ಮಾನವನ ದುರಾಸೆಯಿಂದ ಪ್ರಕೃತಿ ನಾಶ: ನಾಗೇಶ್
Team Udayavani, Jan 13, 2022, 9:17 PM IST
ಕೆ.ಆರ್.ಪೇಟೆ: ಮನುಷ್ಯನ ಉದಾಸೀನತೆ, ದುರಾಸೆ, ತಿಳಿಗೇಡಿತನದಿಂದ ಪ್ರಕೃತಿ ನಾಶವಾಗುತ್ತಿದೆ ಎಂದು ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಎಚ್. ಆರ್. ನಾಗೇಶ್ ತಿಳಿಸಿದರು.
ತಾಲೂಕಿನ ಅಘಲಯ ಗ್ರಾಪಂ ವ್ಯಾಪ್ತಿಯ ಹಳೇ ಅತ್ತಿಗುಪ್ಪೆ ಗ್ರಾಮದಲ್ಲಿ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದಿಂದ ಆಯೋಜಿಸಿರುವ ಸ್ವಾತಂತ್ರ್ಯ ಭಾರತ ಅಮೃತ ಮಹೋತ್ಸವ-75ರ ಅಂಗವಾಗಿ ಅಮೃತ ಸಮುದಾಯ ಅಭಿವೃದ್ಧಿ ಯೋಜನೆಯಡಿ 2022ನೇ ಸಾಲಿನ ವಾರ್ಷಿಕ 7 ದಿನಗಳ ವಿಶೇಷ ಶ್ರಮದಾನ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು.
ಗ್ರಾಮೀಣ ಜನರಲ್ಲಿ ಸಮುದಾಯ ಅಭಿವೃದ್ಧಿಯ ಬಗ್ಗೆ ಕಾಳಜಿ, ಸಂಘಟಿತ ಶ್ರಮದಾನದಿಂದ ಆಗುವ ಅಭಿವೃದ್ಧಿ, ಜಾತಿ àಯತೆಯ ನಿರ್ಮೂಲನೆ, ಸಂಕುಚಿತ ಮನೋಭಾವನೆಯುಳ್ಳ ವ್ಯಕ್ತಿಗಳ ವಿಕಸನಗಳು ರಾಷ್ಟ್ರೀಯ ಸೇವಾ ಯೋಜನೆಯ ಶಿಬಿ ರಾರ್ಥಿಗಳು ಗ್ರಾಮಗಳಲ್ಲಿ ಶ್ರಮದಾನ, ಸಾಂಸ್ಕೃತಿಕ ಕಾರ್ಯ ಕ್ರಮ ಮತ್ತು ವ್ಯಕ್ತಿ ವಿಕಸನಗಳ ಬಗ್ಗೆ ಜಾಗೃತಿ ಮೂಡಿಸಿ ಗ್ರಾಮ ಸ್ಥರಲ್ಲಿ ಅರಿವು ಮೂಡಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದರು. ರೈತರು, ಜಾನುವಾರುಗಳು ಪ್ಲಾಸ್ಟಿಕ್ ತ್ಯಾಜ್ಯದಿಂದ ದೂರವಿರುವಂತೆ ಬೀದಿ ನಾಟಕದ ಮೂಲಕ ಜಾಗೃತಿಗೊಳಿಸಿ ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪತ್ರಾಂಕಿತ ವ್ಯವಸ್ಥಾಪಕ ಬಿ.ಎ.ಮಂಜುನಾಥ್, ಎನ್.ಎಸ್.ಎಸ್ ಅಧಿಕಾರಿ ಶಶಿಕುಮಾರ್ ಬಿ.ಎಸ್., ಕನ್ನಡ ಉಪನ್ಯಾಸಕ ಪಿ.ಕೆ.ಧನಂಜಯ, ಅರ್ಥಶಾಸ್ತ್ರ ಉಪನ್ಯಾಸಕ ಎಂ.ಕೆ.ಮಂಜುನಾಥ್, ಮನೋಶಾಸ್ತ್ರ ವಿಭಾಗದ ಮುಖ್ಯಸ್ಥ ಶ್ಯಾಮ್ ಎಚ್.ಆರ್. ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’
Israel: ಹಮಾಸ್,ಹೆಜ್ಬುಲ್ಲಾ, ಸಿರಿಯಾ ಜೊತೆಗೆ ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ದಾಳಿ
Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ
Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!
Social Networks Use: ಸಾಮಾಜಿಕ ಜಾಲತಾಣ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕಡಿವಾಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.