ಮೊಳಕೆಯೊಡೆಯದ ನೆಲಗಡಲೆ ಬೀಜ; ಆತಂಕದಲ್ಲಿ ಕರಾವಳಿ ಕೃಷಿಕರು


Team Udayavani, Jan 15, 2022, 5:17 PM IST

ಮೊಳಕೆಯೊಡೆಯದ ನೆಲಗಡಲೆ ಬೀಜ; ಆತಂಕದಲ್ಲಿ ಕರಾವಳಿ ಕೃಷಿಕರು

ತೆಕ್ಕಟ್ಟೆ: ಇಲ್ಲಿನ ಗ್ರಾ.ಪಂ. ವ್ಯಾಪ್ತಿಯಲ್ಲಿ ಈ ಬಾರಿ ಕರಾವಳಿ ರೈತರಿಗೆ ಕುಂದಾಪುರ ಕೃಷಿ ಇಲಾಖೆಯಿಂದ ಪೂರೈಕೆಯಾದ ನೆಲಗಡಲೆ ಬೀಜವನ್ನು ಈಗಾಗಲೇ ನೂರಾರು ಎಕರೆ ಭೂಮಿಯಲ್ಲಿ ಬಿತ್ತನೆ ಮಾಡಲಾಗಿದ್ದು, ಕೆಲವು ಪರಿಸರದಲ್ಲಿ ಬೀಜ ಬಿತ್ತನೆ ಮಾಡಿ ದಿನಗಳೇ ಕಳೆದರೂ ಮೊಳಕೆಯೊಡೆಯದಿರುವ ಬಗ್ಗೆ ಕರಾವಳಿಯ ನೆಲಗಡಲೆ ಕೃಷಿಕರಲ್ಲಿ ಆತಂಕ ಸೃಷ್ಟಿಯಾಗಿದೆ.

ಕುಂದಾಪುರ ಕೃಷಿ ಇಲಾಖೆಯ ವತಿಯಿಂದ ಕೊಮೆ ಕೊರವಡಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ರೈತರಿಗೆ ವಿತರಣೆಯಾದ ನೆಲಗಡಲೆ ಬೀಜವು ಇಲ್ಲಿನ ಕೊರವಡಿ, ಕೊಮೆ, ತೆಕ್ಕಟ್ಟೆ, ಗೋಪಾಡಿ, ಮಣೂರು ಸೇರಿದಂತೆ ವಿವಿಧ ಕಡೆಗಳಲ್ಲಿ ರೈತರು ತಮ್ಮ ತಮ್ಮ ಕೃಷಿಭೂಮಿಯಲ್ಲಿ ಬಿತ್ತನೆ ಮಾಡಿದ್ದಾರೆ. ಬೀಜ ಬಿತ್ತನೆ ಮಾಡಿ ಹಲವು ದಿನಗಳಾದರೂ ಕೂಡ ಕೆಲವು ಬೀಜಗಳು ಮಾತ್ರ ಮೊಳಕೆ ಬಂದಿದೆ. ಕಳಪೆ ಗುಣಮಟ್ಟದ ಬೀಜದಿಂದಾಗಿ ಈ ಬಾರಿ ಸಮಸ್ಯೆಯಾಗಿರುವ ಬಗ್ಗೆ ರೈತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಕೊಮೆ ಕೊರವಡಿ ವಿವಿಧೋದ್ದೇಶ ಸಹಕಾರ ಸಂಘ ನಿ. ಇದರ ಅಧ್ಯಕ್ಷ ಶೇಖರ್‌ ಕಾಂಚನ್‌ ಕೊಮೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮಣ್ಣಿನಲ್ಲಿ ಹೆಚ್ಚಿದ ತೇವಾಂಶ
ಈ ಬಾರಿ ಹಿಂಗಾರಿನಲ್ಲಿ ಹವಾಮಾನ ವೈಪರಿತ್ಯದಿಂದಾಗಿ ನವೆಂಬರ್‌ ತಿಂಗಳ ಕೊನೆಯವರೆಗೂ ಮಳೆಯ ತೀವ್ರತೆ ಹೆಚ್ಚಾಗಿತ್ತು. ಈ ಸಂದರ್ಭದಲ್ಲಿ ಕೃಷಿ ಭೂಮಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು, ಭೌಗೋಳಿಕವಾಗಿ ಭೂಮಿಯಲ್ಲಿನ ತೇವಾಂಶ ಕಡಿಮೆಯಾಗದ ಪರಿಣಾಮ ಬಿತ್ತನೆ ಬೀಜದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಾಗಿದೆ.

