![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 26, 2021, 1:25 PM IST
ಸುರಪುರ: ಇತ್ತೀಚೆಗೆ ಕೊರೊನಾ ರೋಗದಿಂದ ಮೃತಪಟ್ಟವರ ಕುಟುಂಬಗಳಿಗೆ ಶಾಸಕ ರಾಜುಗೌಡ ಸರ್ಕಾರದಿಂದ ಬಿಡುಗಡೆಯಾದ ಪರಿಹಾರದ ಚೆಕ್ ವಿತರಿಸಿದರು.
ನಂತರ ಮಾತನಾಡಿದ ಅವರು, ಮೊದಲ ಹಂತದಲ್ಲಿ 10 ಕುಟುಂಬಗಳಿಗೆ ಚೆಕ್ ನೀಡಲಾಗಿತ್ತು. ಈಗ ಎರಡನೇ ಹಂತದಲ್ಲಿ ಕೆಂಭಾವಿ 2 ಸೇರಿ ಒಟ್ಟು 12 ಕುಟುಂಬಗಳಿಗೆ ಮಂಜೂರಿಯಾಗಿ ಅನುದಾನ ಬಿಡುಗಡೆಯಾಗಿದ್ದು ಚೆಕ್ ವಿತರಿಸಲಾಗುತ್ತಿದೆ ಎಂದರು.
ಕೊರೊನಾಕ್ಕೆ ತುತ್ತಾಗಿ ಕ್ಷೇತ್ರದಲ್ಲಿ ಒಟ್ಟು 67 ಜನ ಮೃತ ಪಟ್ಟಿದ್ದಾರೆ. ಈ ಪೈಕಿ 33 ಕುಟುಂಬಗಳಿಗೆ ಹಣ ಮಂಜೂರಿಯಾಗಿದೆ. ಈ ಕ್ಷೇತ್ರದವರು ಬೇರೆ ಕಡೆ ರೋಗಕ್ಕೆ ತುತ್ತಾಗಿ ಮೃತಪಟ್ಟ ಕುಟುಂಬದವರಿಂದ 34 ವೈಯಕ್ತಿಕ ಅರ್ಜಿ ಸಲ್ಲಿಸಿದ್ದಾರೆ. ಇವರಿಗೆ ಅನುದಾನ ಮಂಜೂರಿಯಾಗಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕುಟುಂಬ ಕಲ್ಯಾಣ ಮತ್ತು ಆರೋಗ್ಯ ಸಚಿವ ಡಾ| ಕೆ. ಸುಧಾಕರ ಅವರೊಂದಿಗೆ ಮಾತನಾಡಿದ್ದು, ಮಂಜೂರಿ ಮಾಡುವ ಭರವಸೆ ನೀಡಿದ್ದಾರೆ ಎಂದು ಹೇಳಿದರು.
ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ ಮಾತನಾಡಿ, 33 ಕುಟುಂಬಗಳ ಪೈಕಿ 24 ಬಿಪಿಎಲ್, 9 ಎಪಿಎಲ್ ಕುಟುಂಬಗಳಿವೆ. ಎಪಿಎಲ್ ಕುಟುಂಬಸ್ಥರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮೆ ಮಾಡಲಾಗಿದೆ. 2 ಬಿಪಿಎಲ್ ಕುಟುಂಬಗಳಿಗೆ ಅನುದಾನ ಬಂದಿಲ್ಲ. ಅವರಿಗೂ ಶೀಘ್ರ ಅನುದಾನ ಬಿಡುಗಡೆಯಾಗಲಿದೆ ಎಂದರು.
ಈ ವೇಳೆ ಶಿರಸ್ತೇದಾರ್ ಸೋಮಶೇಖರ ನಾಯಕ, ಕಂದಾಯ ನಿರೀಕ್ಷಕ ಗುರುಬಸಪ್ಪ ಪಾಟೀಲ, ಗ್ರಾಲೆ ಪ್ರದೀಪ, ಮಲ್ಲಮ್ಮ, ಶಂಕರ, ಭೀಮು ಯಾದವ, ವೆಂಕಟೇಶ ನಾಯಕ, ಧರ್ಮರಾಜ ಬಡಿಗೇರ, ಕೃಷ್ಣಾ ಬಾದ್ಯಾಪುರ ಹೊನ್ನಪ್ಪ ತಳವಾರ, ಅರವಿಂದ ಬಿಲ್ಲವ್ ಸೇರಿದಂತೆ ಇತರರಿದ್ದರು.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.