ಕಾವೇರಿದ ಚುನಾವಣ ಕಣ; ಉ.ಪ್ರದೇಶ: 24 ಗಂಟೆಗಳಲ್ಲಿ ಇಬ್ಬರು ಸಚಿವರ ರಾಜೀನಾಮೆ


Team Udayavani, Jan 13, 2022, 6:55 AM IST

ಕಾವೇರಿದ ಚುನಾವಣ ಕಣ; ಉ.ಪ್ರದೇಶ: 24 ಗಂಟೆಗಳಲ್ಲಿಇಬ್ಬರು ಸಚಿವರ ರಾಜೀನಾಮೆ

ಹೊಸದಿಲ್ಲಿ: ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಪಂಚರಾಜ್ಯಗಳಲ್ಲಿ ಚುನಾವಣ ಕಾವು ಏರತೊಡಗಿದ್ದು, “ವಲಸೆ ಹಕ್ಕಿ’ಗಳ ಕಲರವ ತೀವ್ರಗೊಂಡಿದೆ. ಉತ್ತರಪ್ರದೇಶದಲ್ಲಂತೂ ಕೇವಲ 24 ಗಂಟೆಗಳ ಅವಧಿಯಲ್ಲಿ ಸಿಎಂ ಯೋಗಿ ಆದಿತ್ಯನಾಥ್‌ ಸಂಪುಟದ ಇಬ್ಬರು ಸಚಿವರು ರಾಜೀನಾಮೆ ನೀಡಿದ್ದಾರೆ. ಕಾರ್ಮಿಕ ಸಚಿವ ಸ್ವಾಮಿ ಪ್ರಸಾದ್‌ ಮೌರ್ಯ ಅವರು ಪದತ್ಯಾಗ ಮಾಡಿದ ಬೆನ್ನಲ್ಲೇ ಬುಧವಾರ ಮತ್ತೂಬ್ಬ ಒಬಿಸಿ ನಾಯಕ, ಅರಣ್ಯ ಸಚಿವ ದಾರಾಸಿಂಗ್‌ ಚೌಹಾಣ್‌ ಕೂಡ ರಾಜೀನಾಮೆ ನೀಡಿ ಸಮಾಜವಾದಿ ಪಕ್ಷದತ್ತ ನಡೆದಿದ್ದಾರೆ.

ಈ ಬೆಳವಣಿಗೆಯು ಬಿಜೆಪಿಗೆ ಆಘಾತ ನೀಡಿದ್ದರೆ ಎಸ್‌ಪಿಗೆ ಹೆಚ್ಚಿನ ಬಲ ತಂದುಕೊಟ್ಟಿದೆ. ರಾಜ್ಯದಲ್ಲಿ ಯಾದವೇತರ ಒಬಿಸಿಗಳ ಮತಗಳನ್ನು ಸೆಳೆಯಲು ಸಮಾಜವಾದಿ ಪಕ್ಷಕ್ಕೆ ಇದು ನೆರವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಬುಧವಾರ ಮಾತನಾಡಿರುವ ಮೌರ್ಯ, “ಬಿಜೆಪಿಗೆ ವಾಪಸಾಗುವ ಪ್ರಶ್ನೆಯೇ ಇಲ್ಲ. ಶುಕ್ರವಾರ ಎಸ್‌ಪಿಗೆ ಸೇರ್ಪಡೆಯಾಗುತ್ತೇನೆ’ ಎಂದಿದ್ದಾರೆ. ಇನ್ನೊಂದೆಡೆ, ಬಿಜೆಪಿ ಶಾಸಕ ಅವತಾರ್‌ ಇಸಂಗ್‌ ಭದಾನಾ ಬುಧವಾರ ಜಯಂತ್‌ ಚೌಧರಿ ನೇತೃತ್ವದ ಆರ್‌ಎಲ್‌ಡಿಗೆ ಸೇರಿದ್ದಾರೆ.

ಬಿಜೆಪಿಗೂ ಲಾಭ: ಅತ್ತ ಬಿಜೆಪಿಯಿಂದ ಎಸ್ಪಿಗೆ ಹಲವು ನಾಯಕರು ವಲಸೆ ಹೋದಂತೆ, ಇತ್ತ ಬಿಜೆಪಿಗೂ ಬೇರೆ ಪಕ್ಷಗಳಿಂದ ನಾಯಕರ ಆಗಮನವಾಗುತ್ತಿದೆ. ಬುಧವಾರ ಕಾಂಗ್ರೆಸ್‌ ಶಾಸಕ ನರೇಂಶ್‌ ಸೈನಿ ಮತ್ತು ಎಸ್‌ಪಿ ಶಾಸಕ ಹರಿ ಓಂ ಯಾದವ್‌ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ರಾಜೀನಾಮೆ ಬೆನ್ನಲ್ಲೇ ವಾರಂಟ್‌: ವಿಶೇಷವೆಂದರೆ, ಬಿಜೆಪಿಗೆ ರಾಜೀನಾಮೆ ನೀಡಿದ ಮಾರನೇ ದಿನವೇ ಮಾಜಿ ಸಚಿವ ಸ್ವಾಮಿ ಪ್ರಸಾದ್‌ ಮೌರ್ಯ ವಿರುದ್ಧ ಸ್ಥಳೀಯ ಕೋರ್ಟ್‌ ಬಂಧನ ವಾರಂಟ್‌ ಜಾರಿ ಮಾಡಿದೆ. 7 ವರ್ಷಗಳ ಹಿಂದೆ ಹಿಂದೂ ದೇವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಪ್ರಕರಣ ಸಂಬಂಧ ವಾರಂಟ್‌ ಜಾರಿ ಮಾಡಲಾಗಿದೆ.

