ಶಿವ-ದಿವ್ಯ ದರ್ಶನ ಸಮಾರಂಭ ಉದ್ಘಾಟನೆ


Team Udayavani, Jan 4, 2022, 2:35 PM IST

19programme

ಬೀದರ: ಕನ್ನಡ ಭಾಷೆ, ಕಲೆ, ಸಂಸ್ಕೃತಿ ಮತ್ತು ಸಂಗೀತದ ಮೂಲಕ ಶಿವ ಸೃಷ್ಟಿಯ ವೈವಿಧ್ಯಮಯ ಜೀವ ಜಗತ್ತಿನ ಸೊಬಗನ್ನು ಹೆಚ್ಚಿಸಲು ಎಲ್ಲರೂ ಕೈಜೋಡಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಶಿಂಧೆ ಹೇಳಿದರು.

ನಗರದ ನೌಬಾದ್‌ ಜ್ಞಾನ ಶಿವಯೋಗಾಶ್ರಮದಲ್ಲಿ ನಡೆದ ಮಾಸಿಕ ಶಿವ-ದಿವ್ಯ ದರ್ಶನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಯಾಂತ್ರಿಕ ಬದುಕಿನಲ್ಲಿ ಬಿಡುವಿಲ್ಲದೆ ಮನುಷ್ಯನಿಗೆ ಸುಖ-ಶಾಂತಿಯೆಂಬುದು ಮರೀಚಿಕೆಯಾಗಿದೆ. ಪರಿಸರದ ಮಡಿಲಲ್ಲಿರುವ ಇಂತಹ ಪವಿತ್ರ ಸ್ಥಳಕ್ಕೆ ಭೇಟಿ ನೀಡುವುದರಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಮುಂಬರುವ ದಿನಗಳಲ್ಲಿ ಇಲ್ಲಿ ಸಂಗೀತ, ಸಾಹಿತ್ಯ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳು ಹೆಚ್ಚು-ಹೆಚ್ಚಾಗಿ ನಡೆಯುವಂತಾಗಲು ಇಲಾಖೆಯಿಂದ ಎಲ್ಲ ರೀತಿಯ ಸಹಕಾರ ಮಾಡುವುದಾಗಿ ಹೇಳಿದರು.

ಜ್ಞಾನ ಶಿವಯೋಗಾಶ್ರಮದ ಅಧಿಪತಿ ಡಾ| ರಾಜಶೇಖರ ಶಿವಾಚಾರ್ಯರು ಸಾನ್ನಿಧ್ಯ ವಹಿಸಿ, ಬದುಕಿ ಬಾಳುವ ಪ್ರತಿಯೊಬ್ಬರು ಜೀವನದಲ್ಲಿ ಯಶಸ್ವಿಯಾಗಬೇಕಾದರೆ ಸತ್ಯ, ಶುದ್ಧ, ಪ್ರಾಮಾಣಿಕತೆ ಮೈಗೂಡಿಸಿಕೊಳ್ಳಬೇಕು. ಬೆವರು ಸುರಿಸಿ ಯಾರು ದುಡಿಯುತ್ತಾರೊ ಅವರಿಗೆ ಜೀವನದಲ್ಲಿ ಎಂದೂ ಬಡತನ, ದಾರಿದ್ಯಗಳು ಬರುವುದಿಲ್ಲ ಎಂದರು.

ಶಿವನ ಸೃಷ್ಟಿಯಲ್ಲಿ ಮೇಲು-ಕೀಳು, ಬಡವ-ಬಲ್ಲಿದ, ಗಂಡು-ಹೆಣ್ಣೆಂಬ ತಾರತಮ್ಯಗಳಿಲ್ಲ. ಸಕಲ ಜೀವ ರಾಶಿಗಳ ಕಲ್ಯಾಣ ಮಾಡುವುದು ಪರಮಾತ್ಮನ ದಿವ್ಯದೃಷ್ಟಿಯಾಗಿದೆ. ಈ ಸತ್ಯವನ್ನು ಜೀವನದಲ್ಲಿ ಯಾರು ಅಳವಡಿಸಿಕೊಳ್ಳುತ್ತಾರೊ ಅವರು ಸಫಲತೆ ಹೊಂದುತ್ತಾರೆ. ಪ್ರತಿಯೊಬ್ಬರ ನೋಡುವ ದೃಷ್ಟಿ ವಿಶಾಲವಾದಲ್ಲಿ ಈ ಸೃಷ್ಟಿಯೂ ಕೂಡ ನಮ್ಮಂತೆಯೇ ಕಾಣುವುದೆಂದು ಅವರು ಹೇಳಿದರು.

