ತೊಣ್ಣೂರು ಕೆರೆ ಅಭಿವೃದ್ಧಿಗೆ ಕ್ರಮ


Team Udayavani, Jan 1, 2022, 4:53 PM IST

ತೊಣ್ಣೂರು ಕೆರೆ ಅಭಿವೃದ್ಧಿಗೆ ಕ್ರಮ

ಪಾಂಡವಪುರ: ಐತಿಹಾಸಿಕ ಪ್ರವಾಸಿತಾಣ ತೊಣ್ಣೂರುಕೆರೆ ಭರ್ತಿಯಾದ ಹಿನ್ನಲೆಯಲ್ಲಿ ಪತ್ನಿ ನಾಗಮ್ಮ ಜತೆಗೂಡಿ ಶಾಸಕ ಸಿ.ಎಸ್‌.ಪುಟ್ಟರಾಜುಅವರು ಶುಕ್ರವಾರ ಬಾಗಿನ ಅರ್ಪಿಸಿದರು.

ಪತ್ನಿಯೊಡನೆ ತೊಣ್ಣೂರುಕೆರೆ ಆಗಮಿಸಿದ ಶಾಸಕರು, ಕಾವೇರಿ ಮಾತೆಗೆ ಪೂಜೆ ಸಲ್ಲಿಸಿಕೆರೆಗೆ ಬಾಗಿನ ಬಿಟ್ಟರು. ನಂತರ ಮಾತನಾಡಿದ ಅವರು, ಯದುಗಿರಿ ಎಂದೇ ಪ್ರಸಿದ್ಧಿಯಾದ ಮೇಲು ಕೋಟೆಯಲ್ಲಿ ನೆಲೆಸಿದ ಶ್ರೀರಾಮಾನುಜಚಾರ್ಯರು ನಿರ್ಮಾಣ ಮಾಡಿದ ಐತಿಹಾಸಿಕ ತೊಣ್ಣೂರು ಕೆರೆ ಭರ್ತಿಯಾದ ಹಿನ್ನಲೆಯಲ್ಲಿ ಕೆರೆಗೆ ಬಾಗಿನ ಅರ್ಪಿಸಿದ್ದೇನೆ.ಸುಮಾರು 30 ಕೋಟಿ ವೆಚ್ಚದಲ್ಲಿ ತೊಣ್ಣೂರುಕೆರೆಯನ್ನು ಅಭಿವೃದ್ಧಿಪಡಿಸುವ ಕಾರ್ಯಕ್ರಮ ರೂಪಿಸಲಾಗಿದೆ ಎಂದು ತಿಳಿಸಿದರು.

ಹೇಮಾವತಿ-ಕಾವೇರಿ ನದಿ ನೀರಿನ ಸಂಗಮ: ಮಳೆಯ ನೀರಿನಿಂದಲೇ ಭರ್ತಿಯಾಗುತ್ತಿದ್ದ ತೊಣ್ಣೂರುಕೆರೆಗೆ 1994-95ರಲ್ಲಿ ಹೇಮಾವತಿ ನಾಲೆಯಿಂದ ನೀರು ತುಂಬಿಸುವಕೆಲಸ ಮಾಡಲಾಯಿತು. ನಂತರ ನಾನು ಸಣ್ಣನೀರಾವರಿ ಸಚಿವನಾದ ಬಳಿಕ 200ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಿದಬಳಘಟ್ಟ ಏತನೀರಾವರಿ ಯೋಜನೆಯಿಂದ ತೊಣ್ಣೂರು ಕೆರೆಗೂ ನೀರು ತುಂಬಿಸುವ ಕೆಲಸಮಾಡಲಾಗಿದೆ. ಐತಿಹಾಸಿಕ ತೊಣ್ಣೂರುಕೆರೆಯಲ್ಲಿ ಹೇಮಾವತಿ ಮತ್ತು ಕಾವೇರಿ ನದಿ ನೀರಿನ ಸಂಗಮವಾಗುತ್ತಿದೆ ಎಂದರು.

