![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Jan 1, 2022, 5:15 PM IST
ಲಾಹೋರ್: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡವನ್ನು ಶನಿವಾರ ಪ್ರಕಟಿಸಲಾಗಿದೆ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಕೆ.ಎಲ್.ರಾಹುಲ್ ಅವರನ್ನು ಏಕದಿನ ತಂಡದ ನಾಯಕನಾಗಿ ನೇಮಿಸಲಾಗಿದೆ. ವಿರಾಟ್ ಕೊಹ್ಲಿ ಅವರನ್ನು ಏಕದಿನ ತಂಡದ ನಾಯಕತ್ವದಿಂದ ಕೆಳಕ್ಕಿಳಿಸಿದ ಬಳಿಕ ನಡೆಯುತ್ತಿರುವ ಮೊದಲ ಸರಣಿ ಇದಾಗಿದ್ದು, ಕೊಹ್ಲಿ ಕೇವಲ ಆಟಗಾರನಾಗಿ ಆಡಲಿದ್ದಾರೆ.
ರೋಹಿತ್ ಶರ್ಮಾ ಅವರು ಗಾಯಗೊಂಡ ಕಾರಣ ದಕ್ಷಿಣ ಆಫ್ರಿಕಾ ಸರಣಿಗೆ ಆಯ್ಕೆಯಾಗಿಲ್ಲ. ಹೀಗಾಗಿ ಕರ್ನಾಟಕದ ಆಟಗಾರ ರಾಹುಲ್ ಗೆ ನಾಯಕತ್ವದ ಜವಾಬ್ದಾರಿ ನೀಡಲಾಗಿದೆ. ವೇಗಿ ಜಸ್ಪ್ರೀತ್ ಬುಮ್ರಾಗೆ ಮೊದಲ ಬಾರಿಗೆ ಉಪ ನಾಯಕನ ಜವಾಬ್ದಾರಿ ನೀಡಲಾಗಿದೆ.
ವಿರಾಟ್ ಕೊಹ್ಲಿ ತಂಡದಲ್ಲಿದ್ದರೂ ರಾಹುಲ್ ಗೆ ನಾಯಕತ್ವ ನೀಡಿರುವ ಬಗ್ಗೆ ಮಿಶ್ರ ಅಭಿಪ್ರಾಯ ವ್ಯಕ್ತವಾಗಿದೆ. ಈ ಬಗ್ಗೆ ಮಾತನಾಡಿದ ಪಾಕಿಸ್ಥಾನದ ಮಾಜಿ ನಾಯಕ ಸಲ್ಮಾನ್ ಭಟ್, “ವಿರಾಟ್ ಕೊಹ್ಲಿ ಇನ್ನು ತಂಡವನ್ನು ಮುನ್ನಡೆಸುವುದಿಲ್ಲ. ಹೀಗಾಗಿ ಉಪನಾಯಕನನ್ನೇ ಹಂಗಾಮಿ ನಾಯಕನಾಗಿ ಆಯ್ಕೆ ಮಾಡಿದ್ದಾರೆ. ಆತ ಐಪಿಎಲ್ ನಲ್ಲೂ ನಾಯಕತ್ವ ಮಾಡಿದ ಅನುಭವಿ, ಭವಿಷ್ಯದಲ್ಲಿ ತಂಡವನ್ನು ಮುನ್ನಡೆಸಬಲ್ಲ” ಎಂದಿದ್ದಾರೆ.
ಇದನ್ನೂ ಓದಿ:ಇಂಗ್ಲೆಂಡ್-ಐರ್ಲೆಂಡ್ ವಿರುದ್ಧದ ಸರಣಿಗೆ ವಿಂಡೀಸ್ ತಂಡ ಪ್ರಕಟ: ಸ್ಥಾನ ಪಡೆಯದ ಗೇಲ್
ತನ್ನ ಯೂಟ್ಯೂಬ್ ಚಾನೆಲ್ ನಲ್ಲಿ ಮಾತನಾಡಿರುವ ಸಲ್ಮಾನ್ ಭಟ್, “ಈ ಸಂಪ್ರದಾಯವನ್ನು ಭಾರತ ತಂಡದಲ್ಲಿ ಹಿಂದಿನಿಂದಲೂ ಪಾಲಿಸಲಾಗುತ್ತಿದೆ. ಧೋನಿ ನಾಯಕರಾಗಿದ್ದ ಸಮಯದಲ್ಲೂ ಇದು ಇತ್ತು. ಕೆಲವು ಕಠಿಣವಲ್ಲದ ಸರಣಿಗಳಿಗೆ ಅವರು ಯುವ ಆಟಗಾರರಿಗೆ ನಾಯಕತ್ವ ನೀಡುತ್ತಿದ್ದರು. ಅದು ಕೆಲಸ ಮಾಡಿದೆ ಕೂಡಾ” ಎಂದು ಹೇಳಿದ್ದಾರೆ.
ಏಕದಿನ ಸರಣಿ ಜ.19ರಿಂದ ಆರಂಭವಾಗಲಿದೆ.
ಭಾರತ ತಂಡ: ಕೆ.ಎಲ್.ರಾಹುಲ್ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಶಿಖರ್ ಧವನ್, ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ರಿಷಭ್ ಪಂತ್, ಇಶಾನ್ ಕಿಶನ್, ಯಜುವೇಂದ್ರ ಚಹಲ್, ಆರ್. ಅಶ್ವಿನ್, ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ದೀಪಕ್ ಚಹರ್, ಪ್ರಸಿದ್ಧ್ ಕೃಷ್ಣ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
You seem to have an Ad Blocker on.
To continue reading, please turn it off or whitelist Udayavani.