ಪಾದಯಾತ್ರೆ ಕಾಂಗ್ರೆಸ್ನ ಚುನಾವಣಾ ಗಿಮಿಕ್: ಭರತ್ ಶೆಟ್ಟಿ ಲೇವಡಿ
Team Udayavani, Jan 10, 2022, 1:04 PM IST
ಮಂಗಳೂರು: ಮೇಕೆದಾಟು ಪಾದಯಾತ್ರೆ ಕಾಂಗ್ರೆಸ್ನ ಚುನಾವಣಾ ಗಿಮಿಕ್ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ ಭರತ್ ಶೆಟ್ಟಿ ಲೇವಡಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಮಹದಾಯಿ ಯೋಜನೆ, ಮೇಕೆದಾಟು ಯೋಜನೆ ಪೂರ್ಣಗೊಳಿಸುವ ಎಲ್ಲಾ ಅವಕಾಶಗಳಿತ್ತು. ತಮಿಳುನಾಡಿನಲ್ಲಿ ಕಾಂಗ್ರೆಸ್ ನ ಮಿತ್ರಪಕ್ಷ ಡಿಎಂಕೆ ಅಧಿಕಾರದಲ್ಲಿದೆ, ಮಾತುಕತೆ ನಡೆಸಿ ಪೂರ್ಣಗೊಳಿಸಬಹುದಾಗಿದೆ. ನಮ್ಮ ಸರಕಾರವು ಸಂಪೂರ್ಣ ಬೆಂಬಲ ನೀಡಲಿದೆ. ಆದರೆ ರಾಜಕೀಯ ಉದ್ದೇಶದಿಂದ ಕೊರೊನಾ ಮಹಾಮಾರಿಯ ನಡುವೆ ಪಾದಯಾತ್ರೆ ಹಮ್ಮಿಕೊಂಡಿರುವುದು ಅವರಿಗೆ ರಾಜ್ಯದ ಜನರ ಆರೋಗ್ಯದ ಮೇಲೆ ಕಾಳಜಿ ಇಲ್ಲದಂತೆ ಕಾಣುತ್ತಿದೆ. ಅಲ್ಲದೆ ಮೇಕೆದಾಟು ಪಾದಯಾತ್ರೆ ಆರಂಭದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರಿಗೆ ಪಾದಯಾತ್ರೆಯ ನಡುವೆ ವೈಮನಸ್ಸು ಉಂಟಾಗಿದೆ ಎಂದರು.
ಧಾರ್ಮಿಕ ವಿಚಾರಗಳಲ್ಲಿ ಯಾರಾದರೂ ನಂಬಿಕೆಗಳನ್ನು ಲೇವಡಿ ಮಾಡುವುದನ್ನು ಸಹಿಸಲಾಗದು. ಆಯಾ ಸಮಾಜದ ಧರ್ಮಗುರುಗಳು ಮುಖಂಡರು ಇಂತಹ ಕೃತ್ಯ ಎಸಗುವವರಿಗೆ ಸರಿಯಾದ ಮಾರ್ಗದರ್ಶನವನ್ನು ನೀಡುವುದು ಒಳಿತು ಎಂದು ಭರತ್ ಶೆಟ್ಟಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ
Puttur: ಮೊದಲ ಕಿನ್ನಿಪಿಲಿಗೆ 48 ವರ್ಷ!; 15ರಿಂದ 75ಕ್ಕೇರಿದ ಟೀಮ್
Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ
Belthanagdy:ಹಿರಿಯ ಸಹಕಾರಿ,ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸೇವಾಸಂಘದ ಅಧ್ಯಕ್ಷ ನಿಧನ
Mangaluru: ಮುಮ್ತಾಜ್ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.