![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jan 9, 2022, 10:45 PM IST
ಶಿಮ್ಲಾ: ಪ್ರವಾಸಿಗರ ರಾಜ್ಯವಾದ ಹಿಮಾಚಲ ಪ್ರದೇಶದ ಹಲವು ಸ್ಥಳಗಳಲ್ಲಿ ಭಾರೀ ಪ್ರಮಾಣದ ಹಿಮವರ್ಷವಾಗುತ್ತಿದ್ದು, ರಾಜ್ಯದ 400ಕ್ಕೂ ಅಧಿಕ ಪ್ರಮುಖ ರಸ್ತೆಗಳಲ್ಲಿ ಭಾನುವಾರ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಶಿಮ್ಲಾ, ಮನಾಲಿಯಂಥ ಪ್ರಮುಖ ಪ್ರವಾಸಿ ತಾಣಗಳಿಗೂ ರಸ್ತೆ ಸಂಪರ್ಕ ಕಡಿತಗೊಳಿಸಲಾಗಿದೆ.
ಕುಫ್ರಿ ಪ್ರದೇಶದಲ್ಲಿ ಅತಿ ಹೆಚ್ಚು ಅಂದರೆ 55 ಇಂಚು ಹಿಮವರ್ಷವಾಗಿದೆ. ಸೋಮವಾರವೂ ಹಿಮವರ್ಷ ಮುಂದುವರಿಯಲಿದೆ ಎಂದು ಎಚ್ಚರಿಸಲಾಗಿದೆ. ಇದೇ ವೇಳೆ ಉತ್ತರ ಕಾಶ್ಮೀರದ ಗುಲ್ಮರ್ಗ್ನಲ್ಲಿ ಶನಿವಾರ ರಾತ್ರಿ ಉಷ್ಣಾಂಶ ಮೈನಸ್ 10 ಡಿಗ್ರಿ ಸೆಲ್ಸಿಯೆಸ್ಗೆ ತಲುಪಿದೆ. ಅಮರನಾಥ ಯಾತ್ರೆಯ ಬೇಸ್ ಕ್ಯಾಂಪ್ ಆಗಿರುವ ಪಗಲ್ಗಂನಲ್ಲಿ ಮೈನಸ್ 1.8 ಡಿಗ್ರಿ ಸೆ. ಉಷ್ಣಾಂಶ ವರದಿಯಾಗಿದೆ.
ನೆರೆ ರಾಷ್ಟ್ರ ಪಾಕಿಸ್ತಾನದ ಪ್ರವಾಸಿತಾಣವಾದ ಮುರ್ರೀಯಲ್ಲಿ ಶನಿವಾರ ಸಂಭವಿಸಿದ ಅನಿರೀಕ್ಷಿತ ಹಿಮವರ್ಷದಿಂದಾಗಿ ಸಾವಿ ಗೀ ಡಾ ದ ವರ ಸಂಖ್ಯೆ ಭಾನುವಾರ 23ಕ್ಕೆ ಏರಿಕೆಯಾಗಿದೆ.
ಪಂಜಾಬ್, ಹರ್ಯಾಣ, ದಿಲ್ಲಿಯಲ್ಲಿ ಮಳೆ:
ಶನಿವಾರ ರಾತ್ರಿಯಿಂದ ಪಂಜಾಬ್, ಹರ್ಯಾಣ ಮತ್ತು ನವದೆಹಲಿಯ ಹಲವೆಡೆ ಭಾರೀ ಪ್ರಮಾಣದಲ್ಲಿ ಮಳೆಯಾಗಿದೆ. ಪಂಜಾಬ್ನಲ್ಲಿ 10.2 ಡಿಗ್ರಿ ಸೆಲ್ಸಿಯೆಸ್, ಹರ್ಯಾಣದಲ್ಲಿ 11.8 ಡಿಗ್ರಿ ಸೆಲ್ಸಿಯೆಸ್ ಮತ್ತು ದೆಹಲಿಯಲ್ಲಿ 13.8 ಡಿಗ್ರಿ ಸೆಲ್ಸಿಯೆಸ್ ಉಷ್ಣಾಂಶ ದಾಖ ಲಾ ಗಿ ದೆ. ದೆಹಲಿಯಲ್ಲಿ ಕಳೆದ 22 ವರ್ಷಗಳ ಜನವರಿಯ ಏಕದಿನದಲ್ಲಿ ಸುರಿದ ಮಳೆಯ ದಾಖಲೆಗಳೆಲ್ಲವನ್ನೂ ಶನಿವಾರದ ಮಳೆ ಮುರಿದಿದ್ದಾಗಿ ತಿಳಿಸಲಾಗಿದೆ.
ಇದನ್ನೂ ಓದಿ : ಹುಬ್ಬಳ್ಳಿ :ಪತಿ ನಡೆಸುತ್ತಿದ್ದ ಲಾಡ್ಜ್ ನಲ್ಲೇ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ಪತ್ನಿ
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.