IT ದಾಳಿ: 36 ಗಂಟೆಗಳಿಂದ 5 ಯಂತ್ರಗಳ ಮೂಲಕ ಎಣಿಸಿದರೂ ಮುಗಿಯದ ನೋಟುಗಳು!

ಆ ಕಂತೆಗಳನ್ನು ಕೆಳಕ್ಕೆ ಸುರಿದು ನೆಲದಲ್ಲಿ ಕುಳಿತು ಕೈಯ್ಯಲ್ಲೇ ನೋಟು ಎಣಿಸ ತೊಡಗಿದರು.

Team Udayavani, Dec 25, 2021, 12:41 PM IST

IT ದಾಳಿ: 36 ಗಂಟೆಗಳಿಂದ 5 ಯಂತ್ರಗಳ ಮೂಲಕ ಎಣಿಸಿದರೂ ಮುಗಿಯದ ನೋಟುಗಳು!

ಲಕ್ನೋ: ಸುಮಾರು 36ಗಂಟೆಗಳಿಂದ ಐದು ಎಣಿಕೆ ಯಂತ್ರದ ಮೂಲಕ ಐಟಿ ಅಧಿಕಾರಿಗಳು ನೋಟುಗಳನ್ನು ಎಣಿಸುತ್ತಿದ್ದರೂ ಇನ್ನೂ ಎಣಿಕೆ ಮುಗಿದಿಲ್ಲ! ಉತ್ತರಪ್ರದೇಶದ ಕಾನ್ಪುರದ ಸುಗಂಧದ್ರವ್ಯ ವ್ಯಾಪಾರಿ ಮನೆಯಲ್ಲಿ ಸಿಕ್ಕಿರುವ ಕಂತೆ ಕಂತೆ ನೋಟು ಗಳನ್ನು ನೋಡಿ ಅಧಿಕಾರಿಗಳೇ ದಂಗಾಗಿದ್ದಾರೆ. ಆದಾಯ ತೆರಿಗೆ ಇಲಾಖೆ ಮತ್ತು ಜಿಎಸ್‌ಟಿ ಗುಪ್ತಚರ ಪ್ರಧಾನ ನಿರ್ದೇಶನಾಲಯದ ಜಂಟಿ  ತಂಡವು ಗುರುವಾರ ಆರಂಭಿಸಿದ ನೋಟುಗಳ ಲೆಕ್ಕಾಚಾರ ಶನಿವಾರದವರೆಗೂ ಮುಂದುವರಿದಿದ್ದು, ಒಟ್ಟಾರೆ 24 ಗಂಟೆಗಳ ಕಾರ್ಯಾಚರಣೆಯಲ್ಲಿ ಭಾರೀ ಮೊತ್ತದ ನಗದು ಪತ್ತೆಯಾಗಿದೆ.

ಇದನ್ನೂ ಓದಿ:ರಾತ್ರಿ ಕರ್ಫ್ಯೂ ಜಾರಿ ಕುರಿತಂತೆ ರವಿವಾರ ಸಭೆಯಲ್ಲಿ ಚರ್ಚೆ: ಸಿಎಂ ಬೊಮ್ಮಾಯಿ

ಕೇಂದ್ರೀಯ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್‌ ಮಂಡಳಿಯ(ಸಿಬಿಐಸಿ) ಇತಿಹಾಸ ದಲ್ಲೇ ಇದೇ ಮೊದಲ ಬಾರಿಗೆ ಇಷ್ಟೊಂದು ದೊಡ್ಡ ಮೊತ್ತ ಪತ್ತೆಯಾಗಿದೆ ಎಂದು ಮುಖ್ಯಸ್ಥ ವಿವೇಕ್‌ ಜೋಹ್ರಿ ಹೇಳಿದ್ದಾರೆ.

ಐಟಿ ಅಧಿಕಾರಿಗಳು ಶನಿವಾರ 12.50ರ ವೇಳೆಗೆ ನೀಡಿರುವ ಮಾಹಿತಿ ಪ್ರಕಾರ, ಪಿಯೂಷ್ ಜೈನ್ ಮನೆಯಲ್ಲಿ ಒಟ್ಟು 177.45 ಕೋಟಿ ರೂಪಾಯಿ ವಶಪಡಿಸಿಕೊಳ್ಳಲಾಗಿದೆ. ನೋಟು ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಶೋಧ ಕಾರ್ಯ ಮುಂದುವರಿದಿರುವುದಾಗಿ ತಿಳಿಸಿದೆ.

ಸುಸ್ತಾಗಿ ಎಣಿಕೆ ಯಂತ್ರ ತಂದರು: ಸುಗಂಧ ದ್ರವ್ಯಗಳ ವ್ಯಾಪಾರಿ ಪಿಯೂಷ್‌ ಜೈನ್‌ ಮನೆಯೊಳಗೆ 2 ದೊಡ್ಡ ಕಪಾಟುಗಳಲ್ಲಿ ಪೇಪರ್‌ ಕವರ್‌ನಲ್ಲಿ ಸುತ್ತಿಟ್ಟ ನೋಟುಗಳ ಕಂತೆಗಳನ್ನು ಅಚ್ಚುಕಟ್ಟಾಗಿ ಜೋಡಿಸಿಡಲಾಗಿತ್ತು. ಅಧಿಕಾರಿಗಳು ಆ ಕಂತೆಗಳನ್ನು ಕೆಳಕ್ಕೆ ಸುರಿದು ನೆಲದಲ್ಲಿ ಕುಳಿತು ಕೈಯ್ಯಲ್ಲೇ ನೋಟು ಎಣಿಸ ತೊಡಗಿದರು.

ಹಲವು ಗಂಟೆಗಳ ಕಳೆದರೂ ನೋಟು ಎಣಿಸಿ ಮುಗಿಯುವಂತೆ ಕಾಣಲಿಲ್ಲ. ಸುಸ್ತಾದ ಅಧಿಕಾರಿಗಳು ಕೊನೆಗೆ, 5 ಎಣಿಕೆ ಯಂತ್ರ ತರಿಸಿ ಎಣಿಸತೊಡಗಿದರು. ಸದ್ಯಕ್ಕೆ 150 ಕೋಟಿ ರೂ.ಗಳಿವೆಯೆಂದು ಅಂದಾಜಿಸಲಾಗಿದೆ. ಈ ಮೊತ್ತ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ.

ಅಖೀಲೇಶ್‌ ಆಪ್ತ?: ಜೈನ್‌ ಅವರು ಉತ್ತರ ಪ್ರದೇಶದ ಎಸ್‌ಪಿ ನಾಯಕ ಅಖೀಲೇಶ್‌ ಯಾದವ್‌ ಅವರಿಗೆ ಆಪ್ತರೂ ಆಗಿದ್ದರು. ಇತ್ತೀಚೆಗಷ್ಟೇ “ಸಮಾಜವಾದಿ ಅತ್ತರ್‌’ ಎಂಬ ಹೆಸರಿನಲ್ಲಿ ಸಮಾಜವಾದಿ ಪಾರ್ಟಿ ಪರ್ಫ್ಯೂಮ್‌ ಅನ್ನೂ ಜೈನ್‌ ಪರಿಚಯಿಸಿದ್ದರು.

ಟಾಪ್ ನ್ಯೂಸ್

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ

Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.