ರೈತರ ಅಭ್ಯುದಯಕ್ಕೆ ಪ್ರತ್ಯೇಕ ನಿರ್ದೇಶನಾಲಯ: ಸಿಎಂ


Team Udayavani, Dec 27, 2021, 6:51 AM IST

ರೈತರ ಅಭ್ಯುದಯಕ್ಕೆ ಪ್ರತ್ಯೇಕ ನಿರ್ದೇಶನಾಲಯ: ಸಿಎಂ

ಮೈಸೂರು: ಕೃಷಿ ಮೂಲಕ ರೈತರಿಗೆ ಹೆಚ್ಚಿನ ಆದಾಯ ತರಲು ಹಾಗೂ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿಸುವ ಸಲುವಾಗಿ ಸೆಕೆಂಡರಿ ಅಗ್ರಿಕಲ್ಚರ್‌ ಡೈರೆಕ್ಟೊರೇಟ್‌  (ನಿರ್ದೇಶನಾಲಯ)  ಸ್ಥಾಪಿಸಲಾಗುವುದು ಎಂದು ಸಿಎಂ ಬಸವ ರಾಜ ಬೊಮ್ಮಾಯಿ ತಿಳಿಸಿದರು.

ನಗರದಲ್ಲಿ ರವಿವಾರ ಆಯೋಜಿಸಿದ್ದ ವಿಶ್ವ ರೈತ ದಿನಾಚರಣೆ ಮತ್ತು ರಾಜ್ಯಮಟ್ಟದ ಸಮಾ ವೇಶದಲ್ಲಿ ಮಾತನಾಡಿದ ಅವರು,  ಪ್ರತ್ಯೇಕ ನಿರ್ದೇ ಶನಾಲಯದ   ಮೂಲಕ ಕೃಷಿ ಉತ್ಪನ್ನಗಳಿಂದ ಉಪ ಕೃಷಿ ಉತ್ಪನ್ನ ತಯಾರಿಸಲಾಗುವುದು. ಇದರಿಂದ ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಟಿ ಆಗುತ್ತದೆ. ಒಟ್ಟಾರೆ ರೈತರ ಆದಾಯ ಹೆಚ್ಚುತ್ತದೆ ಎಂದರು.

ರೈತರ ಮಕ್ಕಳ ಕಲಿಕೆಗೆ ಅನು ಕೂಲ ಕಲ್ಪಿಸುವ ವಿದ್ಯಾನಿಧಿ ಯೋಜನೆಯನ್ನು ಗ್ರಾಮೀಣ ಭಾಗದ ಪ್ರೌಢಶಾಲಾ ವಿದ್ಯಾರ್ಥಿನಿಯರಿಗೂ ವಿಸ್ತರಿಸಿ ಅವರು ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸುವುದನ್ನು ತಡೆಯಲಾಗುವುದು ಎಂದರು.

ಸ್ಮರಣ ಸಂಚಿಕೆ ಬಿಡುಗಡೆ ಬಿಡುಗಡೆ, ಸಮ್ಮಾನ:

ಇದೇ ಸಂದರ್ಭ ರೈತ ಧ್ವನಿ ವಿಶೇಷಾಂಕ ಹಾಗೂ ಹಸಿರು ಹೊನ್ನು ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾ ಯಿತು. ಬಳಿಕ ರೈತ ಹೋರಾಟದಲ್ಲಿ 40 ವರ್ಷ ಪೂರೈಸಿದ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್‌ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ವೇದಿಕೆಯಲ್ಲಿದ್ದ ಗಣ್ಯರು ಸಮ್ಮಾನಿಸಿದರು.

ಸುತ್ತೂರುಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಕೇಂದ್ರ ಸರಕಾರದ ರೈತರ ಆದಾಯ ದ್ವಿಗುಣ ಸಮಿತಿಯ ಮುಖ್ಯಸ್ಥ ಅಶೋಕ್‌ ದಳವಾಯಿ, ಪತ್ರಕರ್ತ ಎಚ್‌.ಆರ್‌. ರಂಗನಾಥ್‌, ರೈತ ದಿನಾಚರಣೆ ಸಮಿತಿ ಅಧ್ಯಕ್ಷ ಡಾ| ಎಸ್‌. ಶಿವರಾಜಪ್ಪ ಮುಂತಾದವರಿದ್ದರು.

