ನಗರ ಸೌಂದರ್ಯದ ಜತೆ ತ್ಯಾಜ್ಯ ನಿರ್ವಹಣೆ


Team Udayavani, Jan 14, 2022, 4:10 AM IST

ನಗರ ಸೌಂದರ್ಯದ ಜತೆ ತ್ಯಾಜ್ಯ ನಿರ್ವಹಣೆ

ಬೆಳ್ತಂಗಡಿ: ಕೇವಲ 11 ವಾರ್ಡ್‌ಗಳನ್ನು ಹೊಂದಿರುವ ಬೆಳ್ತಂಗಡಿ ನ.ಪಂ.ಗೆ ತ್ಯಾಜ್ಯ ನಿರ್ವಹಣೆ ಜತೆಗೆ ಪಟ್ಟಣದ ಸೌಂದರ್ಯ ಕಾಪಾಡುವುದು ಸವಾಲಾಗಿತ್ತು. ಇದೀಗ ಅಮೃತ ನಿರ್ಮಲ ನಗರ ಯೋಜನೆಯಡಿ ನ.ಪಂ.ಗೆ 1 ಕೋ.ರೂ. ಅನುದಾನ ದೊರೆತಿ ರುವುದು ವರದಾನ ವಾಗಿದೆ.

ಪ್ರಥಮ ಆದ್ಯತೆಯಾಗಿ ತ್ಯಾಜ್ಯ ನಿರ್ವಹಣ ಘಟಕ ನಿರ್ಮಾಣ ಪೂರ್ವ ಯೋಜಿತವಾಗಿ ಹಸಿ-ಒಣ ಕಸ ವಿಂಗ ಡಿಸಿ ನೀಡಿದರಷ್ಟೇ ತ್ಯಾಜ್ಯ ಸಂಗ್ರಹಕ್ಕೆ ಮುಂದಾಗಿದೆ.

ನಗರ ಸೌಂದರ್ಯಕ್ಕೆ ಆದ್ಯತೆ :

ನಗರದ ತ್ಯಾಜ್ಯವನ್ನು ಪ್ರಸಕ್ತ ಕಾಶಿಬೆಟ್ಟು ಅರಳಿ ಸಮೀಪ ಮೀಸಲಿರಿಸಿದ 2.50 ಎಕ್ರೆಯಲ್ಲಿ ಸುರಿಯಲಾಗುತ್ತಿದೆ. ಈ ಪ್ರದೇಶದಲ್ಲಿ ತ್ಯಾಜ್ಯ ಘಟಕ ಸ್ಥಾಪಿಸಿ ಹಸಿ-ಒಣ ಕಸ ವಿಂಗಡಿಸಲು ಯೋಜನೆ ರೂಪಿಸಲಾಗಿದೆ. ಈಗಾಗಲೇ ಎರಡು ಖಾಸಗಿ ಕಂಪೆನಿಗಳು ಘಟಕ ನಿರ್ವಹಣೆಗೆ ಆಸಕ್ತಿ ತೋರಿದ್ದು, ಶಾಸಕರು ಹಾಗೂ ಆಡಳಿತ ಮಂಡಳಿ ಸಭೆ ನಡೆಸಿ ಕ್ರಿಯಾ ಯೋಜನೆ ರೂಪಿ ಸಲಿದೆ. ಜತೆಗೆ ಕೋರ್ಟ್‌ ರಸ್ತೆಯಲ್ಲಿರುವ ಕೆರೆ ಅಭಿವೃದ್ಧಿ ಸಹಿತ ನಗರದ ಆಯ್ದ ಸ್ಥಳಗಳಲ್ಲಿ ಗಿಡ ನೆಡುವ ಚಿಂತನೆ ಕೈಗೆತ್ತಿ ಕೊಂಡಿದೆ.

ಹೊಸ ಪ್ರಯೋಗ  :

ಈ ಹಿಂದೆ ಹಸಿ-ಕಸ ವಿಂಗಡಿಸಿ ನೀಡುವಂತೆ ನಿಯಮ ರೂಪಿಸಿದ್ದರೂ ಸಮರ್ಪಕವಾಗಿ ಕಾರ್ಯಗತಗೊಂಡಿ ರಲಿಲ್ಲ. ಭವಿಷ್ಯದಲ್ಲಿ ತ್ಯಾಜ್ಯ ಸಮಸ್ಯೆ ತಲೆದೋರುವ ಸಾಧ್ಯತೆಯಿದ ಪ್ರತಿ ಗ್ರಾ.ಪಂ. ನಲ್ಲಿ ತ್ಯಾಜ್ಯ ಘಟಕ ನಿರ್ಮಾಣಕ್ಕೆ ಅದ್ಯತೆ   ನೀಡಲಾಗುತ್ತಿದೆ. ಪಟ್ಟಣದಲ್ಲಿ ಹೊಟೇಲ್‌, ಮಳಿಗೆಗಳು, ಸರಕಾರಿ ವಸತಿ  ಗೃಹಗಳು, ಸಂತೆಮಾರುಕಟ್ಟೆ, ಮನೆ ನಿವೇ ಶನಗಳಿರುವುದರಿಂದ ಹೆಚ್ಚು ತ್ಯಾಜ್ಯ ಉತ್ಪತ್ತಿ ಆಗುತ್ತದೆ.