ನಗರಸಭೆ ಸದಸ್ಯೆ ಮಹಾದೇವಿ ಹುಮನಾಬಾದೆ, ಬಾಗಲಕೋಟೆಯ ಸಂಗೀತ ಪ್ರಾಧ್ಯಾಪಕ ಡಾ| ಸಿದ್ಧರಾಮಯ್ಯ ಸ್ವಾಮಿ, ಎನ್‌ಎಸ್‌ಎಸ್‌ಕೆ ಸಿಡಿಒ ಹಾವಗಿರಾವ, ಕಾಶಿನಾಥಪ್ಪ ಶಂಭು, ಸರಸ್ವತಿ ಗೌರಶೆಟ್ಟಿ ಅತಿಥಿಗಳಾಗಿದ್ದರು. ಅನಿವಾಸಿ ಭಾರತೀಯ ಶಿವಕುಮಾರ ಪಾಟೀಲ ದಂಪತಿ ಸತ್ಕರಿಸಲಾಯಿತು. ಮಾದಪ್ಪ ಭಂಗೂರೆ, ಕುಶಾಲರಾವ ಗೌರಶೆಟ್ಟೆ, ಸಂಗಶೆಟ್ಟಿ ಸಿದ್ದೇಶ್ವರ, ರಮೇಶ ಮಾಶೆಟ್ಟಿ, ಮಲ್ಲಿಕಾರ್ಜುನ, ಮಹಾಂತೇಶ, ಸುರೇಶ, ಚನ್ನಪ್ಪ, ಧನರಾಜ ಇದ್ದರು.

ಟಾಪ್ ನ್ಯೂಸ್

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರMangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

CM-Siddaramaiah

Government ಜಮೀನು ಒತ್ತುವರಿ ನಿರ್ದಾಕ್ಷಿಣ್ಯ ತೆರವು: ಸಿಎಂ ಸಿದ್ದರಾಮಯ್ಯ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

rape

Bidar; 9 ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

Chaluvarayaswamy

Farmers; ಬೆಳೆ ವಿಮೆ ‘ಷರತ್ತು’ ಬದಲಾವಣೆ: ಕೃಷಿ ಸಚಿವ ಚಲುವರಾಯಸ್ವಾಮಿ ಮಾಹಿತಿ

Swamijis should talk to High command about CM change: Chaluvarayaswamy

CM ಬದಲಾವಣೆ ಬಗ್ಗೆ ಸ್ವಾಮೀಜಿಗಳು ಬೇಕಾದರೆ ವರಿಷ್ಠರ ಜತೆ ಮಾತನಾಡಲಿ: ಚಲುವರಾಯಸ್ವಾಮಿ‌

Bidar; I was defeated for our selfishness says Bhagwanth Khuba

Bidar; ನಮ್ಮವರ ಸ್ವಾರ್ಥಕ್ಕಾಗಿ ನನಗೆ ಸೋಲಾಯಿತು…: ಭಗವಂತ ಖೂಬಾ ಬೇಸರ

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

police crime

BSP ಅಧ್ಯಕ್ಷ ಹತ್ಯೆ ಬೆನ್ನಲ್ಲೇ ಚೆನ್ನೈ ಪೊಲೀಸ್‌ ಕಮಿಷನರ್‌ ಎತ್ತಂಗಡಿ

1-mm

France ಸಂಸತ್‌ ಅತಂತ್ರ?: ಎಡಪಕ್ಷ ಕೂಟಕ್ಕೆ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.