೌಟ್‌ ಆಯಿತು. “ಎ’ ವಿಭಾಗದ ಇನ್ನೊಂದು ಮುಖಾಮುಖೀಯಲ್ಲಿ ಪಾಕಿಸ್ಥಾನ 4 ವಿಕೆಟ್‌ಗಳಿಂದ ಅಫ್ಘಾನಿಸ್ಥಾನವನ್ನು ಮಣಿಸಿತು. ಭಾರತ-ಪಾಕಿಸ್ಥಾನ ಶನಿವಾರ ಎದುರಾಗಲಿವೆ.

ಹರ್ನೂರ್‌ 120
ಭಾರತದ ದೊಡ್ಡ ಮೊತ್ತದಲ್ಲಿ ಆರಂಭಕಾರ ಹರ್ನೂರ್‌ ಸಿಂಗ್‌ ಕೊಡುಗೆ ಮಹತ್ವದ್ದಾಗಿತ್ತು. ಅವರು 120 ರನ್‌ ಬಾರಿಸಿದರು. 130 ಎಸೆತಗಳ ಈ ರಂಜನೀಯ ಆಟದಲ್ಲಿ 11 ಬೌಂಡರಿ ಒಳಗೊಂಡಿತ್ತು. ನಾಯಕ್‌ ಯಶ್‌ ಧುಲ್‌ 63, ರಾಜ್ಯವರ್ಧನ್‌ ಅಜೇಯ 48 ರನ್‌ ಮಾಡಿದರು.

ಬೌಲಿಂಗ್‌ನಲ್ಲೂ ಮಿಂಚಿದ ರಾಜ್ಯವರ್ಧನ್‌ 24ಕ್ಕೆ 3 ವಿಕೆಟ್‌ ಕೆಡವಿದರು. ಗರ್ವ್‌ ಸಂಗ್ವಾನ್‌, ವಿಕ್ಕಿ ಒಸ್ವಾಲ್‌, ಕೌಶಲ್‌ ತಾಂಬೆ ತಲಾ 2 ವಿಕೆಟ್‌ ಉರುಳಿಸಿದರು. ಯುಎಇ ಸರದಿಯಲ್ಲಿ 45 ರನ್‌ ಮಾಡಿದ ಕೈ ಸ್ಮಿತ್‌ ಅವರದೇ ಹೆಚ್ಚಿನ ಗಳಿಕೆಯಾಗಿತ್ತು.

ಇದನ್ನೂ ಓದಿ:ಪ್ರೊ ಕಬಡ್ಡಿ: ಜೈಪುರ್‌ ಪಿಂಕ್‌ ಪ್ಯಾಂಥರ್ ವನ್ನು ಕೆಡವಿದ ಗುಜರಾತ್‌ ಜೈಂಟ್ಸ್‌

ಸಂಕ್ಷಿಪ್ತ ಸ್ಕೋರ್‌: ಭಾರತ-5 ವಿಕೆಟಿಗೆ 282 (ಹರ್ನೂರ್‌ 120, ಧುಲ್‌ 63, ರಾಜ್ಯವರ್ಧನ್‌ ಔಟಾಗದೆ 48, ಶರಾಫ‌ುಲ್‌ 44ಕ್ಕೆ 2). ಯುಎಇ-34.3 ಓವರ್‌ಗಳಲ್ಲಿ 128 (ಸ್ಮಿತ್‌ 45, ಸೂರ್ಯ ಸತೀಶ್‌ 21, ರಾಜ್ಯವರ್ಧನ್‌ 24ಕ್ಕೆ 3, ಒಸ್ವಾಲ್‌ 7ಕ್ಕೆ 2, ತಾಂಬೆ 16ಕ್ಕೆ 2, ಸಂಗ್ವಾನ್‌ 39ಕ್ಕೆ 2).

ಟಾಪ್ ನ್ಯೂಸ್

ಗಂಗೊಳ್ಳಿ ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು?

Theft; ಗಂಗೊಳ್ಳಿ ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು?

