ಉತ್ತರಪ್ರದೇಶ: ಐಟಿ ದಾಳಿ-ಈ ಉದ್ಯಮಿ ಮನೆಯಲ್ಲಿ ಸಿಕ್ಕ ಹಣ ಎಣಿಸಲು 3 ಯಂತ್ರ ಬಳಕೆ!
ನಗದು ಲೆಕ್ಕಹಾಕಲು ಮೂರು ಮೆಷಿನ್ ಗಳನ್ನು ತಂದಿಟ್ಟಿರುವುದು ಮತ್ತೊಂದು ಫೋಟೋದಲ್ಲಿ ಸೆರೆಯಾಗಿದೆ.
Team Udayavani, Dec 24, 2021, 11:51 AM IST
ಲಕ್ನೋ:ಸುಗಂಧ ದ್ರವ್ಯ ಇಂಡಸ್ಟ್ರಿಯ ಮಾಲೀಕ, ಉದ್ಯಮಿ ಕಾನ್ಪುರ್ ಮೂಲದ ಪಿಯೂಷ್ ಜೈನ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಶುಕ್ರವಾರ (ಡಿಸೆಂಬರ್ 24) ಬೆಳಗ್ಗೆ ದಾಳಿ ನಡೆಸಿದ್ದು, ಬರೋಬ್ಬರಿ 150 ಕೋಟಿ ರೂಪಾಯಿ ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಭಾರತ: 17 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಈವರೆಗೆ 358 ಒಮಿಕ್ರಾನ್ ಪ್ರಕರಣ ಪತ್ತೆ
ಮನೆಯ ವಾರ್ಡ್ ರೋಬ್ಸ್ ಗಳಲ್ಲಿ ತುಂಬಿಸಿಟ್ಟಿರುವ ರಾಶಿ, ರಾಶಿ ಹಣದ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಣವನ್ನು ಪ್ಲಾಸ್ಟಿಕ್ ಕವರ್ ಒಳಗಡೆ ಸುತ್ತಿಟ್ಟು, ಹಳದಿ ಟೇಪ್ ನಿಂದ ಸುತ್ತಿಡಲಾಗಿದೆ ಎಂದು ವರದಿ ತಿಳಿಸಿದೆ.
ದಾಳಿ ನಡೆಸಿದ ನಂತರ ವಶಪಡಿಸಿಕೊಂಡ ಹಣವನ್ನು ಆದಾಯ ತೆರಿಗೆ ಮತ್ತು ಜಿಎಸ್ ಟಿ ಅಧಿಕಾರಿಗಳು ರೂಂನ ನಡುವೆ ರಾಶಿ ಹಾಕಿದ್ದು, ನಗದು ಲೆಕ್ಕಹಾಕಲು ಮೂರು ಮೆಷಿನ್ ಗಳನ್ನು ತಂದಿಟ್ಟಿರುವುದು ಮತ್ತೊಂದು ಫೋಟೋದಲ್ಲಿ ಸೆರೆಯಾಗಿದೆ.
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದು, ಶುಕ್ರವಾರವೂ ನೋಟುಗಳ ಲೆಕ್ಕಾಚಾರ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ. ಆದಾಯ ತೆರಿಗೆ ಅಧಿಕಾರಿಗಳು ಜೈನ್ ನಿವಾಸ ಇರುವ ಉತ್ತರಪ್ರದೇಶದ ಕಾನ್ಪುರ್, ಮುಂಬಯಿ ಹಾಗೂ ಗುಜರಾತ್ ನಲ್ಲಿಯೂ ದಾಳಿ ನಡೆಸಿರುವುದಾಗಿ ವಿವರಿಸಿದೆ.
ನಕಲಿ ಬಿಲ್ ಮೂಲಕ ಈ ಹಣವನ್ನು ಲಾರಿಗಳಲ್ಲಿ ಸಾಗಿಸಲಾಗುತ್ತಿದ್ದು, ನಕಲಿ ಕಂಪನಿಯ ಹೆಸರಿನಲ್ಲಿ ಬಿಲ್ ಮಾಡಿ ಹಣವನ್ನು ಅಕ್ರಮವಾಗಿ ಸಾಗಿಸಿ, ಜಿಎಸ್ ಟಿ ಪಾವತಿಯಿಂದ ನುಣುಚಿಕೊಂಡಿರುವುದಾಗಿ ಜಿಎಸ್ ಟಿ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ
Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.