ರಾಯಚೂರು ವಿವಿ ಅಭಿವೃದ್ಧಿಗೆ ಬದ್ದ : ಅಗಸರ
Team Udayavani, Jan 8, 2022, 7:49 PM IST
ಕಲಬುರಗಿ: ಗುಲಬರ್ಗಾ ವಿವಿಯಿಂದ ಬೇರ್ಪಟ್ಟು ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ರಾಯಚೂರು ವಿವಿ ನಡುವೆ ವಿವಿಯಲ್ಲಿ ಶೈಕ್ಷಣಿಕ ಅಭಿವೃದ್ಧಿ ಕುರಿತು ಸುದೀರ್ಘ ಚರ್ಚೆ ನಡೆಯಿತು.
ಗುಲಬರ್ಗಾ ವಿವಿ ಸಿಂಡಿಕೇಟ್ ಸಭಾಂಗಣದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯ ಕುಲಪತಿ ಪ್ರೊ| ದಯಾನಂದ ಅಗಸರ, ರಾಯಚೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ| ಹರೀಶ ರಾಮಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಜಂಟಿ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾಗುವ ಅಂಶಗಳ ಬಗ್ಗೆ ಚರ್ಚಿಸಲಾಯಿತು.
ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ರಾಯಚೂರು ವಿಶ್ವವಿದ್ಯಾಲಯದ ಶೈಕ್ಷಣಿಕ ಅಭಿವೃದ್ಧಿ, ಆಡಳಿತಾತ್ಮಕವಾಗಿ ಬೇಕಾಗುವ ಎಲ್ಲ ಸಂಪನ್ಮೂಲ ಒದಗಿಸಲು ಗುಲಬರ್ಗಾ ವಿಶ್ವವಿದ್ಯಾಲಯ ಸದಾ ಸಿದ್ಧವಿದೆ ಎಂದು ಪ್ರೊ| ಅಗಸರ ಪ್ರಕಟಪಡಿಸಿದರು. ಅಲ್ಲದೇ ಈ ಎರಡು ವಿಶ್ವವಿದ್ಯಾಲಯಗಳು ಪರಿವರ್ತನಾ ಅವ ಧಿಯಲ್ಲಿ ಯಾವ ಗೊಂದಲವೂ (ಗುಲಬರ್ಗಾ ವಿಶ್ವವಿದ್ಯಾಲಯ) ಇಲ್ಲ ದಂತೆ ಉಭಯ ವಿಶ್ವವಿದ್ಯಾಲಯಗಳ ಅಧಿ ಕಾರಿಗಳಿಗೂ ಹಾಗೂ ಸಿಬ್ಬಂದಿ ವರ್ಗದವರಿಗೂ ಸೂಕ್ತ ಮಾರ್ಗದರ್ಶನ, ಆದೇಶ ನೀಡಿದರು.
ರಾಯಚೂರು ವಿವಿ ಕುಲಪತಿಗಳಾದ ಪ್ರೊ| ಹರೀಶ ರಾಮಸ್ವಾಮಿ ಮಾತನಾಡಿ, ವಿಶ್ವ ವಿದ್ಯಾಲಯಗಳು ಕೈ ಜೋಡಿಸಿ ಗುಣಾತ್ಮಕ, ಕ್ರಿಯಾಶೀಲ, ಸೃಜನಶೀಲತೆಯಿಂದ ಕೂಡಿದಂತ ವ್ಯವಸ್ಥೆ ಗಟ್ಟಿಗೊಳಿಸಿ ವಿದ್ಯಾರ್ಥಿ ಸಮುದಾಯಕ್ಕೆ ಶ್ರೇಷ್ಠ ಮತ್ತು ಗುಣಮಟ್ಟದ ಶಿಕ್ಷಣ ನೀಡುವಲ್ಲಿ, ಸ್ಪರ್ಧಾತ್ಮಕವಾಗಿ ಜಾಗತಿಕ ಮಟ್ಟದಲ್ಲಿ ಬೆಳೆಯುವಂತ ವಾತಾವರಣ ನಿರ್ಮಿಸಲು ಕಂಕಣ ಬದ್ಧವಾಗಿವೆ ಎಂದರು.
ಗುಲಬರ್ಗಾ ವಿಶ್ವವಿದ್ಯಾಲಯದ ಸಹಕಾರ ಮತ್ತು ಬೆಂಬಲಕ್ಕೆ ಕೃತಜ್ಞತೆ ತಿಳಿಸಿ, ಭವಿಷ್ಯದಲ್ಲಿಯೂ ಇದೇ ರೀತಿ ಬಾಂಧವ್ಯ ಮುಂದುವರಿಯಲಿ ಎಂದು ಆಶಿಸಿದರು. ಗುಲಬರ್ಗಾ ವಿವಿ ಕುಲಸಚಿವ ಶರಣಬಸಪ್ಪ ಕೋಟೆಪ್ಪಗೋಳ ಸ್ವಾಗತಿಸಿದರು, ರಾಯಚೂರು ವಿವಿ ಕುಲಸಚಿವ ಪ್ರೊ| ವಿಶ್ವ ನಾಥ ಎಂ. ವಂದಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ
ಹೊಸ ಮಾರುಕಟ್ಟೆಗೆ ಪ್ರವೇಶ: ಕೊಲ್ಹಾಪುರ ಮಾರುಕಟ್ಟೆಗೆ ಕಲಬುರಗಿ ಹಾಲು!
Kalaburagi: ಅಧಿಕಾರಿಗಳಿಗೆ ಕೊಬ್ಬು ಹೆಚ್ಚಾಗಿದೆ; ಚಳಿ ಬಿಡಿಸಬೇಕಿದೆ: ಬಿ.ಆರ್.ಪಾಟೀಲ್
Govt.,: ನಾಲ್ಕು ವರ್ಷವಾದರೂ ಸಿಕ್ಕಿಲ್ಲ ವಿವಾಹ ಪ್ರೋತ್ಸಾಹಧನ!
Kalaburagi: ಮದ್ಯದ ಗುಂಗಿನಲ್ಲಿ ಪತ್ನಿಯನ್ನು ಕೊಂದ ಪತಿ!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.