![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 9, 2022, 8:46 AM IST
ಮುಂಬೈ: ಹಲವಾರು ವಂಚನೆ ಪ್ರಕರಣಗಳಲ್ಲಿ ಸಿಲುಕಿರುವ ಕಾಮನ್ ಮ್ಯಾನ್ ಸುಕೇಶ್ ಚಂದ್ರಶೇಖರ್ ಜೊತೆಗಿನ ತನ್ನ ಆತ್ಮೀಯ ಫೋಟೊಗಳು ವೈರಲ್ ಆದ ಬಳಿಕ ಬಾಲಿವುಡ್ ನಟಿ ಜಾಕ್ವೆಲಿನ್ ಫೆರ್ನಾಂಡೀಸ್ ಮೊದಲ ಬಾರಿಗೆ ಮೌನ ಮುರಿದಿದ್ದಾರೆ.
ಈ ಬಗ್ಗೆ ನಟಿ ಜಾಕ್ವೆಲಿನ್ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದು, “ನ್ಯಾಯ ಮತ್ತು ಉತ್ತಮ ಪ್ರಜ್ಞೆ ಮೇಲುಗೈ ಸಾಧಿಸಲಿದೆ” ಎಂದು ಬರೆದುಕೊಂಡಿದ್ದಾರೆ”.
ಸುಕೇಶ್ ಚಂದ್ರಶೇಖರ್ ವಿರುದ್ಧ 200 ಕೋಟಿ ರೂಪಾಯಿಗಳ ವಂಚನೆ ಪ್ರಕರಣ ಬೆಳಕಿಗೆ ಬಂದ ಬಳಿಕ ಆತನಿಗೆ ನಟಿಯ ಜೊತೆಗಿದ್ದ ಸ್ನೇಹ ಸಂಬಂಧದ ಹಲವು ವಿಚಾರಗಳು ಹೊರಬಂದಿತ್ತು. ಇಬ್ಬರು ಒಟ್ಟಿಗಿದ್ದ ಫೋಟೊಗಳೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಶನಿವಾರ ಇವರಿಬ್ಬರ ಮತ್ತೊಂದು ಫೋಟೊ ವೈರಲ್ ಆಗಿತ್ತು. ಇದಾದ ಬೆನ್ನಲ್ಲೇ ಜಾಕ್ವೆಲಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮೌನ ಮುರಿದ್ದಾರೆ.
ಇದನ್ನೂ ಓದಿ:ಪೊಲೀಸ್ ಕಸ್ಟಡಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಬುಲ್ಲಿಬಾಯಿ ಆ್ಯಪ್ ಆರೋಪಿ ನೀರಜ್
“ಈ ದೇಶ ಮತ್ತು ಇದರ ಜನರು ನನಗೆ ಅಪಾರ ಪ್ರೀತಿ ಗೌರವವನ್ನು ನೀಡಿದ್ದಾರೆ. ಇದರಲ್ಲಿ ನನ್ನ ಮಾಧ್ಯಮದ ಸ್ನೇಹಿತರು ಸೇರಿದ್ದಾರೆ, ಅವರಿಂದ ನಾನು ಬಹಳಷ್ಟು ಕಲಿತಿದ್ದೇನೆ. ನಾನು ಪ್ರಸ್ತುತ ಕೆಟ್ಟ ಸಮಯವನ್ನು ಕಳೆಯುತ್ತಿದ್ದೇನೆ. ನನ್ನ ಸ್ನೇಹಿತರು ಮತ್ತು ನನ್ನ ಅಭಿಮಾನಿಗಳು ನಾನೇನೆಂದು ಹಿಂದಿನಿಂದಲೂ ನೋಡಿದ್ದಾರೆ. ಈ ನಂಬಿಕೆಯಿಂದಲೇ ನಾನು ನನ್ನ ಮಾಧ್ಯಮ ಮಿತ್ರರಿಗೆ ನನ್ನ ಖಾಸಗಿತನ ಮತ್ತು ವೈಯಕ್ತಿಕ ಜಾಗಕ್ಕೆ ಧಕ್ಕೆ ತರುವ ಸ್ವಭಾವದ ಚಿತ್ರಗಳನ್ನು ಪ್ರಸಾರ ಮಾಡದಂತೆ ವಿನಂತಿಸುತ್ತೇನೆ. ನ್ಯಾಯ ಮತ್ತು ಒಳ್ಳೆಯ ಪ್ರಜ್ಞೆಯು ಮೇಲುಗೈ ಸಾಧಿಸುತ್ತದೆ ಎಂದು ಭಾವಿಸುತ್ತೇವೆ. ಧನ್ಯವಾದಗಳು” ಎಂದು ಶ್ರೀಲಂಕಾ ಮೂಲದ ನಟಿ ಜಾಕ್ವೆಲಿನ್ ಬರೆದುಕೊಂಡಿದ್ದಾರೆ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.