ಪಟ್ಟಣ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಆಸ್ತಿ ರಕ್ಷಣೆಗೆ ಕ್ರಮ


Team Udayavani, Dec 30, 2021, 2:53 PM IST

ಪಟ್ಟಣ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಆಸ್ತಿ ರಕ್ಷಣೆಗೆ ಕ್ರಮ

ಅರಕಲಗೂಡು: ಪಪಂ ಆಸ್ತಿ ಉಳಿಸಲು ಬದ್ಧ, ಯಾರ ಮುಲಾಜಿಗೂ ಒಳಗಾಗದೇ ಪಪಂನ ಎಲ್ಲಾ ಸದಸ್ಯರ ಸಹಕಾರದೊಂದಿಗೆ ಆಂದೋಲನ ನಡೆಸುವ ಮೂಲಕ ಪಟ್ಟಣ ವ್ಯಾಪ್ತಿಯ ಸರ್ಕಾರಿ ಆಸ್ತಿಯನ್ನು ರಕ್ಷಿಸುವ ನಿರ್ಣಯವನ್ನು ಪಪಂ ಅಧ್ಯಕ್ಷ ಹೂವಣ್ಣ ಕೈಗೊಂಡರು.

ಬುಧವಾರ ನಡೆದ ಪಪಂ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಪಂ ವ್ಯಾಪ್ತಿಯಲ್ಲಿ ಸರ್ಕಾರಿ ಆಸ್ತಿಗಳ ಅಕ್ರಮ ಖಾತೆಗಳಾಗುತ್ತಿರುವುದು ಆತಂಕ ಮೂಡಿಸುತ್ತಿದೆ. ಪಪಂನ ಆಸ್ತಿಗಳ ಅಕ್ರಮ ಖಾತೆ ಹಾಗೂ ಅತಿಕ್ರಮಣದ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾದ ಬೆನ್ನಲ್ಲಿ ಶಾಸಕರು ಈ ವಿಷಯದ ಬಗ್ಗೆ ಚರ್ಚಿಸಿ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಪಪಂನ ಅಧಿಕಾರಿಗಳಿಗೆ ಹಲವು ಭಾರಿ ಎಚ್ಚರಿಕೆ ನೀಡಿದರೂ ಅಕ್ರಮ ಖಾತೆಗಳಿಗೆ ಕಡಿವಾಣ ಬೀಳುತ್ತಿಲ್ಲ. ಅಧಿಕಾರಿಗಳು ಇದೇ ಪ್ರವೃತ್ತಿ ಮುಂದುವರಿಸಿದರೆ ಮುಂದಿನ ದಿನಗಳಲ್ಲಿ ಸರ್ಕಾರಿ ಆಸ್ತಿಯನ್ನು ಸಂಪೂರ್ಣ ಕಳೆದುಕೊಳ್ಳಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಇವುಗಳ ರಕ್ಷಣೆಗಾಗಿ ಪಕ್ಷಾತೀತವಾಗಿ ಎಲ್ಲಾ ಸದಸ್ಯರು ನನ್ನೊಂದಿಗೆ ಕೈಜೋಡಿಸಿ ಎಂದು ಮನವಿ ಮಾಡಿದರು. ಇದಕ್ಕೆ ಎಲ್ಲಾ ಸದಸ್ಯರು ಸಮ್ಮತಿ ಸೂಚಿಸಿದರು.

ಪಪಂ 6ನೇ ವಾರ್ಡ್‌ ಸದಸ್ಯೆ ರಶ್ಮಿ, ವಾರ್ಡ್‌ ನಂ. 6 ಮತ್ತು 7 ರಲ್ಲಿ ಅಕ್ರಮ ಖಾತೆಗಳು ನಕಲಿ ಹಕ್ಕು ಪತ್ರಗಳು ದಿನನಿತ್ಯ ಹೆಚ್ಚುತ್ತಿದ್ದು, ಒಂದೇ ನಿವೇಶನಕ್ಕೆ ಇಬ್ಬರು ಮೂವರು ನನ್ನದು ಎಂದು ಪೊಲೀಸ್‌ ಠಾಣೆ ಮೆಟ್ಟಿಲೇರುತ್ತಿರುವ ಮೂಲಕ ವಾರ್ಡಿನ ಶಾಂತಿಗೆ ಭಂಗವಾಗುತ್ತಿದೆ ಎಂದು ದೂರಿದರು. ಪಪಂ ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಅರ್ಜಿಗಳು ಹಾಲಿನ ಡೇರಿ ನಿರ್ಮಾಣದ ಹೆಸರಿನಲ್ಲಿ ಬರುತ್ತಿರುವುದು ಆಶ್ಚರ್ಯಕರ. ಪಟ್ಟಣದ ಪ್ರಮುಖ ಸ್ಥಳಗಳನ್ನು ಸಾರ್ವಜನಿಕರ ಅನುಕೂಲಕರವಾಗುತ್ತದೆ ಎಂಬ ದೃಷ್ಟಿಯಿಂದ ನೀಡಿದರೆ, ಆ ಮಳಿಗೆಯಲ್ಲಿ ಹಾಲಿನ ಜೊತೆಗೆ ಇತರೆಯ ವ್ಯಾಪಾರಿಗಳನ್ನು ಮಾಡುತ್ತಿರುವುದು ಸಾಮಾನ್ಯವಾಗಿದೆ. ಆದ್ದರಿಂದ ಅನಾವಶ್ಯಕವಾಗಿ ಸರ್ಕಾರಿ ಜಾಗ ಡೇರಿ ಹೆಸರಿನಲ್ಲಿ ನೀಡುವು ದನ್ನು ನಿಲ್ಲಿಸುವಂತೆ ಸದಸ್ಯ ಪ್ರದೀಪಕುಮಾರ ಆಗ್ರಹಿಸಿದರು.