ಸೂಕ್ತ ಪರಿಹಾರ ಕಲ್ಪಿಸಿ
ಈ ಬಾರಿ ಕುಂದಾಪುರ ಕೃಷಿ ಇಲಾಖೆಯ ವತಿಯಿಂದ ವಿತರಿಸಲಾದ ನೆಲಗಡಲೆ ಬೀಜವನ್ನು ಸುಮಾರು 5 ಎಕರೆ ವಿಸ್ತೀರ್ಣದ ಕೃಷಿಭೂಮಿಯಲ್ಲಿ ಜನವರಿ 1 ರಂದು ಬಿತ್ತನೆ ಮಾಡಲಾಗಿದೆ. ಆದರೆ ಬೀಜ ಬಿತ್ತನೆ ಮಾಡಿ ದಿನಗಳೇ ಕಳೆದರೂ ಕೂಡ ಮೊಳಕೆ ಬಾರದೇ ಶೇ.20 ರಷ್ಟು ಗಿಡಗಳು ಮಾತ್ರ ಹುಟ್ಟಿದೆ. ಕಳೆದ ಬಾರಿ ಖಾಸಗಿಯವರಿಂದ ಬೀಜ ಖರೀದಿ ಮಾಡಲಾಗಿದ್ದು ಉತ್ತಮ ಇಳುವರಿ ಬಂದಿದೆ. ಈ ಬಾರಿ ಬೀಜದಲ್ಲಿ ಗುಣಮಟ್ಟದ ಕೊರತೆ ಎದ್ದು ಕಾಣುತ್ತಿದ್ದು ಈ ಬಗ್ಗೆ ಇಲಾಖೆ ಸೂಕ್ತ ಪರಿಹಾರ ನೀಡಬೇಕು.
– ವಾದಿರಾಜ ಹತ್ವಾರ್‌ ಬೆಟ್ಟಿನಮನೆ,
ಹಿರಿಯ ಪ್ರಗತಿಪರ ಕೃಷಿಕರು

ವೈಜ್ಞಾನಿಕವಾಗಿ ಅಧ್ಯಯನ
ಇಲಾಖೆಯಿಂದ ರೈತರಿಗೆ ಪೂರೈಕೆಯಾದ ಬೀಜವನ್ನು ಮೊದಲು ಪ್ರಾಯೋಗಿಕವಾಗಿ ರೈತ ಕೇಂದ್ರದಲ್ಲಿ ಬಿತ್ತನೆ ಮಾಡಿದಾಗ ಶೇ.81ರಷ್ಟು ಮೊಳಕೆ ಬಂದಿದೆ. ಅಲ್ಲದೇ ಈಗಾಗಲೇ ಪೂರೈಕೆಯಾಗಿರುವ ಬೀಜವನ್ನು ಕೋಟ, ಮಣೂರು ಸೇರಿದಂತೆ ವಿವಿಧ ಕಡೆಗಳಲ್ಲಿ ಬಿತ್ತನೆ ಮಾಡಲಾಗಿದ್ದು, ಗಿಡಗಳು ಹುಟ್ಟಿದೆ. ಈ ಬಾರಿ ಹವಾಮಾನ ವೈಪರಿತ್ಯದಿಂದಾಗಿ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಮಣ್ಣಿನಲ್ಲಿ ತೇವಾಂಶದ ಕೊರತೆಯೇ ಹೆಚ್ಚಾಗಿದೆಯೇ ಎನ್ನುವ ಬಗ್ಗೆ ವೈಜ್ಞಾನಿಕವಾಗಿ ಅಧ್ಯಯನ ನಡೆಸಲಾಗುವುದು. ರೈತರು ನೆಲಗಡಲೆ ಬೀಜ ಖರೀದಿಸಿದ ಚೀಲದ ಲೆಬಲ್‌ ಹಾಗೂ ಬಿಲ್‌ಗ‌ಳನ್ನು ಇಲಾಖೆಗೆ ನೀಡಿ. ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು.
– ರೂಪಾ ಜೆ. ಮಾಡ, ಸಹಾಯಕ ನಿರ್ದೇಶಕಿ, ಕೃಷಿ ಇಲಾಖೆ ಕುಂದಾಪುರ

– ಟಿ. ಲೋಕೇಶ್‌ ಆಚಾರ್ಯ, ತೆಕ್ಕಟ್ಟೆ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.