ಶ್ರಮಿಕರಿಗಾಗಿ ರಾಜ್ಯದಲ್ಲಿ ‘ಶ್ರಮಿಕ್ ಸಂಜೀವಿನಿ’ ಜಾರಿ

ಕಾರ್ಮಿಕ ಇಲಾಖೆಯಿಂದ ಮಹತ್ವಾಕಾಂಕ್ಷಿ ಯೋಜನೆ

Team Udayavani, Dec 27, 2021, 8:17 PM IST

1-sd

ಬೆಂಗಳೂರು: ಪ್ರತಿ ನಿತ್ಯ ತನ್ನ ಬದುಕಿನ ಭಾಗವಾಗಿ ಕೆಲಸದಲ್ಲಿ ತೊಡಗುವ ಕಾರ್ಮಿಕ ವರ್ಗ ಆರೋಗ್ಯದತ್ತ ಚಿತ್ತ ಹರಿಸದ ಪರಿಣಾಮ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದೆ. ಇದನ್ನು ಅರಿತ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಈ ಸಮಸ್ಯೆಗೆ ಪರಿಹಾರವಾಗಿ ‘ಶ್ರಮಿಕ್ ಸಂಜೀವಿನಿ’ ಯೋಜನೆಯನ್ನು ರೂಪಿಸಿ ಜಾರಿಗೆ ಮುಂದಾಗಿದ್ದಾರೆ.

ಕಳೆದ ಸಾಲಿನ ಆಯವ್ಯಯದಲ್ಲಿ ಅನುಮೋದನೆ ನೀಡಿದಂತೆ ಕಟ್ಟಡ ನಿರ್ಮಾಣ ಕಾರ್ಮಿಕರು ಮತ್ತು ಅವರ ಅವಲಂಭಿತರ ಸ್ವಾಸ್ಥö್ಯಕ್ಕೆ ಒತ್ತು ನೀಡುವ ಶ್ರಮಿಕ್ ಸಂಜೀವಿನಿ ಜಾರಿಗೆ ಅಂತಿಮ ಹಂತದ ಸಿದ್ಧತೆಗಳು ನಡೆಸಿದ್ದು, ಇಲಾಖೆಯು ಮೂರು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಈ ಯೋಜನೆ ಜಾರಿಗೆ ಮುಂದಡಿ ಇರಿಸಿದೆ.

ಅತ್ಯಾಧುನಿಕ ಸಂಚಾರಿ ಕ್ಲಿನಿಕ್: ಶ್ರಮಿಕರು ಇರುವರೆಡೆಗೆ ತೆರಳಿ ಅವರ ಆರೋಗ್ಯ ಪರೀಕ್ಷಿಸಿ ಅಗತ್ಯ ಸಲಹೆ ಸೂಚನೆ ನೀಡುವ ಮಹತ್ವಾಕಾಂಕ್ಷೆಯೊAದಿಗೆ ಸಿದ್ಧಗೊಂಡಿರುವ ಈ ಸಂಚಾರಿ ಕ್ಲಿನಿಕ್‌ಗಳು ಅತ್ಯಾಧುನಿಕ ವ್ಯವಸ್ಥೆಗಳೊಂದಿಗೆ ಅಣಿಗೊಂಡಿರುವುದು ವಿಶೇಷ.

