ಮತಾಂತರ ಈಗ ಉದ್ಯಮವಾಗಿದೆ: ಸುರೇಶ್ ಕುಮಾರ್


Team Udayavani, Dec 24, 2021, 8:38 AM IST

suresh-kumar-s

ಬೆಂಗಳೂರು: ಮತಾಂತರ ಮಾಡುವುದು ಮೂಲಭೂತ ಹಕ್ಕಲ್ಲ ಎಂದು ನ್ಯಾಯಾಲಯಗಳು ಸ್ಪಷ್ಟಪಡಿಸಿವೆ. ಆದರೆ ಮತಾಂತರ ಎಂಬುದು ನಮ್ಮ ನಡುವೆ ಒಂದು ಉದ್ಯಮವಾಗಿ ಇರುವುದು ವಾಸ್ತವ ಸಂಗತಿ ಎಂದು ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.

ಮತಾಂತರ ನಿಷೇಧ ಕಾಯ್ದೆ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಅವರು, ಬಲಂತದ ಮತಾಂತರದ ಪರಿಣಾಮಗಳ ಬಗ್ಗೆ ವಿವರಿಸಿದ್ದಾರೆ.

ಸುರೇಶ್ ಕುಮಾರ್ ಅವರ ಪೋಸ್ಟ್ ಇಲ್ಲಿದೆ.

ಬಹುಚರ್ಚಿತ, ಬಹುನಿರೀಕ್ಷಿತ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ, 2021 ಇಂದು ಕರ್ನಾಟಕ ವಿಧಾನಸಭೆಯಲ್ಲಿ ಅನುಮೋದನೆ ಗೊಂಡಿತು. ವಿಧೇಯಕದ ಮೇಲಿನ ಚರ್ಚೆಯಲ್ಲಿ ಗೃಹಸಚಿವ ಅರಗ ಜ್ಞಾನೇಂದ್ರ, ಕಾನೂನು ಸಚಿವ ಮಾಧುಸ್ವಾಮಿ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಜೆಡಿಎಸ್ ನಾಯಕ ಬಂಡೆಪ್ಪ ಕಾಶಂಪುರ್, ಕಾಂಗ್ರೆಸ್ ಸದಸ್ಯ ಕೆಜೆ ಜಾರ್ಜ್, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಜೆಡಿಎಸ್ ನಾಯಕ ಎಚ್ ಡಿ ರೇವಣ್ಣ ಹಾಗೂ ಬಿಜೆಪಿ ಸದಸ್ಯ ಗೂಳಿಹಟ್ಟಿ ಶೇಖರ್ ಭಾಗವಹಿಸಿದ್ದರು.

ಗೂಳಿಹಟ್ಟಿ ಶೇಖರ್ ರವರ ತಾಯಿಯ ಮತಾಂತರ ಪ್ರಯತ್ನ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಭಾರಿ ಚರ್ಚೆಯಾಗಿದ್ದು ನಮಗೆಲ್ಲಾ ನೆನಪಿದೆ.

ಇಂದು ಮಾತನಾಡಲು ಅವಕಾಶ ಕೋರಿದ್ದರೂ ಸಹ ಸಮಯದ ಕೊರತೆ ಕಾರಣ ನನ್ನಂತಹ ಇನ್ನೂ ಕೆಲವು ಸದಸ್ಯರಿಗೆ ಮಾತನಾಡಲು ಅವಕಾಶ ಸಿಗಲಿಲ್ಲ. ಆದ್ದರಿಂದ ನಾನು ಮಾತನಾಡಬೇಕೆಂದುಕೊಂಡಿದ್ದ ಕೆಲವು ವಿಚಾರಗಳನ್ನು ಇಲ್ಲಿ ಹಂಚಿಕೊಳ್ಳುತ್ತಿದ್ದೇನೆ.

ಇದನ್ನೂ ಓದಿ:ಆಫ್ ಲೈನ್‌ನಲ್ಲಿ ಕಾನೂನು ಪರೀಕ್ಷೆ: ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ಮತಾಂತರ ಎಂಬುದು ನಮ್ಮ ನಡುವೆ ಒಂದು ಉದ್ಯಮವಾಗಿ ಇರುವುದು ವಾಸ್ತವ ಸಂಗತಿ. ಮತಾಂತರ ಮಾಡುವುದು ಮೂಲಭೂತ ಹಕ್ಕಲ್ಲ ಎಂದು ನ್ಯಾಯಾಲಯಗಳು ಸ್ಪಷ್ಟಪಡಿಸಿವೆ.

ವಿವಿಧ ರೀತಿಯ ಆಕರ್ಷಣೆ ಮತ್ತು ಆಮಿಷಗಳ ಮೂಲಕ ಅಮಾಯಕ ಜನರನ್ನು ಸೆಳೆದು ಮತಾಂತರ ಮಾಡುತ್ತಿರುವುದು ಎಲ್ಲರ ಗಮನಕ್ಕೆ ಬಂದಿದೆ.

