ಜ್ಯೇಷ್ಠಯತಿಗೆ 4ನೇ ಪರ್ಯಾಯ ಯೋಗ


Team Udayavani, Jan 18, 2022, 5:20 AM IST

ಜ್ಯೇಷ್ಠಯತಿಗೆ 4ನೇ ಪರ್ಯಾಯ ಯೋಗ

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಮಂಗಳವಾರ ಮುಂಜಾವ ಪರ್ಯಾಯ ಪೀಠಾರೋಹಣ ಮಾಡಲಿರುವ ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಪ್ರಸ್ತುತ ಅಷ್ಟಮಠಗಳಲ್ಲಿ ಜ್ಯೇಷ್ಠ ಯತಿಗಳು. ಹಾಲಿ ಪೀಠಾಧೀಶರಲ್ಲಿ ನಾಲ್ಕನೆಯ ಬಾರಿಗೆ ಪೀಠಾರೋಹಣ ಮಾಡುತ್ತಿರುವ ಹಿರಿಯರು. ಪೇಜಾವರ ಮಠದ ಶ್ರೀವಿಶ್ವೇಶತೀರ್ಥ ಶ್ರೀಪಾದರ ಬಳಿಕ ಹಿರಿತನ ಇವರ ಪಾಲಿಗೆ ಬಂದಿದೆ.

ಮಧ್ವಾಚಾರ್ಯರ 2ನೇ ತಲೆಮಾರಿನ ಯತಿಗಳಲ್ಲಿ ವೃಂದಾವನ ಸಿಗುತ್ತಿರುವುದೂ ಕೃಷ್ಣಾಪುರ ಮಠದಲ್ಲಿ ಮಾತ್ರ. ಕುಂದಾಪುರ ತಾಲೂಕಿನ ನೇರಂಬಳ್ಳಿ ಮಠದಲ್ಲಿ ಮಧ್ವರ ಶಿಷ್ಯ ಶ್ರೀಜನಾರ್ದನತೀರ್ಥರ ಶಿಷ್ಯ ಶ್ರೀವತ್ಸಾಂಕತೀರ್ಥರ ವೃಂದಾವನವಿದೆ.

ಶ್ರೀವಿದ್ಯಾಸಾಗರತೀರ್ಥರು ಕೃಷ್ಣಾ ಪುರ ಮಠದ ಪ್ರಸ್ತುತ 34ನೆಯ ಯತಿಗಳು. 31ನೆಯ ಯತಿಗಳಾದ ಶ್ರೀವಿದ್ಯಾಧೀಶತೀರ್ಥರು (1808-1881) ನಾಲ್ಕು ಬಾರಿ ಪರ್ಯಾಯ ಪೀಠಾರೋಹಣ ಮಾಡಿದ್ದರು. ಆ ಬಳಿಕ ಈ ಮಠದಲ್ಲಿ ಆ ಅವಕಾಶ ಸಿಗುತ್ತಿರುವುದು ಇವರಿಗೆ ಮಾತ್ರ.