ಪ್ರತಿ ಸೋಮವಾರದಿಂದ ಶನಿವಾರದವರೆಗೆ ನಿಗಧಿತ ಅವಧಿಯಲ್ಲಿ ನಿಗಧಿತ ಪ್ರದೇಶಗಳಿಗೆ ಭೇಟಿ ನೀಡಿ ತಂಗಲಿರುವ ಈ ಸಂಚಾರಿ ಕ್ಲಿನಿಕ್ ಸೇವೆಯನ್ನು ಆರಂಭದಲ್ಲಿ ಬೆಳಗಾವಿ ವಿಭಾಗದ ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮತ್ತು ಕಾರವಾರ ಜಿಲ್ಲೆಗಳಲ್ಲಿ ಜಾರಿಗೆ ಕಾರ್ಮಿಕ ಇಲಾಖೆ ಸಿದ್ಧತೆಗಳನ್ನು ನಡೆಸಿದೆ. ನೋಂದಾಯಿತ ಕಟ್ಟಡ ಕಾರ್ಮಿಕರು ಮತ್ತು ಅವರ ಅವಲಂಭಿತರಿಗೆ ಸಂಪೂರ್ಣ ಉಚಿತ ಆರೋಗ್ಯ ಸೇವೆಯನ್ನು ನೀಡಲಿದೆ. ಪ್ರತಿ ಸಂಚಾರಿ ಕ್ಲಿನಿಕ್‌ಗಳು ಓರ್ವ ವೈದ್ಯ, ಓರ್ವ ನರ್ಸ್, ಓರ್ವ ಫಾರ್ಮಸಿಸ್ಟ್, ಓರ್ವ ಲ್ಯಾಬ್ ಟೆಕ್ನಿಷಿಯನ್, ಎಎನ್‌ಎಮ್, ಚಾಲಕ ಮತ್ತು ಸಹಾಯಕ ಸಿಬ್ಬಂದಿಯನ್ನು ಹೊಂದಿರಲಿದೆ.

ಲಭ್ಯ ಸೇವೆಗಳು
ಗುಣಮುಖ ಸೇವೆಗಳು, ಪ್ರಥಮ ಚಿಕಿತ್ಸಾ ಸೇವೆಗಳು, ಪ್ರಯೋಗಾಲಕ ಪರೀಕ್ಷಾ ಸೇವೆಗಳು, ಕೋವಿಡ್ ಪರೀಕ್ಷಾ ಸೇವೆಗಳು, ಮಾಹಿತಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮ ಸೇವೆಗಳು, ಅನುಸರಣಾ ಸೇವೆಗಳು, ಕುಟುಂಬ ಯೋಜನಾ ಸೇವೆಗಳು, ಪ್ರಸವ ಪೂರ್ವ ಮತ್ತು ನಂತರದ ಸೇವೆಗಳು, ಚುಚ್ಚು ಮದ್ದು ಸೇವೆಗಳು, ಸಮಾಲೋಚನಾ ಸೇವೆಗಳು, ರಾಷ್ಟ್ರೀ ಯ ಆರೋಗ್ಯ ಕಾರ್ಯಕ್ರಮಗಳು, ಆರೋಗ್ಯ ಶಿಕ್ಷಣ ಮತ್ತು ಪರಿಸರ ನೈರ್ಮಲ್ಯ ಸೇವೆಗಳು ಸೇರಿದಂತೆ ಇತರೆ ನಿರ್ದೇಶಿತ ಆರೋಗ್ಯ ಸೇವೆಗಳು ಸ್ಥಳದಲ್ಲಿಯೇ ದೊರಕಲಿವೆ.

ಲಭ್ಯ ಸೌಲಭ್ಯಗಳು
ಶ್ರಮಿಕ ವರ್ಗ ಮತ್ತು ಅವರ ಕುಟುಂಬ ವರ್ಗದ ಆರೋಗ್ಯ ಸೇವೆಗಾಗಿ ಜಾರಿ ಆಗಲಿರುವ ಈ ಮೊಬೈಲ್ ಕ್ಲಿನಿಕ್‌ಗಳಲ್ಲಿ ಅತ್ಯಾಧುನಿಕ ಸವಲತ್ತುಗಳನ್ನು ನೀಡಲು ಇಲಾಖೆ ಆದ್ಯತೆ ನೀಡಿದ್ದು, ಆಧುನಿಕ ಸ್ಟೆçಚ್ಚರ್, ಬೆಡ್, ಆಕ್ಷಿಜನ್ ಪರಿಕರಗಳು, ಜೀವನಾವಶ್ಯಕ ಔಷಧಗಳು, ಜಿ.ಪಿ. ಆಪರೇಟಸ್, ಇಸಿಜಿ ಸೌಲಭ್ಯ, ರೆಫ್ರಿಜರೇಟರ್, ಕೋವಿಡ್ ಪರೀಕ್ಷಾ ಸಲಕರಣೆಗಳು, ವ್ಹೀಲ್ ಚೇರ್, ಪ್ರಯೋಗಾಲಯ ಸಲಕರಣೆಗಳು, ಅವಶ್ಯಕ ವೈದ್ಯಕೀಯ ಪರಿಕರಗಳು, ಸಿಬ್ಬಂದಿಗೆ ಅಸನ ವ್ಯವಸ್ಥೆ, ಸೇವಾ ಕೇಂದ್ರಗಳ ಆರಂಭಕ್ಕೆ ಅಗತ್ಯ ಸಲಕರಣೆಗಳನ್ನು ಹೊಂದಿರಲಿದೆ.