ಬೆಲೆ ನಿಯಂತ್ರಣವೇ ದೊಡ್ಡ ಸಮಸ್ಯೆ :

ಕೃಷಿ ಬೆಳೆಗಳ ಬೆಲೆ ನಿಯಂತ್ರಣ ಮತ್ತು ಬೆಲೆ ನಿಗದಿ ದೊಡ್ಡ ಸಮಸ್ಯೆ ಯಾಗಿದೆ. ವಿಶ್ವ ವ್ಯಾಪಾರ ಸಂಘಟನೆಗೆ(ಡಬ್ಲ್ಯುಟಿಒ) ಸಹಿ ಹಾಕಿದ ಬಳಿಕ ರೈತರ ಹಣೆಬರಹವೇ ಬದಲಾಗಿದೆ. ಇದರಿಂದ ಜಾರಿಗೆ ಬಂದಿರುವ ಮುಕ್ತ ಮಾರುಕಟ್ಟೆಯಿಂದ ಬೆಲೆ ನಿಯಂತ್ರಣ ಹಕ್ಕನ್ನೇ ಕಳೆದುಕೊಂಡಿದ್ದು, ಎಪಿಎಂಸಿ ಕಾಯ್ದೆ ತರುವ ಮುನ್ನವೇ, ಅಂದರೆ 2007ರಲ್ಲೇ  47 ದೈತ್ಯ ಕಂಪೆನಿ

ಗಳು ಕೃಷಿ ಮಾರುಕಟ್ಟೆಯನ್ನು ಪ್ರವೇಶಿಸಿವೆ. ಇವೆಲ್ಲ ಕೃಷಿ ಸಂಬಂಧಿಸಿದ ಅಂತಾರಾಷ್ಟ್ರೀಯ ಮಟ್ಟದ ಒಪ್ಪಂದಗಳಿಗೆ ಸಹಿ ಹಾಕಿದ್ದರ  ಪರಿಣಾಮವಾ ಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆ ನಿಯಂತ್ರಣ ವ್ಯವಸ್ಥೆಯಿಂದ ಹೊರ ಬಂದರೆ ರೈತರ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂದರು.

ಮಾರ್ಚ್‌ ವೇಳೆಗೆ ಎಲ್ಲರಿಗೂ ಬೆಳೆ ಪರಿಹಾರ :

ಅಕಾಲಿಕ ಮಳೆಯಿಂದಾಗಿ ರಾಜ್ಯದಲ್ಲಿ 12 ಲಕ್ಷ ಎಕರೆಯಷ್ಟು ಬೆಳೆ ನಷ್ಟವಾಗಿದೆ. ಕೊರೊನಾದ ಕಷ್ಟ ಕಾಲದಲ್ಲೂ ಕೇಂದ್ರ ಸರಕಾರದ ನೆರವು ಸೇರಿ ರಾಜ್ಯ ಸರಕಾರವು 2 ಪಟ್ಟು ಪರಿಹಾರ ನೀಡುತ್ತಿದ್ದು, ಒಂದು ತಿಂಗಳಿನಲ್ಲಿ ರೈತರ ಬ್ಯಾಂಕ್‌ ಖಾತೆಗೆ 800 ಕೋಟಿ ರೂ. ಮೊತ್ತವನ್ನು ಜಮೆ ಮಾಡಲಾಗಿದೆ. ಮುಂದಿನ ಫೆಬ್ರವರಿ, ಮಾರ್ಚ್‌ ಹೊತ್ತಿಗೆ ಎಲ್ಲರಿಗೂ ಪರಿಹಾರ ತಲುಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ವಿದ್ಯಾನಿಧಿ ಯೋಜನೆಯ ವಿದ್ಯಾರ್ಥಿವೇತನದಿಂದ 2.40 ಲಕ್ಷ ರೈತರ ಮಕ್ಕಳಿಗೆ ಅನುಕೂಲವಾಗಿದ್ದು, ಈ ಸಂಖ್ಯೆ 2021-22ರಲ್ಲಿ ಶೈಕ್ಷಣಿಕ ವರ್ಷಾಂತ್ಯಕ್ಕೆ 5 ಲಕ್ಷ ತಲುಪಲಿದೆ.-ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.