ಉಡುಪಿ ತೆಂಕಪೇಟೆಯ ಟಿ.ಶ್ರೀಪತಿ ಮತ್ತು ಜಾನಕಿ ಅವರ ಪುತ್ರನಾಗಿ 15.03.1958ರಲ್ಲಿ ಜನಿಸಿದ ಇವರ ಹೆಸರು ರಮಾಪತಿ. ಇವರು ವಳಕಾಡು ಶಾಲೆಯಲ್ಲಿ ಓದುತ್ತಿರುವಾಗ 13ನೆಯ ವಯಸ್ಸಿನಲ್ಲಿ ದ್ವಂದ್ವಮಠವಾದ ಪುತ್ತಿಗೆ ಮಠದ ಶ್ರೀಸುಜ್ಞಾನೇಂದ್ರತೀರ್ಥ ಶ್ರೀಪಾದರಿಂದ 03.06.1971ರಲ್ಲಿ ಸನ್ಯಾಸಾಶ್ರಮ ಸ್ವೀಕರಿಸಿ ಶ್ರೀವಿದ್ಯಾಸಾಗರತೀರ್ಥರಾದರು. ಸೋದೆ ಮಠದ ಶ್ರೀ ವಿಶ್ವೋತ್ತಮತೀರ್ಥರಿಂದ ವೇದಾಂತದ ಉನ್ನತ ಗ್ರಂಥಗಳನ್ನು ಅಭ್ಯಸಿಸಿದರು. ಶ್ರೀಶ್ರೀ ವಿಶ್ವೋತ್ತಮತೀರ್ಥರು ವಿಶಿಷ್ಟವಾದ ಸಂಪ್ರದಾಯಗಳನ್ನು ಪಾಲಿಸಿಕೊಂಡು ಬಂದು ಶ್ರೀವಿದ್ಯಾಸಾಗರತೀರ್ಥರಿಗೂ ಅವುಗಳ ಮಹತ್ವವನ್ನು ತಿಳಿಹೇಳಿದ್ದಾರೆ.

ಇದರಿಂದಾಗಿಯೇ ಸನ್ಯಾಸಿಜೀವನದಲ್ಲಿ ಪೂರ್ಣಾಂಕ ಹೊಂದಿದ್ದಾರೆ. ಶ್ರೀಪಾದರ ವಿಶೇಷ ವೈದುಷ್ಯ ಇರುವುದು ವ್ಯಾಕರಣಶಾಸ್ತ್ರದಲ್ಲಿಯಾದರೂ ಇದು ಹೊರಗಿನ ಜಗತ್ತಿಗೆ ತಿಳಿದಿಲ್ಲ. ತಾಡವಾಲೆ ಗ್ರಂಥಗಳ ಸಂರಕ್ಷಣೆ, ಪಾಠಶೋಧನೆಗೆ ಒತ್ತು ನೀಡುತ್ತಿದ್ದಾರೆ. ಜತೆ ಇಂದಿರಾ ಶಿವರಾವ್‌ ಪಾಲಿಟೆಕ್ನಿಕ್‌ ಸಂಸ್ಥೆಯನ್ನು ನಡೆಸುತ್ತಿದ್ದಾರೆ. ಇವರೂ ವಿದ್ಯಾಗುರು ಶ್ರೀ ವಿಶ್ವೋತ್ತಮತೀರ್ಥರಂತೆ ಜನಜಂಗುಳಿಯಿಂದ ದೂರವಿದ್ದು ಏಕಾಂತೋಪಾಸನೆಯಲ್ಲಿ ಆಸಕ್ತರು.

1974-75, 1990-91, 2006-07ರಲ್ಲಿ 3 ಬಾರಿ ಪರ್ಯಾಯ ಪೂಜೆಗಳನ್ನು ನೆರ ವೇರಿಸಿ ಈಗ 2022-23ರ ಅವಧಿಗೆ ಪೂಜಾಕೈಂಕರ್ಯ ನಡೆಸಲು ಅಣಿಯಾಗಿದ್ದಾರೆ. ಹಿಂದಿನ ಪರ್ಯಾಯಗಳಲ್ಲಿ ಗೋಶಾಲೆ, ವೃಂದಾವನ ಸಮುಚ್ಚಯದ ಜೀರ್ಣೋದ್ಧಾರ, ಮುಖ್ಯಪ್ರಾಣ ದೇವರಿಗೆ ವಜ್ರಕವಚದ ಸಮರ್ಪಣೆಯೇ ಮೊದಲಾದ ಕಾರ್ಯಗಳನ್ನು ನಡೆಸಿದ್ದಾರೆ.

ಟಾಪ್ ನ್ಯೂಸ್

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

4

Karkala: ಈ ರಸ್ತೆಯಲ್ಲಿ ಬಸ್‌ ತಂಗುದಾಣಗಳೇ ಇಲ್ಲ!

3-mit

Manipal MIT: ಅಂತಾರಾಷ್ಟ್ರೀಯ ಕಾರ್ಯಾಗಾರ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.