ಮೀಸಲಾತಿ ದುರುಪಯೋಗ ನಿಲ್ಲಲಿ : ಗುಡ್ಡಪ್ಪ
Team Udayavani, Jan 3, 2022, 9:24 PM IST
ದಾವಣಗೆರೆ: ಪರಿಶಿಷ್ಟ ಜಾತಿ ಹೆಸರಲ್ಲಿ ಸುಳ್ಳು ಜಾತಿಪ್ರಮಾಣಪತ್ರಪಡೆದಿರುವವರವಿರುದ್ಧ ದಲಿತ ಸಮುದಾಯದ ಸ್ವಾಮೀಜಿಯವರ ನೇತೃತ್ವದಲ್ಲಿ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಮಾದಿಗ ದಂಡೋರ ಸಮಿತಿ ಜಿಲ್ಲಾ ಅಧ್ಯಕ್ಷ ಎಚ್.ಸಿ. ಗುಡ್ಡಪ್ಪ ಹೇಳಿದರು.
ಶ್ರೀ ಬೀರೇಶ್ವರ ದೇವಸ್ಥಾನದಲ್ಲಿ ಭಾನುವಾರ ನಡೆದ ಮಾದಿಗ ದಂಡೋರ ಸಮಿತಿ ಜಿಲ್ಲಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಇತೀ¤ಚಿನ ದಿನಗಳಲ್ಲಿ ಪರಿಶಿಷ್ಟ ಜಾತಿ ಹೆಸರಲ್ಲಿ ಸುಳ್ಳು ಜಾತಿ ಪ್ರಮಾಣಪತ್ರ ಪಡೆಯುತ್ತಿರುವ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿದೆ. ಕೆಲವು ಜನಪ್ರತಿನಿಧಿಗಳು ಸಹ ಇಂತಹ ಕೃತ್ಯಕ್ಕೆ ಸಹಕಾರ ನೀಡುತ್ತಿರುವುದು ಅತ್ಯಂತ ಖಂಡನೀಯ ಎಂದು ದೂರಿದರು. ಅನೇಕ ವರ್ಷಗಳಿಂದ ಶೋಷಣೆಗೆ ಒಳಗಾಗಿರುವಂತಹ ಸಮಾಜವನ್ನ ಮುಖ್ಯವಾಹಿನಿಗೆ ತರುವ ಪ್ರಮುಖ ಉದ್ದೇಶದಿಂದಸರ್ಕಾರಮೀಸಲಾತಿಕಲ್ಪಿಸಿವೆ.
ಆದರೆ ಪಟ್ಟಭದ್ರ ಹಿತಾಸಕ್ತಿಗಳು ಸುಳ್ಳು ಜಾತಿ ಪ್ರಮಾಣಪತ್ರ ಪಡೆದು ನಿಜವಾಗಿಯೂ ದೊರೆಯಬೇಕಾದದ ಸೌಲಭ್ಯಗಳನ್ನು ಕಸಿದುಕೊಳ್ಳುವ ಮೂಲಕ ಮೀಸಲಾತಿಯ ಆಶಯವನ್ನೇ ಬುಡಮೇಲು ಮಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪರಿಶಿಷ್ಟ ಜಾತಿ ಹೆಸರಲ್ಲಿ ಸುಳ್ಳು ಜಾತಿ ಪ್ರಮಾಣಪತ್ರ ಪಡೆದಿರುವವರ ವಿರುದ್ಧ ದಲಿತ ಸಮುದಾಯದ ಸ್ವಾಮೀಜಿಯವರ ನೇತೃತ್ವದಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಉಗ್ರ ಸ್ವರೂಪದ ಹೋರಾಟ ನಡೆಸಲಾಗುವುದು. ಸರ್ಕಾರಗಳು ಸಹ ಸುಳ್ಳು ಜಾತಿ ಪ್ರಮಾಣಪತ್ರಪಡೆದಿರುವವರ ಪತ್ತೆ ಹಚ್ಚಿ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಮಾದಿಗ ದಂಡೋರ ಹಮ್ಮಿಕೊಳ್ಳುವ ಹೋರಾಟದಲ್ಲಿ ಲಂಬಾಣಿ, ಭೋವಿ, ಛಲವಾದಿ, ಕೊರಚ, ಕೊರಮ ಹಾಗೂ ಮೂಲ ಪರಿಶಿಷ್ಟ ಜಾತಿ ಪಟ್ಟಿಯಲ್ಲಿನ ಎಲ್ಲ ಜಾತಿ, ಸಮಾಜದ ಬಾಂಧವರು ಭಾಗವಹಿಸಬೇಕು ಎಂದು ಮನವಿ ಮಾಡಿದರು. ಜಿಪಂ ಮಾಜಿ ಸದಸ್ಯ ಎ.ಕೆ. ನಾಗಪ್ಪ ಮಾತನಾಡಿ, ಪರಿಶಿಷ್ಟ ಜಾತಿ ಹೆಸರಲ್ಲಿ ಸುಳ್ಳು ಜಾತಿಪ್ರಮಾಣಪತ್ರಪಡೆದಿರುವವರವಿರುದ್ಧ ಮಾದಾರ ಚನ್ನಯ್ಯ ಸ್ವಾಮೀಜಿ ಯವರ ನೇತೃತ್ವದಲ್ಲಿ ಹೋರಾಟ ನಡೆಯಲಿದೆ. ದಲಿತ ಸಮುದಾಯದ ಎಲ್ಲ ಸ್ವಾಮೀಜಿಯವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ
Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
MUST WATCH
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಹೊಸ ಸೇರ್ಪಡೆ
Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್ ವಿರುದ್ಧ ಕೇಸ್
Paris; ಸಂಗೀತ ಕಾರ್ಯಕ್ರಮದಲ್ಲಿ ಭಾರತೀಯ ಗಾಯಕನ ಮೇಲೆ ಮೊಬೈಲ್ ಎಸೆತ!
Huvina Hadagali: ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ; ಪ್ರಕರಣ ದಾಖಲು
Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ
Kannada Sahitya Ranga: ಅಮೆರಿಕದಲ್ಲಿ ವಸಂತೋತ್ಸವ; ಕನ್ನಡ ಸಾಹಿತ್ಯ ರಂಗದ ಸಾರ್ಥಕ ಸೇವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.