Development of 2-dose vaccine for HIV prevention: MIT

HIV vaccine; ಎಚ್‌ಐವಿ ತಡೆಗೆ 2 ಡೋಸ್‌ ಲಸಿಕೆ ಅಭಿವೃದ್ಧಿ: ಎಂಐಟಿ

India’s first bullet train to be made in Bangalore?

Bullet Train; ಬೆಂಗಳೂರಿನಲ್ಲೇ ತಯಾರಾಗಲಿದೆ ದೇಶದ ಮೊದಲ ಬುಲೆಟ್‌ ರೈಲು?

Ma’nene; ಪ್ರತಿ ವರ್ಷ ಶ*ವಗಳಿಗೆ ವಿಶಿಷ್ಟ ಗೌರವ!: ಅಚ್ಚರಿಗೊಳಪಡಿಸುವ ಸಂಪ್ರದಾಯ

Ma’nene;ಸ್ಮಶಾನದಲ್ಲಿದ್ದ ಶವ ಮನೆಗೆ ತಂದು ಸಂಭ್ರಮಿಸ್ತಾರೆ! ಇದು ವಿಚಿತ್ರ ಅಚ್ಚರಿ ಸಂಪ್ರದಾಯ

ಮುಂಜಾನೆ ಮನೆಗೆ ನುಗ್ಗಿ ಪುಣೆ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Duleep trophy

Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ? 

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Duleep trophy

Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ? 

IPL 2025: ಡೆಲ್ಲಿ ತಂಡದಲ್ಲೇ ಉಳಿಯಲಿದ್ದಾರೆ ಪಂತ್‌

IPL 2025: ಡೆಲ್ಲಿ ತಂಡದಲ್ಲೇ ಉಳಿಯಲಿದ್ದಾರೆ ಪಂತ್‌

Hardik Pandya: ರಣಜಿ ಕ್ರಿಕೆಟ್‌ ಆಡಲು ಹಾರ್ದಿಕ್‌ ಪಾಂಡ್ಯ ಸಿದ್ಧತೆ

Hardik Pandya: ರಣಜಿ ಕ್ರಿಕೆಟ್‌ ಆಡಲು ಹಾರ್ದಿಕ್‌ ಪಾಂಡ್ಯ ಸಿದ್ಧತೆ

Harmanpreet Singh: ವರ್ಷದ ಆಟಗಾರ ಪ್ರಶಸ್ತಿಗೆ ಹರ್ಮನ್‌ಪ್ರೀತ್‌ ಹೆಸರು

Harmanpreet Singh: ವರ್ಷದ ಆಟಗಾರ ಪ್ರಶಸ್ತಿಗೆ ಹರ್ಮನ್‌ಪ್ರೀತ್‌ ಹೆಸರು

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಗಂಗೊಳ್ಳಿ ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು?

Theft; ಗಂಗೊಳ್ಳಿ ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು?

Development of 2-dose vaccine for HIV prevention: MIT

HIV vaccine; ಎಚ್‌ಐವಿ ತಡೆಗೆ 2 ಡೋಸ್‌ ಲಸಿಕೆ ಅಭಿವೃದ್ಧಿ: ಎಂಐಟಿ

India’s first bullet train to be made in Bangalore?

Bullet Train; ಬೆಂಗಳೂರಿನಲ್ಲೇ ತಯಾರಾಗಲಿದೆ ದೇಶದ ಮೊದಲ ಬುಲೆಟ್‌ ರೈಲು?

Ma’nene; ಪ್ರತಿ ವರ್ಷ ಶ*ವಗಳಿಗೆ ವಿಶಿಷ್ಟ ಗೌರವ!: ಅಚ್ಚರಿಗೊಳಪಡಿಸುವ ಸಂಪ್ರದಾಯ

Ma’nene;ಸ್ಮಶಾನದಲ್ಲಿದ್ದ ಶವ ಮನೆಗೆ ತಂದು ಸಂಭ್ರಮಿಸ್ತಾರೆ! ಇದು ವಿಚಿತ್ರ ಅಚ್ಚರಿ ಸಂಪ್ರದಾಯ

ಮುಂಜಾನೆ ಮನೆಗೆ ನುಗ್ಗಿ ಪುಣೆ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.