ಈ ಸಂಚಾರಿ ಆರೋಗ್ಯ ಕ್ಲಿನಿಕ್‌ಗಳ ಸೇವೆ ಕುರಿತ ಇಲಾಖೆ ಪ್ರಚಾರದ ಮೂಲಕ ಜಾಗೃತಿ ಮೂಡಿಸಲು ಉದ್ದೇಶಿಸಿದ್ದು, ನಾಮಫಲಕಗಳ ಮೂಲಕ ಸೇವಾ ಅವಧಿಯನ್ನು ಪ್ರಚೂರ ಪಡಿಸಲಿದೆ. ಚಿಕಿತ್ಸೆಗೆ ಬರುವ ಪ್ರತಿ ಕಾರ್ಮಿಕನಿಗೆ ಕ್ರಮ ಸಂಖ್ಯೆ ನೀಡಿ ಪ್ರತ್ಯೇಕ ಒಪಿಡಿ ದಾಖಲೆ ನಿರ್ವಹಣೆ, ನೋಂದಾಯಿತ ಕಟ್ಟಡ ಕಾರ್ಮಿಕರು ಮತ್ತು ಅವರ ಅವಲಂಭಿತರಿಗೆ ಔಷಧೋಪಚಾರಗಳನ್ನು ಒದಗಿಸಲಿದೆ. ಸ್ಥಳದಲ್ಲಿಯೇ ಪರೀಕ್ಷೆಗಳನ್ನು ಕೈಗೊಂಡು ವರದಿ ಮತ್ತು ಚಿಕಿತ್ಸೆ ನೀಡಲು ಅನುವಾಗುವಂತೆ ಪ್ರಯೋಗಾಲಯದ ಉಪಕರಣಗಳನ್ನು ಇರಿಸಲಾಗಿದೆ.

ತುರ್ತು ಚಿಕಿತ್ಸೆ ಮತ್ತು ಅಪಘಾತ ಸಂದರ್ಭದಲ್ಲಿ ರೋಗಿಯನ್ನು ಹೆಚ್ಚಿನ ಚಿಕಿತ್ಸೆಗೆ ಇಎಸ್‌ಐ ಅಥವಾ ಉನ್ನತೀಕರಿಸಿದ ಆಸ್ಪತ್ರೆಗಳಿಗೆ ರವಾನಿಸಲು ಈ ಸೇವೆ ಸಹಕಾರಿ ಆಗಿದೆ.