ಗೇಟ್‌ ಅಳವಡಿಕೆ: ಈ ಬಾರಿ ಹೆಚ್ಚಿನ ಮಳೆಯಾಗಿ ತೊಣ್ಣೂರು ಕೆರೆ ಸುಮಾರು 4ಅಡಿಯಷ್ಟು ಹೆಚ್ಚು ನೀರು ಬಂದರೂ ಸಹ ಈಕೆರೆ ಮಹಾನ್‌ಪುರುಷ ಶ್ರೀರಾಮಾನುಜಚಾರ್ಯರು ನಿರ್ಮಾಣ ಮಾಡಿದ್ದರಿಂದ ಯಾವುದೇ ಅಪಾಯ ಎದುರಾಗುವುದಿಲ್ಲ.ಕೆರೆಯ ರಕ್ಷಣೆಯ ದೃಷ್ಟಿಯಿಂದ ಕೆರೆಯಿಂದಸುಮಾರು 3 ಸಾವಿರ ಕ್ಯೂಸೆಕ್‌ ಅಧಿಕ ನೀರುಬಂದರೂ ಸುರಕ್ಷಿತವಾಗಿ ಹೊರಹೋಗುವಂತೆ ಕೆಆರ್‌ಎಸ್‌ ಮಾದರಿಯಲ್ಲಿ ಗೇಟ್‌ ಅಳವಡಿಸಲಾಗುತ್ತಿದೆ ಎಂದು ತಿಳಿಸಿದರು.

ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ: ತಾಲೂಕಿನಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ ಸರ್ಕಾರದಿಂದ ನೀಡುವ 1 ಲಕ್ಷದ ಪರಿಹಾರದ ಚೆಕ್‌ನ್ನು ಶಾಸಕ ಸಿ.ಎಸ್‌.ಪುಟ್ಟರಾಜು ವಿತರಿಸಿದರು. ತಾಲೂಕಿ ನಲ್ಲಿ ಕೋವಿಡ್‌ನಿಂದ ಮೃತಪಟ್ಟ ಸುಮಾರು 42 ಕುಟುಂಬಗಳಿಗೆ ಚೆಕ್‌ ವಿತರಣೆ ಮಾಡಲಾಗಿದೆ ಎಂದು ಶಾಸಕರು ತಿಳಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್‌ ಪ್ರಮೋದ್‌ ಎಲ್‌.ಪಾಟೀಲ್‌, ತಾಪಂ ಇಒ ಆರ್‌. ಪಿ.ಮಹೇಶ್‌, ಸರ್ಕಲ್‌ ಇನ್ಸ್‌ಪೆಕ್ಟರ್‌ ಕೆ.ಪ್ರಭಾಕರ್‌, ಎಚ್‌ಎಲ್‌ಬಿಸಿ ಎಇಇ ಪುಟ್ಟಮಾಯಿಗೌಡ, ಟಿಎಚ್‌ಒ ಡಾ.ಸಿ.ಎ.ಅರವಿಂದ್‌, ಸಾರ್ವಜನಿಕ ಆಸ್ಪತ್ರೆಯ ಮುಖ್ಯವೈದ್ಯಾಧಿಕಾರಿ ಡಾ. ಎಚ್‌.ಕುಮಾರ್‌, ಕೃಷಿ ಸಹಾಯಕ ನಿರ್ದೇಶಕಿ ಪ್ರಿಯದರ್ಶನಿ, ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕಿ ಎಸ್‌.ಪಿ. ಸೌಮ್ಯ, ಅಬಕಾರಿ ನಿರೀಕ್ಷಕಿ ರಮ್ಯಾ, ಗ್ರಾಪಂ ಅಧ್ಯಕ್ಷ ಕುಮಾರ್‌, ಎಂಡಿಸಿಸಿ ಬ್ಯಾಂಕ್‌ ನಿರ್ದೇಶಕ ಚಲುವರಾಜು,ಮುಖಂಡರಾದ ಎಲ್‌.ಸಿ. ರಾಜು, ಎಚ್‌ಆರ್‌ ಎಸ್‌ ಮಧುಸೂದನ್‌, ವಿ.ಎಸ್‌. ನಿಂಗೇಗೌಡ,ದೇಶವಳ್ಳಿ ಪ್ರಭಾಕರ್‌, ಭಾಸ್ಕರ್‌, ವೇಣು, ಬಲರಾಮೇಗೌಡ, ಜೆ.ಪಿ.ಶಿವ ಶಂಕರ್‌, ಜಕ್ಕನಹಳ್ಳಿ ಗ್ರಾಪಂ ಉಪಾಧ್ಯಕ್ಷ ಲೋಕೇಶ್‌ ಸೇರಿದಂತೆ ಗ್ರಾಪಂ ಉಪ ಚುನಾ ವಣೆಯಲ್ಲಿ ಆಯ್ಕೆಯಾದ ಸದಸ್ಯರು ಹಾಜರಿದ್ದರು.

