ಮೇಕೆದಾಟು ಪಾದಯಾತ್ರೆ ಆರಂಭ: ಪಾಂಚಜನ್ಯ ಮೊಳಗಿದೆ ಎಂದ ಡಿ.ಕೆ.ಶಿವಕುಮಾರ್


Team Udayavani, Jan 9, 2022, 12:22 PM IST

1-sdd

ಕನಕಪುರ : ”ಐತಿಹಾಸಿಕ ಹೋರಾಟಕ್ಕೆ ಪಾಂಚಜನ್ಯ ಮೊಳಗಿದೆ ಇದು ಕನ್ನಡಿಗರ ಹಕ್ಕು ಮತ್ತು ಸ್ವಾಭಿಮಾನದ ʼಸಂಗಮ’ʼ. ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಭಾನುವಾರ ‘ನಮ್ಮ ನೀರು ನಮ್ಮ ಹಕ್ಕು” ಪಾದಯಾತ್ರೆಗೆ ಚಾಲನೆ ನೀಡಿ ಟ್ವೀಟ್ ಮಾಡಿದ್ದಾರೆ.

ಮೇಕೆದಾಟು ಸಂಗಮದಲ್ಲಿ ಸರ್ವಧರ್ಮಗುರುಗಳು ಸಸಿಗಳಿಗೆ ನೀರೆರೆಯುವ ಮೂಲಕ ನಡಿಗೆ ಆರಂಭಕ್ಕೆ ಚಾಲನೆ ನೀಡಿದರು. ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಅವರು ನಗಾರಿ ಬಾರಿಸುವ ಮೂಲಕ ಹೋರಾಟಕ್ಕೆ ಜೋಶ್ ತುಂಬಿದರು.

ಕಾಂಗ್ರೆಸ್ ನ ಹಿರಿಯ ನಾಯಕರು,ಸಂಸದರು, ಶಾಸಕರು, ಮಹಿಳಾ ಪ್ರತಿನಿಧಿಗಳು ಸೇರಿದಂತೆ ಸಾವಿರಾರು ಕಾರ್ಯಕರ್ತರು ಭಾಗಿಯಾಗಿದ್ದು, ಕಾರ್ಯಕ್ರಮದಲ್ಲಿ ಕೋವಿಡ್ ನಿಯಮಗಳನ್ನು ಗಾಳಿಗೆ ತೂರಲಾಗಿರುವುದು ಕಂಡು ಬಂದಿದೆ. ಹೆಚ್ಚಿನ ನಾಯಕರೇ ಮಾಸ್ಕ್ ಧರಿಸದೇ ಭಾಗಿಯಾಗಿದ್ದರು.

ಪಾದಯಾತ್ರೆಗೆ ಯಾವ್ಯಾವ ಜಿಲ್ಲೆಯವರು, ಯಾವ್ಯಾವ ದಿನದಂದು ಭಾಗವಹಿಸಬೇಕು ಎಂಬ ಸೂಚನೆ ಈಗಾಗಲೆ ಆಯಾ ಜಿಲ್ಲೆಗೆ ನೀಡಲಾಗಿದೆ. ಅಲ್ಲದೆ ಪಾದಯಾತ್ರೆ ವೇಳೆ ನೀರು ಸರಬರಾಜು, ಆಹಾರ, ವೈದ್ಯಕೀಯ, ವಸತಿ ಹೀಗೆ ಪ್ರಮುಖ ಅಂಶಗಳಿಗೆ ಪ್ರತ್ಯೇಕ ಸಮಿತಿ ರಚಿಸಲಾಗಿದೆ ಎಂದು ಕಾಂಗ್ರೆಸ್‌ ಕಾರ್ಯಕರ್ತರು ತಿಳಿಸಿದ್ದಾರೆ.

ಪಾದಯಾತ್ರೆ ನಡೆಯುವ ದಿಗಳಲ್ಲಿ ಪ್ರತಿನಿತ್ಯ ತಲಾ ಒಂದು ಲೋಕಸಭಾ ಹಾಗೂ ವಿಧಾನಸಭಾ ಕ್ಷೇತ್ರದ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಲಿ ದ್ದಾರೆ. ಮೊದಲ ದಿನ ಭಾನುವಾರ ಪಕ್ಷದ ಮುಖಂಡರು ಮತ್ತು ಪ್ರಮುಖ ಕಾರ್ಯಕರ್ತರಿಗೆ ಹಾಗೂ ಚಾಮರಾಜನಗರ ಹಾಗೂ ಕೊಡಗು ವ್ಯಾಪ್ತಿಯ ಪಕ್ಷದ ಕಾರ್ಯಕರ್ತರಿಗೆ ಅವಕಾಶ ಕೊಡಲಾಗಿದೆ.

