‘ಕ್ಯಾಪಿಟಲ್ ಸಿಟಿ’ಯಲ್ಲಿ ಹೊಡೆದಾಟ
Team Udayavani, Dec 24, 2021, 4:06 PM IST
“ಕ್ಯಾಪಿಟಲ್ ಸಿಟಿ’- ಇದು ಅನಂತ ರಾಜು ನಿರ್ದೇಶನದ ಹೊಸ ಚಿತ್ರದ ಹೆಸರು. ಇತ್ತೀಚೆಗೆ ಈ ಚಿತ್ರದ ಮುಹೂರ್ತ ನಡೆದಿದೆ. ಇನ್ಫಿನಿಟಿ ಕ್ರಿಯೇಶನ್ಸ್ ಬ್ಯಾನರ್ನಡಿ ಅಡಿಯಲ್ಲಿ 23 ಜನ ಸ್ನೇಹಿತರು ಸೇರಿ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಇದರಲ್ಲಿ ಎಂಟು ಮಂದಿ ಬಣ್ಣ ಹಚ್ಚುತ್ತಿದ್ದಾರೆ.
ಬೆಂಗಳೂರಿನಲ್ಲಿ ನಡೆಯುವ ಭೂಗತ ಲೋಕದ ಚಟುವಟಿಕೆಗಳ ಜೊತೆಗೆ ನಾಯಕ ಮತ್ತು ಖಳನಾಯಕನ ನಡುವೆ ನಡೆಯುವ ದ್ವೇಷದ ಕಥೆಯನ್ನು ಈ ಚಿತ್ರದಲ್ಲಿ ಹೇಳಲಿದ್ದಾರಂತೆ. ಜೊತೆಗೆ ಹಾಸ್ಯ ಸನ್ನಿವೇಶಗಳು, ಸುಂದರ ಲವ್ ಟ್ರ್ಯಾಕ್ ಸಹ ಇರಲಿದೆ. ತಪ್ಪು ಮಾಡಿದವನು ಶಿಕ್ಷೆ ಅನುಭವಿಸಲೇಬೇಕು. ಮಹಾಭಾರತದಲ್ಲಿ ತಪ್ಪು ನಡೆಯುತ್ತಿರುವಾಗ ಕೃಷ್ಣ ಬರುವಂತೆ, ಆಧುನಿಕ ಯುಗದಲ್ಲಿ ತಪ್ಪುಗಳು ನಡೆಯುವಾಗ ನಾಯಕನ ಆಗಮನವಾಗುತ್ತದೆ. ಅದು ಏನೆಂಬುದನ್ನು ಸಿನಿಮಾದಲ್ಲಿ ನೋಡಬೇಕು ಎನ್ನುವುದು ನಿರ್ದೇಶಕರ ಮಾತು.
ಇದನ್ನೂ ಓದಿ:ರಾಷ್ಟ್ರಪ್ರಶಸ್ತಿ ಪುರಸ್ಕೃತ ಮಲಯಾಳಂ ಸಿನಿಮಾ ನಿರ್ದೇಶಕ ಸೇತುಮಾಧವನ್ ಇನ್ನಿಲ್ಲ
ಈ ಹಿಂದೆ ಮೂರು ಚಿತ್ರಗಳಲ್ಲಿ ನಟಿಸಿರುವ ರಾಜೀವ್ ಈ ಚಿತ್ರದ ನಾಯಕ. ಇವರ ಪಾತ್ರ ಏನೆಂಬುದು ವಿರಾಮದ ನಂತರ ತಿಳಿಯುತ್ತದೆಯಂತೆ. ಕೃತಿಕಾ ನಾಯಕಿ. ಆಕೆಯದು ಚಿತ್ರದಲ್ಲಿ ಮುಗ್ಧ ಹುಡುಗಿ ಪಾತ್ರ. ಡಾನ್ ಪಾತ್ರದಲ್ಲಿ ರವಿಶಂಕರ್, ಎಸಿಪಿಯಾಗಿ ಶರತ್ ಲೋಹಿತಾಶ್ವ, ಶಾಸಕರಾಗಿ ಶ್ರೀಧರ್ ಕಾಣಿಸಿಕೊಳ್ಳಲಿದ್ದಾರೆ. ರಾಮ್ ನಾರಾಯಣ್ ಬರೆದಿರುವ ನಾಲ್ಕು ಹಾಡುಗಳಿಗೆ ನಾಗು.ಎಸ್ ಸಂಗೀತ ಸಂಯೋಜಿಸುತ್ತಿದ್ದಾರೆ. ದೀಪು ಛಾಯಾಗ್ರಹಣ, ಕಿಶೋರ್ ನೃತ್ಯ ನಿರ್ದೇಶನ, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.