ಪಪಂನ ಸದಸ್ಯರಲ್ಲಿ 9 ಮಹಿಳಾ ಸದಸ್ಯರಿದ್ದರೂ ಅಧಿಕಾರದ ವಿಷಯದಲ್ಲಿ ಮಹಿಳೆಯರಿಗೆ ಆದ್ಯತೆ ನೀಡದೇ ಪುರುಷ ಸದಸ್ಯರೇ ಪಡೆಯುತ್ತಿರುವುದು ಸರಿಯಾದ ಕ್ರಮವಲ್ಲ ಎಂದು ವಾರ್ಡ್‌ ನಂ 15ರ ಸದಸ್ಯ ಅನುಷಾ ಅಸಮಾಧಾನ ವ್ಯಕ್ತಪಡಿಸಿದರು. ಸುಮಾರು 80 ವರ್ಷಗಳಿಂದ ಪೌರ ಕಾರ್ಮಿಕರ ಕುಟುಂಬಗಳು ಜೀವನ ನಡೆಸುತ್ತಾ ಬರುತ್ತಿರುವ ಈ ಸ್ಥಳದಲ್ಲಿ ಸುಚಿತ್ವವಿಲ್ಲದೆ ಒಂದೇ ಮನೆಯಲ್ಲಿ 3-4 ಕುಟುಂಬಗಳು ಜೀವಿಸುತ್ತಿದ್ದರೂ, ಈ ಮನೆಗಳ ಹಕ್ಕು ಪಟ್ಟಣ ಪಂಚಾಯಿತಿಯದ್ದಾಗಿದೆ. ಈ ಸ್ಥಳವನ್ನು ಪೌರ ಕಾರ್ಮಿಕರಿಗೆ ಹಕ್ಕು ಪತ್ರ ನೀಡುವ ವಿಷಯದಲ್ಲಿ
ವಾರ್ಡ್‌ ನಂ 16ರ ಸದಸ್ಯ ಅನಿಕೇತನ ಅವರ ಪರಿಶ್ರಮದಿಂದ ಆ ಸ್ಥಳವನ್ನು ಕೊಳಚೆ ನಿರ್ಮೂಲನಾ ಮಂಡಳಿಗೆ ಹಸ್ತಾಂತರಿಸಿ ಅವರ ಮೂಲಕ ಪೌರ ಕಾರ್ಮಿಕರ 47 ಮನೆಗಳ ಹಕ್ಕುಪತ್ರವನ್ನು ಕೊಡಿಸುವ ಮೂಲಕ ಹಲವಾರು ವರ್ಷಗಳ ಹೋರಾಟಕ್ಕೆ ತೆರೆ ನೀಡಿದಂತಾಗಿದೆ. ಉಪಾಧ್ಯಕ್ಷ ನಿಖೀಲ್‌ಕುಮಾರ, ಮುಖ್ಯಾಧಿಕಾರಿ ಶಿವಕುಮಾರ್‌, ಎಂಜಿನಿಯರ್‌
ಜಗದೀಶ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

INDvsNZ: India trapped by spin in Pune; Series defeat at home after 12 years

INDvsNZ: ಪುಣೆಯಲ್ಲಿ ಸ್ಪಿನ್‌ ಬಲೆಗೆ ಬಿದ್ದ ಭಾರತ; 12 ವರ್ಷಗಳ ಬಳಿಕ ತವರಲ್ಲಿ ಸರಣಿ ಸೋಲು

Coldplay, Diljit ಕಾರ್ಯಕ್ರಮದ ನಕಲಿ ಟಿಕೆಟ್‌ ಮಾರಾಟ: ಬೆಂಗಳೂರು ಸೇರಿ ಹಲವೆಡೆ ಇ.ಡಿ ದಾಳಿ!