ನಾನು ಮಾತನಾಡಿಸಿರುವ ಅನೇಕ ಶಾಸಕರುಗಳು ತಮ್ಮ ಕ್ಷೇತ್ರಗಳಲ್ಲಿ ಈ ಮತಾಂತರದ ಭಾರಿ ಪಿಡುಗು ಇರುವುದನ್ನು ವಿವರಿಸಿದ್ದಾರೆ.

ಈ ಸಂದರ್ಭದಲ್ಲಿ ಖ್ಯಾತ ಚಿಂತಕ ಲೇಖಕ ಅರುಣ್ ಶೌರಿ ಯವರು ಈ ಮತಾಂತರದ ಕುರಿತು ಬರೆದಿರುವ  ” “Harvesting our Souls” ಪುಸ್ತಕ ಉಲ್ಲೇಖಾರ್ಹ. ಭಾರತವನ್ನು  ಮತಾಂತರ ಕಾರ್ಯಕ್ಕಾಗಿ ಯಾವ ರೀತಿ ಉಪಯೋಗಿಸಿಕೊಳ್ಳಲಾಗುತ್ತಿದೆ ಎಂಬುದನ್ನು ಸವಿಸ್ತಾರವಾಗಿ ಅರುಣ್ ಶೌರಿಯವರು ಪುಸ್ತಕದಲ್ಲಿ ವಿವರಿಸಿದ್ದಾರೆ.

ಮತ್ತೊಂದು ಧರ್ಮ ಸ್ವೀಕಾರ (Embracing another Religion) ಮತ್ತು ಮತಾಂತರ (getting converted) ಗಳ ನಡುವೆ ಗಮನಾರ್ಹ ವ್ಯತ್ಯಾಸವಿದೆ. ಮತ್ತೊಂದು ಧರ್ಮದ ಸಿದ್ಧಾಂತವನ್ನು ತಿಳಿದುಕೊಂಡು ಒಪ್ಪಿಕೊಂಡು ಆ ಧರ್ಮದ ಪಾಲನೆ ಮಾಡುವುದಕ್ಕೂ ಹಾಗೂ ಯಾರದೋ ಒತ್ತಡ, ಆಕರ್ಷಣೆ ಗೆ ಬಲಿಯಾಗಿ ಮತ್ತೊಂದು ಮತಕ್ಕೆ ಪರಿವರ್ತನೆಯಾಗುವುದರ ನಡುವೆ ತೀವ್ರ ವ್ಯತ್ಯಾಸವಿದೆ.

ನಿನ್ನೆ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆ ಯೊಂದರಲ್ಲಿ ಬೆಂಗಳೂರಿನ ಆರ್ಚ್ ಬಿಷಪ್ ಶ್ರೀ ಪೀಟರ್ ಮಷಾಡೋ ಹೇಳಿರುವ ಮಾತು ಗಮನಾರ್ಹ. ” ಈ ಮಸೂದೆಯಿಂದ ಕ್ರೈಸ್ತರ ಖಾಸಗಿ ಬದುಕಿಗೆ ಧಕ್ಕೆಯಾಗಲಿದೆ. ಬಡವರ ಮಕ್ಕಳು ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗುವರು” ಎಂದು ಆರ್ಚ್ ಬಿಷಪ್ ಹೇಳಿರುವ ಅರ್ಥವೇನು? ಕಾಯಿಲೆ ಗುಣಪಡಿಸುವ ನೆಪದಲ್ಲಿ, ಅನೇಕರ ಮತಾಂತರ ವಾಗಿರುವುದು ಎಲ್ಲರ ಗಮನದಲ್ಲಿದೆ. ಹಾಗೆಯೇ ಶಿಕ್ಷಣ ಕೊಡುವ ನೆಪದಲ್ಲಿ ಮತಾಂತರ ಮಾಡುತಿದ್ದದಕ್ಕೆ ಈ ವಿಧೇಯಕ ಅಡ್ಡಿ ಆಗುತ್ತದೆ ಎಂದರ್ಥವೇ?

ಈ ಮತಾಂತರದ ಪಿಡುಗು ಹೆಚ್ಚಾಗಿ ತಾಂಡಾಗಳಲ್ಲಿ, ಬಡವರು ವಾಸಿಸುವ ಸ್ಥಳಗಳಲ್ಲಿ ವ್ಯಾಪಕವಾಗಿ ನಡೆದಿದೆ. ಅದರಲ್ಲಿಯೂ ಮಹಿಳೆಯರು ಸೇರಿದಂತೆ ಮುಗ್ಧಜನರ ಮತಾಂತರದ ವ್ಯಾಪಕ ಅಭಿಯಾನ ನಿರಂತರವಾಗಿ ನಡೆದುಕೊಂಡು ಬಂದಿದೆ. ಈ ಮತಾಂತರ ಆದ ತಕ್ಷಣ ನಮ್ಮ ಸಂಸ್ಕೃತಿಯನ್ನು ಮರೆಸುವ ಕಾರ್ಯ ನಡೆದಿದೆ.

