ಇಂಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ
Team Udayavani, Dec 28, 2021, 9:22 PM IST
ಇಂಡಿ: ಪಟ್ಟಣದ ಚವಡಿಹಾಳ ರಸ್ತೆಯಲ್ಲಿರುವ ಸ್ವಾಮಿ ಅಯ್ಯಪ್ಪ ದೇವಸ್ಥಾನದ ಆವರಣದಲ್ಲಿ ಸ್ವಾಮಿ ಅಯ್ಯಪ್ಪಸ್ವಾಮಿ 26ನೇ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ, ರಕ್ತದಾನ, ನೇತ್ರದಾನ, ಕ್ಷಯರೋಗ ನಿರ್ಮೂಲನೆ ಜಾಗೃತಿ ಸೇರಿದಂತೆ ಇನ್ನಿತರ ಕಾರ್ಯಕ್ರಮ ಜರುಗಿದವು.
ಈ ಸಂದರ್ಭದಲ್ಲಿ ಡಾ| ರಾಜೇಶ ಕೋಳೆಕರ್, ಡಾ| ಪ್ರಶಾಂತ ಧೂಮಗೊಂಡ ಮಾತನಾಡಿ, ಜಾತ್ರಾ ಮಹೋತ್ಸವದಲ್ಲಿ ರಾಯಲ್ ಗುರುಸ್ವಾಮಿಗಳ ಸಾಮಾಜಿಕ ಕಳಕಳಿಯ ಮೇರೆಗೆ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ 63 ಜನ ಯುವಕರು ರಕ್ತದಾನ ಮಾಡಿದರು. 25 ಜನ ಯುವಕರು ನೇತ್ರದಾನ ವಾಗ್ಧಾನ ಮಾಡಿದರು. 40 ಜನ ಕೋವಿಡ್ ಪರೀಕ್ಷೆ ಮಾಡಿಸಿಕೊಂಡರು, 10 ಜನ ಕೋವಿಡ್ ಲಸಿಕೆ ಪಡೆದರೆ,45 ಜನರ ಶುಗರ್, ಬಿ.ಪಿ. ಪರೀಕ್ಷೆ ನಡೆಸಲಾಯಿತು.
ರಾಯಲ್ ಗುರುಸ್ವಾಮೀಜಿ ಮಾತನಾಡಿ, ಸತತ 26 ವರ್ಷಗಳಿಂದ ಅಯ್ಯಪ್ಪಸ್ವಾಮೀಜಿ ಜಾತ್ರಾ ಮಹೋತ್ಸವ ಹಮ್ಮಿಕೊಳ್ಳುತ್ತಿದ್ದೇವೆ. ಕಳೆದ ನಾಲ್ಕಾರು ವರ್ಷಗಳಿಂದ ದೇವಸ್ಥಾನದ ಜೀರ್ಣೋದ್ದಾರ ಮಾಡಲಾಗುತ್ತಿದೆ. ಭಕ್ತರ ಸಹಕಾರದಿಂದ ಜಾತ್ರೆ ಅದ್ಧೂರಿಯಾಗಿ ಜರುಗಲಿದೆ. ನೂರಾರು ಮಾಲಾಧಾರಿಗಳುಮಾಲೆಧರಿಸಿವೃತಕೈಗೊಂಡಿದ್ದಾರೆ. ಭಕ್ತರ ಆರೋಗ್ಯದ ಹಿತದೃಯಿಂದ ಜಾತ್ರೆಯಲ್ಲಿ ಆರೋಗ್ಯ ತಪಾಸಣೆ ಶಿಬಿರ ಏರ್ಪಡಿಸಲಾಗಿದೆ ಎಂದರು.
ರಾಯಲ್ ಗುರುಸ್ವಾಮಿಗಳ ನೇತೃತ್ವದಲ್ಲಿ ಡಾ| ಪ್ರಶಾಂತ ಧೂಮಗೊಂಡ, ಡಾ| ರಾಜೇಶ ಕೋಳೆಕರ್, ಬಸವರಾಜ ಪಾಟೀಲ, ಚಂದ್ರಾಮ ಮೇಡೇದಾರ, ಶಾಂತು ಹೊಸಮನಿ, ಸುಭಾಶ ಶೆಟ್ಟಿ, ಸುನೀಲಗೌಡ ಬಿರಾದಾರ, ರಾಚು ಬಡಿಗೇರ, ಆನಂದ ದೇವರ, ಪ್ರವೀಣ ಮಠ, ಆಶಾ ಕಾರ್ಯಕರ್ತರು ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
Award: 2023-24, 2024-25ನೇ ಸಾಲಿನ “ಗಡಿನಾಡ ಚೇತನ” ಪ್ರಶಸ್ತಿ ಪ್ರಕಟ
Muddebihal: ನಿಂತಿದ್ದ ಕ್ಯಾಂಟರ್ ಗೆ ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು
ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.