ಕೃಷಿಗೂ ನೀರು ಪೂರೈಕೆ :

ಬಳಘಟ್ಟ ಏತನೀರಾವರಿ ಯೋಜನೆಯ ಎರಡನೇ ಹಂತದ ಯೋಜನೆಯನ್ನು ಧನುರ್ಮಾಸ ಮುಗಿದ ಬಳಿಕ ಚಾಲನೆನೀಡಲಾಗುವುದು. ದುದ್ದ ಹೋಬಳಿಯಕೆರೆಗೆ ನೀರು ತುಂಬಿಸುವ ಯೋಜನೆಗೂ ಇನ್ನೆರಡು ತಿಂಗಳಲ್ಲಿ ಚಾಲನೆ ನೀಡಲಾಗುವುದು. ಶ್ಯಾದನಹಳ್ಳಿ ಏತನೀರಾವರಿಯೋಜನೆಗೂ ಶೀಘ್ರವೇ ಚಾಲನೆ ನೀಡಿ ಕೆ.ಬೆಟ್ಟಹಳ್ಳಿ ಗ್ರಾಮ ವ್ಯಾಪ್ತಿಗೆ ಕೃಷಿಗೂನೀರು ಪೂರೈಕೆ ಮಾಡಲಾಗುವುದು ಶಾಸಕ ಪುಟ್ಟರಾಜು ಹೇಳಿದರು.

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suspend

Nagamangala ಗಲಭೆ: ಡಿವೈಎಸ್ಪಿ ಅಮಾನತು

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

R.Ashok, ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್‌ ದಾಖಲು

R.Ashok, ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್‌ ದಾಖಲು

Nagamangala ಗಲಭೆಗೆ ಕೇರಳ, ಪಿಎಫ್‌ಐ ನಂಟಿನ ಮಾಹಿತಿ ಇಲ್ಲ: ಎಸ್ಪಿNagamangala ಗಲಭೆಗೆ ಕೇರಳ, ಪಿಎಫ್‌ಐ ನಂಟಿನ ಮಾಹಿತಿ ಇಲ್ಲ: ಎಸ್ಪಿ

Nagamangala ಗಲಭೆಗೆ ಕೇರಳ, ಪಿಎಫ್‌ಐ ನಂಟಿನ ಮಾಹಿತಿ ಇಲ್ಲ: ಎಸ್ಪಿ

RSS ಸಂಘದ ಕಚೇರಿಗೆ ಪೊಲೀಸರು: ಪಾಂಡವಪುರ ಉದ್ವಿಗ್ನ

RSS ಸಂಘದ ಕಚೇರಿಗೆ ಪೊಲೀಸರು: ಪಾಂಡವಪುರ ಉದ್ವಿಗ್ನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.