ಎರಡನೇ ದಿನ ಚಾಮರಾಜನಗರ ಜಿಲ್ಲೆ ಹಾಗೂ ಕನಕಪುರ ಕ್ಷೇತ್ರ, ಮೂರನೇ ದಿನದ ಪಾದಯಾತ್ರೆಯಲ್ಲಿ ಚಾಮರಾಜನಗರ ಲೋಕಸಭಾ ಹಾಗೂ ಮೈಸೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮುಖಂಡರು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. 4ನೇ ದಿನದ ಪಾದಯಾತ್ರೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ, 5ನೇ ದಿನ ಮಂಡ್ಯ ಹಾಗೂ ರಾಮನಗರ ಜಿಲ್ಲೆ , 6ನೇ ದಿನ ತುಮಕೂರು ಲೋಕಸಭಾ ಕ್ಷೇತ್ರ ಹಾಗೂ ಮಾಗಡಿ ವಿಧಾನ ಸಭಾ ಕ್ಷೇತ್ರದ ಮುಖಂಡರು,ಕಾರ್ಯಕರ್ತರು ಪಾದಯಾತ್ರೆ ಯಲ್ಲಿ ಭಾಗವಹಿಸಲಿದ್ದಾರೆ.

7ನೇ ದಿನ ಬೆಂಗಳೂರು ನಗರ ವ್ಯಾಪ್ತಿಯ ನೆಲಮಂಗಲ, ವಿಜಯನಗರ ರಾಜರಾಜೇಶ್ವರಿ ನಗರ, ಬಸವನಗುಡಿ, ಯಶವಂತಪುರ, ಗೋವಿಂದರಾಜನಗರ, ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರ, 8ನೇ ದಿನ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ಸೇರಿದಂತೆ ಬೆಂಗಳೂರಿನ ಬೊಮ್ಮನಹಳ್ಳಿ,ಬಿಟಿಎಂ ಲೇಔಟ್ , ಜಯನಗರ, ಶಾಂತಿನಗರ,ಬೆಂಗಳೂರು ದಕ್ಷಿಣ ಹಾಗೂ ಸಿ.ವಿ.ರಾಮನ್‌ ನಗರ ಕ್ಷೇತ್ರದ ಮುಖಂಡರು, ಕಾರ್ಯಕರ್ತರು ಭಾಗವಹಿಸುವರು.

9ನೇ ದಿನದ ಪಾದಯಾತ್ರೆಯಲ್ಲಿ ಹೊಸಕೋಟೆ, ಯಲಹಂಕ, ಹೆಬ್ಟಾಳ, ಗಾಂಧಿನಗರ, ರಾಜಾಜಿನಗರ, ಶಿವಾಜಿನಗರ, ಮಹಾಲಕ್ಷ್ಮೀ ಲೇಔಟ್, ದೇವನಹಳ್ಳಿ ಸೇರಿದಂತೆ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ಹಾಗೂ 11ನೇ ದಿನ ಚಿಕ್ಕಪೇಟೆ, ಶಿವಾಜಿ ನಗರ, ದಾಸರಹಳ್ಳಿ, ಗಾಂಧಿನಗರ ವಿಧಾನಸಭಾ ಕ್ಷೇತ್ರ ಸೇರಿದಂತೆ ಬೀದರ್‌, ಶಿವಮೊಗ್ಗ, ಕಲಬುರ್ಗಿ, ಬಳ್ಳಾರಿ ರಾಯಚೂರು ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಜಿಲ್ಲೆ ಗಳಿಂದ ಮುಖಂಡರು ಕಾರ್ಯಕರ್ತರ ಸಮ್ಮಿಲನದಲ್ಲಿ ಪಾದಯಾತ್ರೆ ಸಾಗಿ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಸಮಾವೇಶಗೊಳ್ಳಲಿದೆ ಎಂಬ ಮಾಹಿತಿ ಇದೆ.

ಟಾಪ್ ನ್ಯೂಸ್

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.