ಪ್ಲಾಸ್ಟಕ್‌ ನಿಷೇಧಕ್ಕೆ ಆದ್ಯತೆ :

ಪ್ಲಾಸ್ಟಿಕ್‌ ನಿಷೇಧಕ್ಕೆ ಆದ್ಯತೆ ನೀಡುತ್ತಿದ್ದು, ಈ ಬಗ್ಗೆ ಮಳಿಗೆಗಳಿಗೆ ದಾಳಿ ನಡೆಸಿ ದಂಡ ವಿಧಿಸುವುದು, ಸಾರ್ವಜನಿಕ ಪ್ರದೇಶಗಳಲ್ಲಿ ಪ್ಲಾಸ್ಟಿಕ್‌ ಸಹಿತ ತ್ಯಾಜ್ಯ ಹಾಕುವವರ ವಿರುದ್ಧ ಕ್ರಮ ಕೈಗೊಳ್ಳಲು ಚಿಂತಿಸಲಾಗಿದೆ. ಹಸಿಕಸ, ಒಣಕಸ ವಿಂಗಡನೆಗೆ ನ.ಪಂ. ಎಲ್ಲ ಸಿಬಂದಿ ವಾರದ ಒಂದು ದಿವಸ ಸಮವಸ್ತ್ರ ಬಳಸುವ ಮೂಲಕ ಜಾಗೃತಿ ಮೂಡಿಸಿ ಮಾದರಿಯಾಗಿದ್ದಾರೆ. ಹಸುರು ಬಣ್ಣದ ಸಮವಸ್ತ್ರ  ತೊಟ್ಟು ಹಸಿ ಕಸ ಸಂಗ್ರಹ, ನೀಲಿ ಬಣ್ಣದ ಸಮವಸ್ತ್ರ ಧರಿಸುವ ಮೂಲಕ ಒಣ ಕಸ ಸಂಗ್ರಹ ಎಂಬ ಜಾಗೃತಿ ಮೂಡಿಸುತ್ತಿದ್ದಾರೆ. ಸ್ವತ್ಛತಾ ವಿಲೇವಾರಿಗಾಗಿ ಪ್ರತೀ ನಿತ್ಯ ಮೂರು ವಾಹನಗಳು, 9 ಪೌರಕಾರ್ಮಿಕರನ್ನು ನೇಮಕ ಮಾಡಲಾಗಿದೆ.

ನಗರದ ಪ್ರಮುಖ ರಸ್ತೆಗಳ ಬದಿಗಳಲ್ಲಿ ಸಾರ್ವಜನಿಕ ತೊಟ್ಟಿಗಳನ್ನು ಕಸ ಸಂಗ್ರಹಣೆಗಾಗಿ ಇಡಲಾಗಿತ್ತು. ಇದ ರಿಂದ ವಿಂಗಡಣೆ ಸವಾಲಾಗಿತ್ತು. ಹೊರ ಪ್ರದೇಶದಿಂದ ಕಸಗಳನ್ನು ತಂದು ಹಾಕು ವುದು, ಬೀದಿ ನಾಯಿಗಳ ಹಾವಳಿ ಸೇರಿದಂತೆ ಎಲ್ಲ ಸಮಸ್ಯೆಗಳಿಂದ ಮುಕ್ತ ಗೊಳಿಸಲು ಸಾರ್ವಜನಿಕ ತೊಟ್ಟಿಗಳನ್ನು ನಿಷೇಧಿಸಿದ್ದು ತ್ಯಾಜ್ಯ ಸಂಗ್ರಹ ವಾಹನ ಗಳಿಂದ ಮಾತ್ರ ಕಸ ಸಂಗ್ರಹ ವಾಗುತ್ತಿದೆ.ರಜನಿ ಕುಡ್ವ , ಅಧ್ಯಕ್ಷರು, ನ.ಪಂ. ಬೆಳ್ತಂಗಡಿ

ತ್ಯಾಜ್ಯ ಸಂಗ್ರಹಣೆ ಮತ್ತು ವಿಲೇವಾರಿಗೆ ಇನ್ನಷ್ಟು ವೇಗ ನೀಡುವ ಕಾರ್ಯವನ್ನು ಮಾಡಲಾಗುತ್ತಿದೆ. ತ್ಯಾಜ್ಯ ಸಂಗ್ರಹಣೆಗೆ ಮೂರು ಸಂಸ್ಥೆಗಳು ಈಗಾಗಲೇ ಭೇಟಿಯಾಗಿದ್ದು, ಇದರಲ್ಲಿ ಸೂಕ್ತ ಯಾವುದು ಎಂದು ನಿರ್ಣಯಿಸಿ ಆ ಸಂಸ್ಥೆಗಳಿಗೆ ತ್ಯಾಜ್ಯ ವಿಲೇವಾರಿಗೆ ನೀಡಲಾಗುತ್ತದೆ.  ಸುಧಾಕರ್‌, ಮುಖ್ಯಾಧಿಕಾರಿ,  ನ.ಪಂ. ಬೆಳ್ತಂಗಡಿ

ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

Threats: ವಡೋದರಾ, ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್

Threats: ವಡೋದರಾ, ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-kadaba

Kadaba: ಕಾರು – ಬೈಕ್‌ ಅಪಘಾತ; ಸವಾರ ಮೃತ್ಯು

Tumbe

illegal Sand: ತುಂಬೆ, ಮಾರಿಪಳ್ಳ: ಮರಳು ಅಡ್ಡೆಗೆ ದಾಳಿ; 20 ಬೋಟ್‌ಗಳ ವಶ

POlice

Belthangady: ಅಕ್ರಮ ಗೋ ಸಾಗಾಟ, ಐದು ಹಸು ವಾಹನ ವಶಕ್ಕೆ

Electric

Uppinangady: ವಿದ್ಯುತ್‌ ಆಘಾತ: ಕೊಯಿಲ ಗ್ರಾಮದ ವ್ಯಕ್ತಿ ಸಾವು

dw

Belthangady: ಮರದಿಂದ ಬಿದ್ದು ವ್ಯಕ್ತಿ ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.