ಇದನ್ನೂ ಓದಿ:ಯೋಗಿ ಆದಿತ್ಯನಾಥ್ ರನ್ನು ಅಯೋಧ್ಯೆಯಿಂದ ಕಣಕ್ಕಿಳಿಸಲು ಬಿಜೆಪಿ ಸಿದ್ಧತೆ?

ಉಪಾಧ್ಯಾಯ ವಜಾ: ಉತ್ತರಾಖಂಡದಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇರೆಗೆ ರಾಜ್ಯ ಘಟಕದ ಮಾಜಿ ಅಧ್ಯಕ್ಷರಾಗಿದ್ದ ಕಿಶೋರ್‌ ಉಪಾಧ್ಯಾಯ ಅವರನ್ನು ಕಾಂಗ್ರೆಸ್‌ ಎಲ್ಲ ಹುದ್ದೆಗಳಿಂದ ವಜಾ ಮಾಡಿದೆ. ಉಪಾಧ್ಯಾಯ ಅವರು ರಾಜ್ಯ ಕಾಂಗ್ರೆಸ್‌ ಸಮನ್ವಯ ಸಮಿತಿ ಅಧ್ಯಕ್ಷರಾಗಿಯೂ, ರಾಜ್ಯ ಕಾಂಗ್ರೆಸ್‌ ಕೋರ್‌ ಕಮಿಟಿ ಮತ್ತು ಉತ್ತರಾಖಂಡ ಕಾಂಗ್ರೆಸ್‌ ಪ್ರದೇಶ ಚುನಾವಣ ಸಮಿತಿ ಸದಸ್ಯರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು.

ಕೇಜ್ರಿವಾಲ್‌ ಪಂಜಾಬ್‌ ಮಾದರಿ ಅನಾವರಣ
ಆಮ್‌ ಆದ್ಮಿ ಪಕ್ಷದ “ಪಂಜಾಬ್‌ ಮಾದರಿ’ಯನ್ನು ಅನಾವರಣ ಮಾಡಿರುವ ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್‌, “ಯುವಕರಿಗೆ ಉದ್ಯೋಗ, ಭ್ರಷ್ಟಾಚಾರಮುಕ್ತ ಆಡಳಿತ, ಧಾರ್ಮಿಕ ಅಪಚಾರ ಪ್ರಕರಣಗಳಲ್ಲಿ ನ್ಯಾಯ’ ಒದಗಿಸಿಕೊಡುವ ಭರವಸೆ ನೀಡಿದ್ದಾರೆ. 300 ಯುನಿಟ್‌ವರೆಗೆ ಉಚಿತ ವಿದ್ಯುತ್‌, ಡ್ರಗ್‌ ಹಾವಳಿಗೆ ಬ್ರೇಕ್‌, 16 ಸಾವಿರ ಮೊಹಲ್ಲಾ ಕ್ಲಿನಿಕ್‌ ಸ್ಥಾಪನೆ, 18 ವರ್ಷ ದಾಟಿದ ಮಹಿಳೆಯರಿಗೆ ಮಾಸಿಕ 1,000 ರೂ. ನೀಡುವುದಾಗಿಯೂ ಘೋಷಿಸಿದ್ದಾರೆ. ಈ ನಡುವೆ, ಪಂಜಾಬ್‌ ಅಸೆಂಬ್ಲಿ ಚುನಾವಣೆಯಲ್ಲಿ ಕಣಕ್ಕಿಳಿಯಲು ಸಿದ್ಧತೆ ನಡೆಸಿರುವ ರೈತ ಸಂಘಟನೆಗಳ ಒಕ್ಕೂಟವಾದ ಸಂಯುಕ್ತ ಸಮಾಜ್‌ ಮೋರ್ಚಾ ಬುಧವಾರ 10 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಸಮ್ರಾಲಾ ಕ್ಷೇತ್ರದಿಂದ ರೈತರ ನಾಯಕ ಬಲ್ಬಿàರ್‌ ಸಿಂಗ್‌ ರಾಜೇವಾಲ್‌ ಕಣಕ್ಕಿಳಿಯಲಿದ್ದಾರೆ.

73,000 ಲೀ. ಮದ್ಯ, 1,825 ಕೆಜಿ ಗಾಂಜಾ!
ಉತ್ತರಪ್ರದೇಶದಲ್ಲಿ ಚುನಾವಣ ನೀತಿ ಸಂಹಿತೆ ಜಾರಿಯಾದ ಬಳಿಕ ಈವರೆಗೆ 1.45 ಕೋಟಿ ರೂ. ಮೌಲ್ಯದ 73 ಸಾವಿರ ಲೀಟರ್‌ ಮದ್ಯ ಹಾಗೂ 2.5 ಕೋಟಿ ರೂ. ಮೌಲ್ಯದ 1,825 ಕೆಜಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ ಎಂದು ಚುನಾವಣ ಆಯೋಗ ಮಾಹಿತಿ ನೀಡಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.