ಪ್ರೀತಿಸುವ ಹೆಸರಿನಲ್ಲಿ (love ಮಾಡುವ ನಾಟಕ ಮಾಡಿ)  ವ್ಯಕ್ತಿಗಳನ್ನು ಮತಾಂತರ ಮಾಡುತ್ತಿರುವುದು ಎಲ್ಲರ ಗಮನಕ್ಕೆ ಬಂದಿದೆ. ಆದ್ದರಿಂದ ಈ ಮತಾಂತರ ಎಂಬ ಉದ್ಯಮಕ್ಕೆ ಕಡಿವಾಣ ಹಾಕಲು ಈ ಮಸೂದೆ ಅತ್ಯಗತ್ಯವಾಗಿದೆ. ಈ ವಿಧೇಯಕ ಯಾವ ಧರ್ಮದ ವಿರುದ್ಧವೂ ಅಲ್ಲ ಎಂಬುದನ್ನು ಮತ್ತೆ ಮತ್ತೆ ಸ್ಪಷ್ಟಪಡಿಸಲಾಗಿದೆ.

ಯಾರು ಮತಾಂತರ ಮಾಡುವುದು ತಮ್ಮ ದಂಧೆಯನ್ನಾಗಿಸಿಕೊಂಡಿದ್ದಾರೋ ಅವರಿಗೆ ಬಗ್ಗೆ ವಿರೋಧ ಬರುವುದು ಸಹಜ. ಯಾರು ಪ್ರೀತಿಸುವ ನಾಟಕ ಮಾಡಿ ಮತಾಂತರ ಮಾಡುತ್ತಿದ್ದಾರೋ, ಊರಿಗೆ ಈ ವಿಧೇಯಕದ ಬಗ್ಗೆ ವಿರೋಧ ಬರುವುದು ಸಹಜ.

ಆದರೆ ತಮ್ಮ ತಮ್ಮ ಧರ್ಮಗಳನ್ನು ಅವರದೇ ಶ್ರದ್ಧೆಯಿಂದ ಅನುಸರಿಸುತ್ತಾ ಪಾಲನೆ ಮಾಡುತ್ತಿರುವವರಿಗೆ ಈ ವಿಧೇಯಕದ ಯಾವುದೇ ತೊಂದರೆಯಾಗುವುದಿಲ್ಲ. ಯಾರದೇ ಖಾಸಗಿ ಬದುಕಿಗೆ ಈ ವಿಧೇಯಕದಿಂದ ಅಡ್ಡಿ ಆತಂಕ ಇರುವುದಿಲ್ಲ.

ಇದರೊಂದಿಗೆ ನಮ್ಮ ಸಮಾಜದಲ್ಲಿರುವ ಅಸ್ಪೃಶ್ಯತೆ ಎಂಬ ಅಮಾನವೀಯ ವಿಕೃತಿಗೂ ಕೊನೆ ಹಾಡುವುದು ಅತ್ಯವಶ್ಯ ಕ್ರಮವಾಗಿದೆ. ಅದಕ್ಕೆ ನಾವೆಲ್ಲರೂ ಶ್ರಮಿಸಲು ಬೇಕು. “ಅಸ್ಪೃಶ್ಯತೆ ಅಪರಾಧವಲ್ಲದಿದ್ದರೂ ಇನ್ಯಾವುದು ಅಪರಾಧವಲ್ಲ” ಎಂಬುದು ನಮಗೆ ವೇದ್ಯವಾದ ಬೇಕು.

ಈ ವಿಧೇಯಕವನ್ನು ಸಿದ್ಧಗೊಳಿಸಿ ಸಚಿವ ಸಂಪುಟದ ಮುಂದೆ ಇಡುವ ಅನುಮೋದನೆ ದೊರಕಿದ್ದು 2016 ರಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ. ಸ್ವತಃ ಮುಖ್ಯಮಂತ್ರಿಗಳೇ ಸಚಿವ ಸಂಪುಟದ ಮುಂದೆ ಇಡಲು ಆದೇಶಿಸಿದ್ದರು. ಆದರೆ ಏನೋ ಕಾರಣಕ್ಕಾಗಿ ಅದನ್ನು ಆಗ ಇಡಲಿಲ್ಲ.  ಅದೇ ವಿಧೇಯಕವನ್ನು ಇನ್ನಷ್ಟು ಮಾರ್ಪಾಡು ಮಾಡಿ ಈಗ ವಿಧಾನಸಭೆಯ ಮುಂದೆ ತಂದು, ಚರ್ಚೆ ಮಾಡಿದ ನಂತರ ಸದನ ಅನುಮೋದನೆ ನೀಡಿದೆ.

ಇದೀಗ ಈ ವಿಧೇಯಕ ವಿಧಾನಪರಿಷತ್ತಿನಲ್ಲಿ ಯೂ ಅನುಮೋದನೆಗೆ ಕಾದಿದೆ.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.