ಮಾದಪ್ಪನ ಹುಂಡಿಯಲ್ಲಿ 22 ದಿನದಲ್ಲಿ 2.27 ಕೋಟಿ ರೂ.
Team Udayavani, Dec 30, 2021, 4:18 PM IST
ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರನ ಹುಂಡಿಯಲ್ಲಿ 2.27 ಕೋಟಿ ರೂ. ನಗದು, 57ಗ್ರಾಂ ಚಿನ್ನ ಹಾಗೂ 3.800 ಕೆ.ಜಿ ಬೆಳ್ಳಿ ಸಂಗ್ರಹವಾಗಿವೆ. ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಖಾಸಗಿ ಬಸ್ ನಿಲ್ದಾಣದ ಸಮೀಪದ ವಾಣಿಜ್ಯ ಸಂಕೀರ್ಣದಲ್ಲಿ ಬೆಳಗ್ಗೆ 7.30ಕ್ಕೆ ಪ್ರಾರಂಭವಾದ ಹುಂಡಿ ಎಣಿಕೆ ಪ್ರಕ್ರಿಯೆಯು ತಡರಾತ್ರಿ 9:30ರವರೆಗೂ ಜರುಗಿತು.
ಹುಂಡಿ ಎಣಿಕೆ ಪ್ರಕ್ರಿಯೆಯು ಸಾಲೂರು ಬೃಹನ್ಮಠದ ಶಾಂತಮಲ್ಲಿಕಾರ್ಜುನ ಶ್ರೀಗಳ ದಿವ್ಯಸಾನ್ನಿಧ್ಯದಲ್ಲಿ ಪ್ರಾಧಿಕಾರದ ಅಧಿಕಾರಿಗಳು ಮತ್ತು ಸಿಬ್ಬಂದಿ ಸಮಕ್ಷಮದಲ್ಲಿ ಸಿಸಿ ಟೀವಿ ಕಣ್ಗಾವಲಿನಲ್ಲಿ ಜರುಗಿತು.
ಈ ಬಾರಿಯ ಹುಂಡಿ ಎಣಿಕೆಯಲ್ಲಿ ಕಳೆದ 22 ದಿನಗಳಲ್ಲಿ 2,27,66,834(ಎರಡು ಕೋಟಿ ಇಪ್ಪತ್ತೇಳು ಲಕ್ಷದ ಅರವತ್ತಾರು ಸಾವಿರದ ಎಂಟು ನೂರ ಮೂವತ್ತ ನಾಲ್ಕು) ರೂ. ನಗದು, 170ಗ್ರಾಂ ಚಿನ್ನದ ಪದಾರ್ಥಗಳು ಮತ್ತು 3 ಕೆ.ಜಿ.800ಗ್ರಾಂ ಬೆಳ್ಳಿಯ ಪದಾರ್ಥಗಳು ಸಂಗ್ರಹವಾಗಿವೆ. ಕೊರೊನಾ ಕಾಣಿಸಿಕೊಂಡು ಬಳಿಕ ಅಂದರೆ ಕಳೆದ ಎರಡು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ
ಹುಂಡಿಯಲ್ಲಿ ಅತಿ ಹೆಚ್ಚು ಹಣ ಸಂಗ್ರಹವಾಗಿದೆ.
ಹುಂಡಿ ಎಣಿಕೆ ಪ್ರಕ್ರಿಯೆಯಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮು, ಉಪಕಾರ್ಯದರ್ಶಿ ಬಸವರಾಜು, ಪ್ರಾಧಿಕಾರದ ಅಧಿಕಾರಿಗಳು ಮತ್ತು ಸಿಬ್ಬಂದಿ, ಮಹದೇಶ್ವರ ಬೆಟ್ಟ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆ ವ್ಯವಸ್ಥಾಪಕರು ಮತ್ತು ಸಿಬ್ಬಂದಿ ಭಾಗವಹಿಸಿದ್ದರು. ಮ.ಬೆಟ್ಟ ಪೊಲೀಸ್ ಇಲಾಖಾ ಅಧಿಕಾರಿಗಳು ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.