Coldplay, Diljit ಕಾರ್ಯಕ್ರಮದ ನಕಲಿ ಟಿಕೆಟ್‌ ಮಾರಾಟ: ಬೆಂಗಳೂರು ಸೇರಿ ಹಲವೆಡೆ ಇ.ಡಿ ದಾಳಿ!

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

delhi

ಮದುವೆಯಾಗು ಎಂದು ಬೆನ್ನು ಬಿದ್ದ ಗರ್ಭಿಣಿ ಪ್ರೇಯಸಿಯನ್ನೇ ಹತ್ಯೆಗೈದು ಹೂತು ಹಾಕಿದ ಪ್ರಿಯಕರ

yashasvi jaiswal

INDvsNZ: ಒಂದು ವರ್ಷದಲ್ಲಿ ಅತಿ ಹೆಚ್ಚು ಟೆಸ್ಟ್ ಸಿಕ್ಸರ್‌ ಬಾರಿಸಿದ ದಾಖಲೆ ಮಾಡಿದ ಜೈಸ್ವಾಲ್

14-katapady

Katapady:ಸೂರ್ಯನ ಶಾಖದಿಂದ ಮರದ ಹಲಗೆಯಲ್ಲಿ ರಚಿಸಿದ ಕಲಾಕೃತಿಗೆ ರಾಷ್ಟ್ರಪತಿಗಳಿಂದ ಮೆಚ್ಚುಗೆ

Hardik Pandya

Hardik Pandya: ಶೀಘ್ರ ದೊಡ್ಡ ವಿಷಯ ಪ್ರಕಟ: ಹಾರ್ದಿಕ್‌ ಪೋಸ್ಟ್‌ ಕುತೂಹಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಹಾಸನಾಂಬೆ ದರ್ಶನ ಆರಂಭ: ದೇವಿಯ ಪವಾಡಕ್ಕೆ ಭಕ್ತರು ಪರವಶ

Hassan: ಹಾಸನಾಂಬೆ ದರ್ಶನ ಆರಂಭ: ದೇವಿಯ ಪವಾಡಕ್ಕೆ ಭಕ್ತರು ಪರವಶ

ಹಾಸನದಲ್ಲೂ ಮೂವರು ಬಾಂಗ್ಲಾ ವಲಸಿಗರ ಬಂಧನ

Hassan: ಮೂವರು ಬಾಂಗ್ಲಾ ವಲಸಿಗರ ಬಂಧನ

Hassan: ಎಂಪಿ ಮತದಾನಕ್ಕೆ ಕಾಂಗ್ರೆಸ್‌ನಿಂದ 65 ಕೋಟಿ ರೂ. ಖರ್ಚು: ದೇವರಾಜೇಗೌಡ

Hassan: ಎಂಪಿ ಮತದಾನಕ್ಕೆ ಕಾಂಗ್ರೆಸ್‌ನಿಂದ 65 ಕೋಟಿ ರೂ. ಖರ್ಚು: ದೇವರಾಜೇಗೌಡ

Sakleshpura: ವಿದ್ಯುತ್‌ ತಂತಿ ತಗಲಿ ಕಾಡಾನೆ ಸಾವು

Sakleshpura: ವಿದ್ಯುತ್‌ ತಂತಿ ತಗಲಿ ಕಾಡಾನೆ ಸಾವು

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

INDvsNZ: India trapped by spin in Pune; Series defeat at home after 12 years

INDvsNZ: ಪುಣೆಯಲ್ಲಿ ಸ್ಪಿನ್‌ ಬಲೆಗೆ ಬಿದ್ದ ಭಾರತ; 12 ವರ್ಷಗಳ ಬಳಿಕ ತವರಲ್ಲಿ ಸರಣಿ ಸೋಲು

17-

Sagara: ರೈತರು ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆ; ಜೆಡಿಎಸ್ ಬೆಂಬಲ

Coldplay, Diljit ಕಾರ್ಯಕ್ರಮದ ನಕಲಿ ಟಿಕೆಟ್‌ ಮಾರಾಟ: ಬೆಂಗಳೂರು ಸೇರಿ ಹಲವೆಡೆ ಇ.ಡಿ ದಾಳಿ!

Coldplay, Diljit ಕಾರ್ಯಕ್ರಮದ ನಕಲಿ ಟಿಕೆಟ್‌ ಮಾರಾಟ: ಬೆಂಗಳೂರು ಸೇರಿ ಹಲವೆಡೆ ಇ.ಡಿ ದಾಳಿ!

16-bng

Bengaluru: ಕಟ್ಟಡ ಕುಸಿತಕ್ಕೆ ಗುತ್ತಿಗೆದಾರನೂ ಬಲಿ!

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.