2024ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನಕ್ಕೆ ಮತ್ತಷ್ಟು ಆಪತ್ತು: ಖರ್ಗೆ
Team Udayavani, Dec 26, 2021, 2:22 PM IST
ಕಲಬುರಗಿ: ಪ್ರಜಾಪ್ರಭುತ್ವ ಮೌಲ್ಯಗಳನ್ನು ಗಾಳಿಗೆ ತೂರುತ್ತಿರುವ ಕೇಂದ್ರ ಸರ್ಕಾರವು ಮತ್ತೆ 2024ರಲ್ಲಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದೇಯಾದರೆ ಸಂವಿಧಾನಕ್ಕೆ ಆಪತ್ತು ಎದುರಾಗಲಿದೆ ಎಂದು ರಾಜ್ಯಸಭಾ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಟೀಕಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2024ರಲ್ಲಿ ಬಹುಮತದೊಂದಿಗೆ ಬಿಜೆಪಿ ಅಧಿಕಾರ ಬಂದರೆ ಸಂವಿಧಾನ ಬದಲಾಯಿಸುವ ಎಲ್ಲ ಪ್ರಯತ್ನ ಬಿಜೆಪಿ ಹೊಂದಿದೆ. ಹೀಗಾಗಿ ಸಂವಿಧಾನ ಬದಲಾಯಿಸುವುದನ್ನು ತಪ್ಪಿಸಲು ಜನರು ಈಗಲಾದರೂ ಎಚ್ಚೆತ್ತುಕೊಳ್ಳುವುದು ಅಗತ್ಯವಾಗಿದೆ ಎಂದು ಖರ್ಗೆ ಹೇಳಿದರು.
ಇದನ್ನೂ ಓದಿ:ವೈಯಕ್ತಿಕ ಸಮಸ್ಯೆಗಳನ್ನು ಮೊದಲು ಹೇಳುವುದೇ ಬೊಮ್ಮಾಯಿಗೆ: ಸಚಿವ ನಿರಾಣಿ
ಬಲವಂತದ ಮತಾಂತರ ತಡೆಯಲು ಈಗಾಗಲೇ ಭಾರತೀಯ ದಂಡ ಸಂಹಿತೆಯಡಿ ಕ್ರಮ ಕೈಗೊಳ್ಳಲು ಅವಕಾಶವಿದೆ. ಇಷ್ಟಿದ್ದರೂ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ ಜಾರಿಗೆ ತರುತ್ತಿರುವುದನ್ನು ನೋಡಿದರೆ ಬಿಜೆಪಿ ತನ್ನ ಅಜೆಂಡಾ ಹೇಗಾದರೂ ಮಾಡಿ ಕಾರ್ಯರೂಪಕ್ಕೆ ತಂದೇ ತರುತ್ತೇವೆ ಎಂಬುದಕ್ಕೆ ಸಾಕ್ಷೀಕರಿಸುವಂತಿದೆ ಎಂದು ಟೀಕಿಸಿದರು.
ಸರ್ಕಾರಿ ಕಾರ್ಯಕ್ರಮಗಳಲ್ಲಿ ಪಕ್ಷದ ಪ್ರಚಾರ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳೊದೊಂದು ಮಾಡೋದು ಇನ್ನೊಂದು. ಸಂಸತ್ ಅಧಿವೇಶನ ನಡೆದಾಗ ಸಂಸತ್ ಗೆ ಬಾರದ ಮೋದಿ ಚುನಾವಣಾ ಪ್ರಚಾರದಲ್ಲಿ 15 ದಿನಗಳಟ್ಟಲೇ ತೊಡಗಿಸಿಕೊಳ್ಳುತ್ತಾರೆ. ಈಗ ಚುನಾವಣಾ ಎದುರಾಗುತ್ತಿರುವುದರಿಂದ ಪ್ರತಿದಿನ ಟಿವಿ ಹಾಗೂ ಮಾಧ್ಯಮಗಳ ಮುಂದೆ ಬರುತ್ತಿದ್ದಾರೆ. ಯಾಕೆ ಲೋಕಸಭೆ ಹಾಗೂ ರಾಜ್ಯಸಭೆಗೇಕೆ ಬಂದು ಹೇಳಲಿಲ್ಲ. ಕೋವಿಡ್ ನಿಯಂತ್ರಣ ನಿಟ್ಟಿನಲ್ಲಿ ಅನೇಕ ರಾಷ್ಟ್ರಗಳು ಕೆಲಸ ಮಾಡುತ್ತಿವೆ. ಈ ಹಿಂದೆ ಕೋವಿಡ್ ಅಲೆಯಲ್ಲಿ ದೇಶದಲ್ಲಿ 50 ಲಕ್ಷ ಜನ ಸಾವನ್ನಪ್ಪಿದ್ದರೂ ನಾಲ್ಕೈದು ಲಕ್ಷ ಎಂಬುದಾಗಿ ತೋರಿಸಲಾಗಿದೆ. ಹೀಗೆ ಮೋದಿ ಆಡಳಿತ ನಡೆಯುತ್ತಿದೆ. ಸರ್ಕಾರಿ ಕಾರ್ಯಕ್ರಮದಲ್ಲಿ ಪಕ್ಷದ ಪ್ರಚಾರ ಮಾಡುವುದು ಹಿಂದೆಂದೂ ಆಗಿಲ್ಲ. ಮೋದಿಯಿಂದ ಇದೆಲ್ಲವೂ ನಡೆಯುತ್ತಿದೆ ಎಂದು ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ
Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ
CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್ ಸೂಪರ್ ಶತಕ; ಡಿಕ್ಲೇರ್ ಘೋಷಿಸಿದ ಭಾರತ
Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…
Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.