ನಾಳೆ ರಾಜ್ಯ ಜೆಡಿಯು ಸರ್ವ ಸದಸ್ಯರ ಸಭೆ


Team Udayavani, Dec 25, 2021, 12:04 PM IST

1-adsa

ದಾವಣಗೆರೆ: ರಾಜ್ಯ ಸಂಯುಕ್ತ ಜನತಾದಳದ ಸರ್ವ ಸದಸ್ಯರ ಸಭೆ ಡಿ. 26 ರಂದು ದಾವಣಗೆರೆಯ ಶೋವೆನ್‌ ಹೋಟೆಲ್‌ ಸಭಾಂಗಣದಲ್ಲಿ ನಡೆಯಲಿದೆ ಎಂದು ರೈತ ವಿಭಾಗದ ರಾಜ್ಯ ಅಧ್ಯಕ್ಷ ಬಿ.ಕೆ. ಶ್ರೀನಿವಾಸ್‌ ತಿಳಿಸಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಸಂಯುಕ್ತ ಜನತಾದಳವನ್ನ ಹೆಚ್ಚಿನ ಮಟ್ಟದಲ್ಲಿ ಸಂಘಟಿಸಿ, ಸ್ವತ್ಛ ಕರ್ನಾಟಕ ನಿರ್ಮಾಣ, ಭ್ರಷ್ಟಾಚಾರರಹಿತ, ಉತ್ತಮ ಆಡಳಿತ ನೀಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಹಲವಾರು ವಿಷಯಗಳ ಬಗ್ಗೆ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯಲಿದೆ ಎಂದರು.

ಭಾನುವಾರ ಬೆಳಗ್ಗೆ 10.30ಕ್ಕೆ ಪಕ್ಷದ ರಾಜ್ಯ ಅಧ್ಯಕ್ಷ, ಮಾಜಿ ಶಾಸಕ ಮಹಿಮ ಜೆ. ಪಟೇಲ್‌ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಎಲ್ಲ ಜಿಲ್ಲೆಗಳ ಸಂಚಾಲಕರು, ವಿವಿಧ ಘಟಕಗಳ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಒಳಗೊಂಡಂತೆ 400-500 ಜನರು ಭಾಗವಹಿಸುವರು ಎಂದು ತಿಳಿಸಿದರು.

ರಾಜ್ಯ ಕಂಡಂತಹ ಮಹಾನ್‌ ಮುತ್ಸದ್ದಿಗಳು, ಮಾಜಿ ಮುಖ್ಯಮಂತ್ರಿಗಳಾದ ಜೆ.ಎಚ್‌. ಪಟೇಲ್‌, ರಾಮಕೃಷ್ಣ ಹೆಗಡೆಯವರ ತತ್ವಾದರ್ಶ, ಸಿದ್ಧಾಂತಗಳ ನೆಲೆಯಲ್ಲಿ ಸಂಯುಕ್ತ ಜನತಾದಳ ಕೆಲಸ ಮಾಡುತ್ತಿದೆ. ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಸರ್ಕಾರಗಳ ಆಡಳಿತದಿಂದ ರೋಸಿ ಹೋಗಿರುವ ರಾಜ್ಯದ ಜನರು ಪರ್ಯಾಯ ಬಯಕೆ, ನಿರೀಕ್ಷೆಯಲ್ಲಿದ್ದಾರೆ. ಆ ನಿರೀಕ್ಷೆಗೆ ತಕ್ಕಂತೆ ಸಂಯುಕ್ತ ಜನತಾದಳ ಮುಂದಿನ ದಿನಗಳಲ್ಲಿ ಕೆಲಸ ಮಾಡಲಿದೆ. ಮತ್ತೂಮ್ಮೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಪಕ್ಷ ಸಂಘಟನೆ, ಬಲವರ್ಧನೆಗೆ ಪ್ರಾಮಾಣಿಯ ಪ್ರಯತ್ನ ಮಾಡಲಿದೆ. ಅದರ ಮೊದಲ ಭಾಗವಾಗಿ ದಾವಣಗೆರೆಯಲ್ಲಿ ಸರ್ವ ಸದಸ್ಯರ ಸಭೆ ನಡೆಯುತ್ತಿದೆ ಎಂದು ತಿಳಿಸಿದರು.

ಪಕ್ಷದ ಜಿಲ್ಲಾ ಸಂಚಾಲಕ ಮಂಜುನಾಥ ಸುಗ್ಗೇರ್‌ ಮಾತನಾಡಿ, ರಾಜ್ಯದಲ್ಲಿ ಮತ್ತೂಮ್ಮೆ ಜೆಡಿಯುನ ಪ್ರಬಲ ಸಂಘಟನೆ, ಬಲವರ್ಧನೆಗಾಗಿ ಕೆಆರ್‌ಎಸ್‌, ಕೆಲ ರೈತ ಸಂಘಗಳು ಜೊತೆಯಾಗಿವೆ. ಇನ್ನುಳಿದ ರಾಜಕೀಯ ಪಕ್ಷಗಳ ನಡುವೆ ಚರ್ಚೆ ನಡೆಸಲಾಗುವುದು. ಮುಂದಿನ ಜಿಲ್ಲಾ, ತಾಲೂಕು ಪಂಚಾಯತಿ, ನಗರಸಭೆ, ನಗರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಾಗುವುದು. ರಾಜ್ಯದಲ್ಲಿ ಮತ್ತೆ ಸಂಯುಕ್ತ ಜನತಾದಳ ನೇತೃತ್ವದ ಸರ್ಕಾರ ರಚನೆಗೆ ಎಲ್ಲ ಪ್ರಯತ್ನ ನಡೆಸಲಾಗುವುದು ಎಂದು ತಿಳಿಸಿದರು.

ರೈತ ವಿಭಾಗದ ಮಹಿಳಾ ಮುಖಂಡೆ ಎಂ.ಡಿ. ಕಲಾವತಿ ಮಾತನಾಡಿ, ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ರೈತಾಪಿ ಮೂಲದ ಮಹಿಳಾ ಮುಖ್ಯಮಂತ್ರಿಯನ್ನಾಗಿಸುವ ನಿಟ್ಟಿನಲ್ಲಿ ಜೆಡಿಯು ಕೆಲಸ ಮಾಡುತ್ತಿದೆ ಎಂದರು. ಪಕ್ಷದ ಮುಖಂಡರಾದ ಗಂಗಾಧರ್‌, ಮಂಜುನಾಥ್‌ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.