ನಿಧನರಾಗಿ 8 ತಿಂಗಳಾದರೂ‌ ಇನ್ನೂ ‌ಮೃತರೇ ಅಧ್ಯಕ್ಷರು!


Team Udayavani, Jan 11, 2022, 10:46 AM IST

2name

ಶಿರಸಿ: ಮೃತರಾಗಿ ಎಂಟು ತಿಂಗಳಾದರೂ‌ ಆಧುನಿಕ‌ ನಡೆಯಲ್ಲಿ ವಿಫುಲ ಹೆಜ್ಜೆ ಇಡುತ್ತಿರುವ ಕನ್ನಡ‌ ಮತ್ತು ಸಂಸ್ಕ್ರತಿ ‌ಇಲಾಖೆಯ ವೆಬ್ ಸೈಟ್ ನಲ್ಲಿ ಮೃತರೇ ಅಧ್ಯಕ್ಷರಾಗಿ ‌ಮುಂದುವರಿದಿದ್ದಾರೆ.

ಕಳೆದ ಏಪ್ರಿಲ್ 18ರಂದು ಅಕಾಲಿಕವಾಗಿ ಅಗಲಿದ ಯಕ್ಷಗಾನ‌ ಅಕಾಡಮಿ ಅಧ್ಯಕ್ಷ ಪ್ರೋ ಎಂ.ಎ.ಹೆಗಡೆ ಅವರ‌ ಜಾಗಕ್ಕೆ ಸರಕಾರ ಆಡಳಿತಾಧಿಕಾರಿ ನೇಮಕ‌ ಮಾಡಿದ್ದರ ಬಗ್ಗೆ ಆಕ್ಷೇಪ, ಅಸಮಧಾನಗಳು ಬಂದ ಬೆನ್ನಲ್ಲೇ, ವೆಬ್ ಸೈಟಿನಲ್ಲಿ  ಎಂ.ಎ.ಹೆಗಡೆ ಅವರ ಹೆಸರನ್ನು ಬದಲಾಯಿಸದೇ ಇರುವುದು ಆಕ್ಷೇಪಕ್ಕೆ ಕಾರಣವಾಗಿದೆ.

ಕನ್ನಡ ನಾಡು‌ ನುಡಿ, ಕಲೆಯ ಸೇವೆಗಾಗಿ ಇರುವ‌ ಕನ್ನಡ‌ ಮತ್ತು ಸಂಸ್ಕ್ರತಿ ಇಲಾಖೆ ತನ್ನ ವ್ಯಾಪ್ತಿಯಲ್ಲಿ ‌ಹದಿನಾರು ವೈವಿಧ್ಯಮಯ ಅಕಾಡೆಮಿಗಳನ್ನು ನಡೆಸುತ್ತದೆ. ಈ ಅಕಾಡೆಮಿ ಹಾಗೂ ಇಲಾಖೆಯ ಮಾಹಿತಿ ನೀಡುವ ವೆಬ್ ಸೈಟಿನಲ್ಲಿ ಪ್ರೋ. ಎಂ ಎ.ಹೆಗಡೆ ಅವರ ಹೆಸರು‌ ಇನ್ನೂ ಇದೆ.

ಅನೇಕ ರಚನಾತ್ಮಕ ಚಟುವಟಿಕೆ ನಡೆಸಿ ಇಡೀ ರಾಜ್ಯದ ಬಡಗು, ತೆಂಕು, ಬಡಾಬಡಗು,‌ಮೂಡಲಪಾಯದ ಕಲಾವಿದರ ಗಮನ ಸೆಳೆದಿದ್ದ ಎಂ.ಎ.ಹೆಗಡೆ ಅವರು ಅಕಾಡೆಮಿಯ‌ ಪ್ರಥಮ ಅಧ್ಯಕ್ಷರಾಗಿದ್ದರು.  ಮೂರು ಬಾರಿ ಅಧ್ಯಕ್ಷರಾದರೂ ಚುನಾವಣೆ, ಕೋವಿಡ್ ಸೇರಿದಂತೆ ಅಧಿಕಾರ ಬಳಸಲು‌ ಎರಡುವರೆ ವರ್ಷದಲ್ಲಿ 12 ತಿಂಗಳು ಗಟ್ಟಿ‌ ಸಿಕ್ಕಿರಲಿಲ್ಲ. ಕಳೆದ ಏ.18ಕ್ಕೆ ಮೊದಲಿಗೆ ಕೋವಿಡ್ ಸೋಂಕು ತಗುಲಿ ನಂತರ ಹೃದಯಾಘಾತದಿಂದ‌ ಮೃತರಾಗಿದ್ದರು.

ಸಂಸ್ಕ್ರತ, ಇಂಗ್ಲೀಷ್, ಕನ್ನಡದ‌ ಮೇರು ಪಂಡಿತ, ಯಕ್ಷಕವಿ ಎಂ.ಎ.ಹೆಗಡೆ ಅವರು ಹಾಕಿಕೊಟ್ಟ ಕನಸು, ಮಾರ್ಗದಲ್ಲಿ ನಡೆಯುವ ಅಧ್ಯಕ್ಷರ‌ ನೇಮಕ ಆಗಬೇಕಿತ್ತು. ನಿಜಕ್ಕೂ ಸರಕಾರ ಆ ಮೂಲಕ ಅವರಿಗೆ ಗೌರವ ಸಲ್ಲಿಸಬಹುದಾಗಿತ್ತು.ಆದರೆ, ಇತ್ತ ಆಡಳಿತಾಧಿಕಾರಿ‌ ನೇಮಕ‌ ಮಾಡಿದೆ. ಅತ್ತ ವೆಬ್ ಸೈಟ್ ನಲ್ಲೂ ಹೆಸರಿಟ್ಟಿದೆ! ಈ‌ ಮೂಲಕ ಸರಕಾರದಲ್ಲಿ‌ ಏನೂ ಸಾಧ್ಯ ಎಂಬುದಕ್ಕೆ ಇದು ಉದಾಹರಣೆ ಎಂಬ ಮಾತುಗಳೂ ಕೇಳಿ ಬಂದಿದೆ.

ಅಪ್ಪಟ‌ ಕನ್ನಡದ ಕಲೆ ಯಕ್ಷಗಾನಕ್ಕೆ ಬಲ ಕೊಡಲು ಅಕಾಡೆಮಿ ಬಲವಾಗಿಸಲು ಸಮರ್ಥ ಅಧ್ಯಕ್ಷರ ಸ್ಥಾನಕ್ಕೆ ವಿದ್ವಾಂಸರ ನೇಮಕ‌ ಮಾಡಬೇಕು. ವೆಬ್ ಸೈಟ್‍ನಲ್ಲಿ ಉಂಟಾದ ಮಾಹಿತಿ ಕೊರತೆ ಕೂಡ ಸರಿ‌ ಮಾಡಬೇಕು ಎಂಬ ಆಗ್ರಹ ಕೇಳಿ ಬಂದಿದೆ. ಕ್ರಿಯಾಶೀಲ ಸಚಿವ ಸುನೀಲ್ ಕುಮಾರರು, ನಿರ್ದೇಶಕ ರಂಗಪ್ಪ ಅವರು ಸ್ಪಂದಿಸುತ್ತಾರೆಯೇ ಕಾದು ನೋಡಬೇಕಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.