![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 25, 2021, 7:23 PM IST
ವಿಜಯಪುರ : ರಾಜ್ಯದ ಬಹುತೇಕ ರೈತರಿಗೆ ತಮ್ಮ ಜಮೀನಿನ ಪಹಣಿ ಹೇಗಿದೆ, ಅದರಲ್ಲೇನಿದೆ ಎಂಬುದೇ ಗೊತ್ತಿಲ್ಲ. ಹೀಗಾಗಿ ನಮ್ಮ ಸರ್ಕಾರ ಬರುವ ಜನವರಿ ತಿಂಗಳಲ್ಲಿ ರಾಜ್ಯದ 40 ಲಕ್ಷ ರೈತರ ಮನೆ ಬಾಗಿಲಿಗೆ ತೆರಳಿ ಉಚಿತವಾಗಿ ಜಮಿನಿನ ಪಹಣಿ ಹಾಗೂ ಭೂಮಿಗೆ ಸಂಬಂಧಿಸಿದ ದಾಖಲೆಗಳನ್ನು ಉಚಿತವಾಗಿ ವಿತರಿಸುವ ಅಭಿಯಾನ ನಡೆಯಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಶನಿವಾರ ಹೇಳಿದರು.
ವಿಜಯಪುರ ಜಿಲ್ಲಾಡಳಿತ ಭವನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪಹಣಿ ಮಾತ್ರವಲ್ಲ ಜಮೀನಿನ ಸಮಗ್ರ ನಕ್ಷೆ, ಪೋಡಿ ಪತ್ರ, ಪಾವತಿ ದಾಖಲೆ ಸೇರಿದಂತೆ ರೈತರ ಜಮೀನಿಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಉಚಿತವಾಗಿ ನೀಡುವ ಅಭಿಯಾನ ರಾಜ್ಯದಾದ್ಯಂದ ಒಂದೇ ದಿನ ನಡೆಯಲಿದೆ ಎಂದರು.
ಕೃಷಿ ಭೂಮಿಯನ್ನು ಕೃಷಿಯೇತರ ಕಾರ್ಯಕ್ಕೆ ಪರಿವರ್ತಿಸುವ ಅರ್ಜಿ ವಿಲೆಗೆ ಇದೀಗ 6-7 ತಿಂಗಳ ಕಳೆದರೂ ಸಾಧ್ಯವಾಗುತ್ತಿಲ್ಲ. ಇದರಿಂದ ಕೈಗಾರಿಕೆ, ಶೈಕ್ಷಣಿಕ ಕಟ್ಟಡಗಳ ನಿರ್ಮಾಣದಂಥ ಕಾರ್ಯಕ್ಕೆ ತೊಡಕಾಗಿ ಪರಿಣಮಿಸಿದೆ. ಇದೀಗ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ನಿಯಮದಲ್ಲಿ ಅತ್ಯಂತ ಸರಳೀಕರಣ ಮಾಡಿದೆ. ಒಂದೇ ದಿನಲ್ಲಿ ಕೃಷಿ ಭೂಮಿಯನ್ನು ಕೃಷಿಯೇತರ ಚಟುವಟಿಕೆಗೆ ಪರಿವರ್ತಿಸುವ ವ್ಯವಸ್ಥೆ ಜಾರಿಗೆ ತಂದಿದ್ದೇವೆ ಎಂದರು.
ಇದಲ್ಲದೇ ಕಂದಾಯ ಇಲಾಖೆಯಲ್ಲಿ ಹೊಸತನಕ್ಕೆ ಯೋಜಿಸಿದ್ದು, ಸಮಗ್ರ ಬದಲಾವಣೆಗೆ ಮುಂದಾಗಿದ್ದೇವೆ. ಈ ಬದಲಾವಣೆ ವಿನೂತನ ಹಾಗೂ ಅತ್ಯಂತ ಸರಳೀಕರಣವಾಗಿರಲಿದೆ ಎಂದರು.
ರಾಜ್ಯದ ಜನರ ಮನೆ ಬಾಗಿಲಿಗೆ ಆಡಳಿತ ಕೊಂಡೊಯ್ಯಲು ಜಿಲ್ಲಾಧಿಕಾರಿಗಳನ್ನು ಹಳ್ಳಿಗಳತ್ತ ಕಳಿಸುತ್ತಿದ್ದೇವೆ. ಹಾಗಂತ ಇದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಂತೆ ಗ್ರಾಮ ವಾಸ್ತವ್ಯವಲ್ಲ. ಬದಲಾಗಿ 24*7 ಜನ ಸೇವೆ ನೀಡುವ ವ್ಯವಸ್ಥೆ ರೂಪಿಸಿದ್ದೇವೆ. ಜಿಲ್ಲಾಧಿಕಾರಿ ಪ್ರತಿ ಮೂರನೇ ಶನಿವಾರ ಹಳ್ಳಿಗೆ ತೆರಳುವ ಜಿಲ್ಲಾಧಿಕಾರಿಗಳು ಗ್ರಾಮೀಣ ಜನರ ಕಂದಾಯ ಇಲಾಖೆಯ ಎಲ್ಲ ಅಗತ್ಯದ ಸೇವೆಗಳನ್ನು ತ್ವರಿತವಾಗಿ ಕಲ್ಪಿಸುವುದಾಗಿದೆ ಎಂದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.