ವೈಜ್ಞಾನಿಕ ಕೃಷಿ ಪದ್ದತಿ ಅನುಸರಿಸಿ: ಡಾ| ಶ್ರೀನಿವಾಸ
Team Udayavani, Dec 27, 2021, 12:28 PM IST
ಆಳಂದ: ರೈತರು ಒಂದೇ ಬೆಳೆ ಅವಲಂಬಿಸದೇ ವೈಜ್ಞಾನಿಕ ಕೃಷಿ ಪದ್ಧತಿ ಅನುಸರಿಸಬೇಕು ಎಂದು ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರದ ಮಣ್ಣು ತಜ್ಞ ಡಾ| ಶ್ರೀನಿವಾಸ ಬಿ.ವಿ ಸಲಹೆ ನೀಡಿದರು.
ತಾಲೂಕಿನ ನರೋಣಾ ಗ್ರಾಮದ ಪ್ರಗತಿಪರ ರೈತ ರಾಜೇಂದ್ರ ಎಸ್. ಸಂಗೋಳಗಿ ತೋಟದಲ್ಲಿ “ಬಸವೇಶ್ವರ ಸಮಾಜ ಸೇವಾ ಬಳಗ’ ವತಿಯಿಂದ ಏರ್ಪಡಿಸಲಾಗಿದ್ದ “ರಾಷ್ಟ್ರೀಯ ರೈತ ದಿನಾಚರಣೆ’ ಪ್ರಯುಕ್ತ ಪ್ರಗತಿಪರ ರೈತರಿಗೆ ಸತ್ಕಾರ, ಕೃಷಿ ವಿಜ್ಞಾನಿ-ರೈತರ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ರೈತರು ರಸಗೊಬ್ಬರವನ್ನು ಬೆಳೆಗಳಿಗೆ ಅಗತ್ಯಕ್ಕೆ ತಕ್ಕಂತೆ ಬಳಕೆ ಮಾಡಬೇಕು. ಹನಿ ನೀರಾವರಿ ಪದ್ಧತಿ ಅಳವಡಿಸಿಕೊಳ್ಳಿ. ಜೈವಿಕ ಕೀಟನಾಶಕಗಳನ್ನು ಬಳಸಿ. ಬೆಳೆ ಬದಲಾವಣೆ ಪದ್ಧತಿ ಅತ್ಯವಶ್ಯಕವಾಗಿದೆ. ರೈತರು ಕೃಷಿ ವಿಜ್ಞಾನಿಗಳು, ಕೃಷಿ ಪಂಡಿತ, ಪ್ರಗತಿಪರ ರೈತರಿಂದ ಸೂಕ್ತ ಮಾಹಿತಿ ಪಡೆಯಬೇಕು ಎಂದರು.
ಯಾವುದೇ ಬಿತ್ತನೆ ಮಾಡಬೇಕಾದರೆ ಮಣ್ಣಿನ ಗುಣಮಟ್ಟ ಮತ್ತು ಬೆಳೆದ ಫಸಲಿಗೆ ಮಾರುಕಟ್ಟೆಯ ಬೇಡಿಕೆ ಗಮನದಲ್ಲಿ ಇಟ್ಟುಕೊಳ್ಳುವುದು ಪ್ರಮುಖವಾಗಿದೆ. ಪ್ರಸ್ತುತ ಸಂದರ್ಭಗಳಲ್ಲಿ ಸಿರಿ ಧಾನ್ಯಗಳಿಗೆ ಬಹು ಬೇಡಿಕೆ ಇರುವುದರಿಂದ ಅದರತ್ತ ರೈತರು ಚಿತ್ತ ಹರಿಸಬೇಕು. ಮಣ್ಣಿನ ಸವಕಳಿ ತಡೆಗಟ್ಟಿ. ಮಳೆ ನೀರಿನ ಕೊಯ್ಲು ಕಡ್ಡಾಯವಾಗಿ ಮಾಡಬೇಕು ಎಂದು ಹೇಳಿದರು.
ಪ್ರಗತಿಪರ ರೈತ ಶಿವಾನಂದ ಎಸ್. ವಾಲಿ ಮಾತನಾಡಿ, ರೈತರ ಬದುಕು ಹಸನಾದರೇ ಮಾತ್ರ ಸಮಾಜ ಸಮತೋಲನವಾಗಿರಲು ಸಾಧ್ಯ ಎಂದರು.
ಪ್ರಗತಿಪರ ರೈತರಾದ ಸೈಬಣ್ಣ ಬೋಧನ, ಶಿವಾನಂದ ವಾಲಿ, ಖೇಮಲಿಂಗಯ್ಯ ಸ್ವಾಮಿ, ಅನಿಲ ಆರ್.ಬುಕ್ಕಾ, ಖೇಮಲಿಂಗ ಎ. ನಿಂಬಾಳ್ ಅವರನ್ನು ಸತ್ಕರಿಸಲಾಯಿತು. ಬಸವೇಶ್ವರ ಸಮಾಜ ಸೇವಾ ಬಳಗದ ಎಚ್.ಬಿ. ಪಾಟೀಲ, ವೀರೇಶ ಬೋಳಶೆಟ್ಟಿ ನರೋಣಾ, ಚನ್ನಬಸಪ್ಪ ಗಾರಂಪಳ್ಳಿ, ಪರಮೇಶ್ವರ ದೇಸಾಯಿ, ರಾಜೇಂದ್ರ ಎಸ್.ಸಂಗೋಳಗಿ, ಶರಣಬಸಪ್ಪ ಆರ್. ಸಂಗೋಳಗಿ,ಬಸವರಾಜಆರ್.ಸಂಗೋಳಗಿ, ಸೂರ್ಯಕಾಂತ ಚಪ್ಪಳ್ಳಿ, ಭದ್ರಪ್ಪ ಸಾವಳಗಿ, ಲಕ್ಷ್ಮೀಪುತ್ರ ಚಿಮ್ಮಾಯಿ, ಗುರುರಾಜ ಆರ್. ವಾಲಿ, ಕಾಶಿನಾಥ ಸಾವಳಗಿ, ಶ್ರೀಶೈಲ ವಾಲಿ ಹಾಗೂ ಇನ್ನಿತರ ರೈತರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ
CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ
Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ
ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್
Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್ಪಿಗೆ ಕರೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Test Cricket : ಮೆಂಡಿಸ್ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.