![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jan 10, 2022, 4:10 PM IST
ಬೆಂಗಳೂರು:ಸಚಿವ ಎಸ್.ಟಿ.ಸೋಮಶೇಖರ್ ಪುತ್ರನಿಗೆ ಬ್ಲ್ಯಾಕ್ಮೇಲ್ ಮಾಡಿದ ಪ್ರಕರಣದಲ್ಲಿ ನನ್ನ ಪುತ್ರಿಯ ಪಾತ್ರ ಇಲ್ಲವೇ ಇಲ್ಲ ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ನನ್ನ ಪುತ್ರಿಯ ಮೇಲೆ ಆರೋಪ ಕೇಳಿಬಂದಿದೆ. ಡಿ.28ರಂದು ಸಿಸಿಬಿ ಅಧಿಕಾರಿಗಳು ನನ್ನ ಮನೆಗೆ ಬಂದಿದ್ದರು. ಡಿ.29ರಂದು ಮದುವೆ ಮುಗಿಸಿಕೊಂಡು ಬೆಂಗಳೂರಿಗೆ ಬಂದಿದ್ದೆ. ಸಚಿವ ಎಸ್.ಟಿ.ಸೋಮಶೇಖರ್ ಜತೆ ಚರ್ಚಿಸಿದ್ದೇನೆ ಎಂದು ಹೇಳಿದರು.
ಸೋಮಶೇಖರ್, ನಾನು ಒಳ್ಳೆಯ ಸ್ನೇಹಿತರಾಗಿದ್ದೇವೆ. ಈ ಬಗ್ಗೆ ತನಿಖೆಯಾಗಲಿ ಎಂದು ಚರ್ಚೆ ಮಾಡಿದೆವು. ತನಿಖೆಯಾಗಿ ತಪ್ಪಿತಸ್ಥರ ವಿರುದ್ಧ ಕ್ರಮ ಆಗಲಿ ಎಂದು ಹೇಳಿದರು.
ನನ್ನ ಪುತ್ರಿ ಯಾವುದೇ ರೀತಿಯ ತಪ್ಪು ಮಾಡಿಲ್ಲ. ಹಣಕ್ಕಾಗಿ ಇಂಥ ಕೆಲಸ ಮಾಡುವ ಅನಿವಾರ್ಯತೆ ನಮ್ಮಕುಟುಂಬಕ್ಕೆ ಇಲ್ಲ. ಅಷ್ಟಕ್ಕೂ ನನ್ನ ಮಗಳು ಭಾರತದಲ್ಲಿ ಇಲ್ಲ. ಅವಳು ಇಂಗ್ಲೆಂಡ್ ನಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ ಎಂದು ಸ್ಪಷ್ಟಪಡಿಸಿದರು.
ಸಿಮ್ ಹೇಗೆ ಬಂತು ? :
ಹಾಗಾದರೆ ಶಾಸಕರ ಪುತ್ರಿ ಹೆಸರಿನಲ್ಲಿರುವ ಸಿಮ್ ಆರೋಪಿ ರಾಹುಲ್ ಭಟ್ ಕೈಗೆ ಹೇಗೆ ಬಂತು ಎಂಬ ಸಿಸಿಬಿ ಪ್ರಶ್ನೆಗೆ ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಪುತ್ರಿ, ರಾಕೇಶ್ ಅಪ್ಪಣ್ಷ ಸ್ನೇಹಿತರಾಗಿದ್ದು ಆಕೆಯಿಂದ ಯುಕೆ ನೋಂದಾಯಿತ ಸಿಮ್ ಪಡೆದಿದ್ದ. ಆತ ರಾಹುಲ್ ಭಟ್ ಗೆ ಸ್ನೇಹಿತ ನಾಗಿದ್ದು ಪರಸ್ಪರ ಸಿಮ್ ವರ್ಗಾಯಿಸಿಕೊಂಡಿರಬಹುದು. ಈ ಬಗ್ಗೆ ತನಿಖೆ ನಡೆಸಿ.ನಾನು ಸಹಕರಿಸುತ್ತೇನೆ ಎಂದು ಸಿಸಿಬಿ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.