ಶಾಸಕ ರವೀಂದ್ರ ಶ್ರೀಕಂಠಯ್ಯ ವಿರುದ್ದ ಸಚಿವ ನಾರಾಯಣ ಗೌಡ ಕಿಡಿ


Team Udayavani, Jan 9, 2022, 8:16 PM IST

1-sdsa

ಶ್ರೀರಂಗಪಟ್ಟಣ : ಉಲ್ಭಣಿಸಿರುವ ಕೋವಿಡ್ ಸಮಸ್ಯೆ ನಿರ್ವಹಣೆ ವಿಚಾರದಲ್ಲಿ ಸಚಿವರು ಮತ್ತು ಜಿಲ್ಲಾಡಳಿತ ನಿರ್ಲಕ್ಷ್ಯ ತೋರುತ್ತಿದೆ ಎಂದು ಆರೋಪ ಮಾಡಿದ್ದ ಶ್ರೀರಂಗಪಟ್ಟಣ ಕ್ಷೇತ್ರದ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ವಿರುದ್ದ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ಅವರು ಭಾನುವಾರ ಕಿಡಿ ಕಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶ್ರೀರಂಗಪಟ್ಟಣದ ಕೋವಿಡ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಶಾಸಕರು ಇಲ್ಲ ಸಲ್ಲದ ಆರೋಪ ಮಾಡಬಾರದು.ಅವರಿಂದ ನಾನೇನು ಕಲಿಯಬೇಕಿಲ್ಲ.ಅವರು ಕೇವಲ ಒಂದು ಸಾರಿ ಮಾತ್ರ ಗೆದ್ದು ಶಾಸಕರಾಗಿದ್ದಾರೆ ನಾನು‌ ಮೂರು ಸಾರಿ ಗೆದ್ದು ಮಂತ್ರಿ ಆಗಿದ್ದೇನೆ ಎಂದರು.

ನಾನು ಹೇಳಿದ ಮೇಲೆಯೇ ಇಲ್ಲ ಎಲ್ಲಾ ಸೌಕರ್ಯಗಳು ಆಗಿರುವುದು. ಅವರೇನು ಅವರ ಮನೆಯಿಂದ ತಂದು‌ ಮಾಡುತ್ತಿಲ್ಲ ಎಂದು ಕಿಡಿ ಕಾರಿದರು.

ಕಳೆದ ಒಂದು ಮತ್ತು ಎರಡನೆಯ ಅಲೆಯ ಸಂದರ್ಭದಲ್ಲಿ ಬಂದ ಅನುದಾನ ಲೆಕ್ಕ ಕೊಟ್ಟಿಲ್ಲ ಎಂದಿರುವ ರವೀಂದ್ರ ಅವರಿಗೆ ತಿರುಗೇಟು ನೀಡಿ, ಅವರು ಸರ್ಕಾರಕ್ಕೆ ಈ ಬಗ್ಗೆ ಅರ್ಜಿ‌ಹಾಕಿ ತಗೆದುಕೊಳ್ಳಲಿ.ಇಲ್ಲಿ ನಾವೇನು‌ ಕೊಳ್ಳೆ ಹೊಡೆದಿಲ್ಲ. ಆರೋಪ ಮಾಡೋದಕ್ಕೆ ದಾಖಲೆ ಇರಬೇಕು ಗಾಳಿಯಲ್ಲಿ ಗುಂಡು ಹಾರಿಸುವ ತರ ಮಾತನಾಡಬಾರದು ಎಂದರು.

ಕಳೆದ ಕೋವಿಡ್ ಸಂಧರ್ಭದಲ್ಲಿ ನಾವು ಹೇಗೆ ಕೋವಿಡ್ ನಿರ್ವಹಣೆ ಮಾಡಿದ್ದೇವೆ ಅನ್ನುವುದು ನಿಮಗೆಲ್ಲ ಗೊತ್ತು‌.ಈ ಶಾಸಕರಿಂದ ಏನು‌ ಕಲಿಯಬೇಕಿಲ್ಲ.ಸೋಂಕಿತರಿಗೆ ಏನೇ ಬೇಕಾದರು ಸರ್ಕಾರವೇ ಮಾಡಬೇಕು. ಇವರೇನು ಮಾಡುತ್ತಾರಾ? ಅವತ್ತು ಕೂಡ ಇಲ್ಲಿಯ ಶಾಸಕರು ಫೋನ್ ‌ಮಾಡಿದ್ದರು. ನಾನೇ ಖುದ್ದು ಮಾತನಾಡಿ ಸಮಸ್ಯೆ ಬಗೆ ಹರಿಸಿ ಸೌಲಭ್ಯ ಕಲ್ಪಿಸಿದ್ದೇನೆ.ಅವರು ಆರೋಪ ಮಾಡಿದರು ಅಂತಾ ನಾನು‌ ಇಲ್ಲಿಗೆ ಬಂದಿಲ್ಲ.ನಾನು‌ ನನ್ನ ಜಿಲ್ಲೆ ಅಂತಾ ನಾನೇ ಬಂದ್ದೀದ್ದೇನೆ. ಒಂದು ವೇಳೆ ಈ ಕೋವಿಡ್ ವಿಚಾರದಲ್ಲಿ ಅಧಿಕಾರಿಗಳು ತಪ್ಪು ಮಾಡಿದರೆ ಖಂಡಿತಾ ಅವರಿಗೆ ಶಿಕ್ಷೆ ಆಗುತ್ತದೆ ಎಂದರು.

ಕೋವಿಡ್ ನಿರ್ವಹಣೆ ವಿಚಾರದಲ್ಲಿ ಯಾರು ರಾಜಕೀಯ ಮಾಡಬಾರದು ಅವರಿಗೆ ಇದು ಅವರ ತಾಲೂಕು ಅವರು ಕೂಡ ಸೇವಾ ಮನೋಭಾವನೆಯಿಂದ ಮಾಡಬೇಕು. ಸೇವೆ ಮಾಡುವ ಇಚ್ಚೆ ಇದ್ದರೆ ಮಾಡಿಲಿ ಇಲ್ಲವೇ ನಮ್ಮ ಸರ್ಕಾರದ ವತಿಯಿಂದಲೇ ಎಲ್ಲರಿಗೂ ವ್ಯವಸ್ಥೆ ಕಲ್ಪಿಸಿತ್ತೇವೆ ಎಂದು ತಿರುಗೇಟು‌ ನೀಡಿದರು.

ಸಮಸ್ಯೆಗೆ ಸ್ಪಂದಿಸಿದ ತಾಲೂಕಿನ ತಹಶೀಲ್ದಾರ್ ಸೇರಿದಂತೆ ಡಿಸಿ ಯವರಿಗೂ ರವರಿಗೂ ಫೋನ್ ಮೂಲಕ ತರಾಟೆಗೆ ತೆಗೆದುಕೊಂಡರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.