ಆಕರ್ಷಕವಾಗಿ ರೂಪಿಸಿ ವಿನ್ಯಾಸಗೊಳಿಸಲಾಗರವ ಈ ಆರೋಗ್ಯ ಕ್ಲಿನಿಕ್‌ಗಳಲ್ಲಿ ಸೇವೆಗಳ ಆನ್‌ಲೈನ್ ವರದಿಗಾಗಿ ರಿಯಲ್ ಟೈಮ್ ರಿಪೋರ್ಟಿಂಗ್, ಜಿಪಿಎಸ್ ಟ್ರೇಸಿಂಗ್ ಸಿಸ್ಟಮ್, ರೋಗಿಯ ವಿವರಗಳನ್ನು ಎಂಐಎAನಲ್ಲಿ ಅಪ್ ಲೋಡ್ ಮಾಡಲಾಗದ್ದು, ಇದಕ್ಕಾಗಿ ಬಿಎಸ್-6 ಮಾದರಿಯ ವಾಹನಗಳನ್ನು ಇಲಾಖೆ ಬಳಸಿಕೊಳ್ಳಲಾಗಿದೆ.
ತುರ್ತು ಸಂದರ್ಭಗಳಲ್ಲಿ ಶ್ರಮಿಕ್ ಸಂಜೀವಿನಿ ಸೇವೆಯನ್ನು ಸಹಾಯವಾಣಿ ಸಂಖ್ಯೆಗೆ 155214ಗೆ ಕರೆ ಮಾಡಿ ಪಡೆಯಬಹುದಾಗಿದ್ದು, ಯೋಜನೆಯ ತುರ್ತು ಜಾರಿಗೆ ಅನುವಾಗುವಂತೆ ಕಾರ್ಮಿಕ ವಿಮಾ ಸಂಸ್ಥೆಯ ವೈದ್ಯಕೀಯ ಮತ್ತು ಸಿಬ್ಬಂದಿ ಸೇವೆಯನ್ನು ಪಡೆದುಕೊಳ್ಳಲು ಕಾರ್ಮಿಕ ಇಲಾಖೆ ಸಿದ್ಧತೆ ನಡೆದಿದೆ.

ಶ್ರಮಿಕ್ ಸಂಜೀವಿನ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಆಗಿದೆ. ಈ ಯೋಜನೆ ಯಶಸ್ವಿ ಜಾರಿಗೆ ಇಲಾಖೆ ಕಟಿಬದ್ಧವಾಗಿದ್ದು, ದಿನ ನಿತ್ಯದ ಬಿಡುವಿಲ್ಲದ ಕೆಲಸದ ನಡುವೆ ಶ್ರಮಿಕ ವರ್ಗ ಇದ್ದೆಡೆಯೇ ಉಚಿತವಾಗಿ ಉತ್ತಮ ಆರೋಗ್ಯ ಸೇವೆಗಳನ್ನು ಪಡೆದುಕೊಳ್ಳಬೇಕು ಎಂಬುದೇ ಈ ಯೋಜನೆಯ ಹಿಂದಿನ ಮಹದುದ್ದೇಶ.

ಶಿವರಾಂ ಹೆಬ್ಬಾರ್. ಕಾರ್ಮಿಕ ಸಚಿವರು.

ಪ್ರತಿ ಶ್ರಮಿಕ್ ಸಂಜೀವಿನಿಯಲ್ಲಿ ನುರಿತ ವೈದ್ಯರು ಮತ್ತು ತಜ್ಞರು ಇರಲಿದ್ದಾರೆ. ಸ್ಥಳೀಯ ಕಾರ್ಮಿಕ ಇಲಾಖೆ ಅಧಿಕಾರಿಗಳು ಚುಟುವಟಿಕೆಗಳ ಮೇಲೆ ನಿಗಾವಹಿಸಿರುತ್ತಾರೆ ಮತ್ತು ಜಿಪಿಎಸ್ ಮೂಲಕ ಶ್ರಮಿಕ್ ಸಂಜೀವಿನಿಯ ಉಪಸ್ಥಿತಿ ಮತ್ತು ಚಿಕಿತ್ಸೆಗಾಗಿ ಬರುವ ಕಾರ್ಮಿಕರ ಮಾಹಿತಿ ರಿಯಲ್ ಟೈಮ್‌ನಲ್ಲಿ ಅಪ್‌ಲೋಡ್ ಆಗುತ್ತದೆ. ನಮ್ಮ ಸಂಸ್ಥೆಯು 2008ರಿಂದ ಇಂತಹ ಸೇವೆಗಳನ್ನು ಒದಗಿಸುತ್ತಿದೆ.

ವೆಂಕಟೇಶ್ ನಾಯಕ್, ಸ್ಕೋಡ್‌ವೆಸ್ ಸಂಸ್ಥೆ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.