ಮಂಜೂರಾದ ಹುದ್ದೆಗಳಲ್ಲಿ ಶೇ.20 ಮಾತ್ರ ಭರ್ತಿ

ಬಂಟ್ವಾಳದ ಪಶುಪಾಲನ ಇಲಾಖೆ

Team Udayavani, Jan 18, 2022, 7:03 PM IST

ಮಂಜೂರಾದ ಹುದ್ದೆಗಳಲ್ಲಿ ಶೇ.20 ಮಾತ್ರ ಭರ್ತಿ

ಬಂಟ್ವಾಳ: ಬಂಟ್ವಾಳದ ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿ ಸುತ್ತಿರುವ ಸಿಬಂದಿ 2-3 ಹುದ್ದೆಗಳನ್ನು ಹೊತ್ತು ಒತ್ತಡದಲ್ಲಿ ಕರ್ತವ್ಯ ನಿರ್ವಹಿ ಸಬೇಕಾದ ಸ್ಥಿತಿ ಇದೆ. ತಾಲೂಕಿಗೆ ಮಂಜೂರಾದ ಒಟ್ಟು ಹುದ್ದೆಗಳಲ್ಲಿ ಶೇ. 20 ದಷ್ಟು ಹುದ್ದೆಗಳು ಮಾತ್ರ ಭರ್ತಿಯಾಗಿವೆ. ಹೀಗಾಗಿ ಗ್ರಾಮೀಣ ಭಾಗದ ಪಶು ಚಿಕಿತ್ಸಾ ಕೇಂದ್ರಗಳಿಗೆ ದಿನದ ಬಹುತೇಕ ಹೊತ್ತು ಬಾಗಿಲು ಹಾಕಬೇಕಾದ ಸ್ಥಿತಿಯೂ ಇದೆ.

ಜಾನುವಾರುಗಳು ಸೇರಿದಂತೆ ಇತರ ಸಾಕು ಪ್ರಾಣಿಗಳ ಸೇವೆಯಲ್ಲಿ ತೊಡಗಿರುವ ಇಲಾಖೆಯಲ್ಲಿ ಬಂಟ್ವಾಳ ತಾಲೂಕಿಗೆ ಒಟ್ಟು ಮಂಜೂರಾದ 89 ಹುದ್ದೆಗಳಲ್ಲಿ ಕೇವಲ 18 ಮಂದಿ ಕರ್ತವ್ಯ ನಿರ್ವಹಿಸುತ್ತಿದ್ದು, ಉಳಿದಂತೆ ಹುದ್ದೆಗಳು ಖಾಲಿ ಇವೆ. ನಿವೃತ್ತಿಯಾಗಿ ಹುದ್ದೆಗಳು ಖಾಲಿಯಾಗುತ್ತಿವೆಯೇ ಹೊರತು ಭರ್ತಿಗೆ ಸರಕಾರ ಕ್ರಮಕೈಗೊಳ್ಳುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದೆ.

ತಾಲೂಕಿನ ಚಿಕಿತ್ಸಾ ಕೇಂದ್ರಗಳು
ಬಂಟ್ವಾಳ ತಾಲೂಕಿನಲ್ಲಿ ಬಂಟ್ವಾಳ, ಕಲ್ಲಡ್ಕ, ಮಾಣಿ, ವಿಟ್ಲದಲ್ಲಿ ಪಶು ವೈದ್ಯ ಆಸ್ಪತ್ರೆಯಿದ್ದು, ರಾಯಿ, ಸಿದ್ಧಕಟ್ಟೆ, ಮೂರ್ಜೆ, ವಗ್ಗ, ಮಾವಿನಕಟ್ಟೆ, ವಾಮದಪದವು, ಬೆಂಜನ ಪದವು, ಕುರ್ನಾಡು, ಮೂರ್ಜೆ, ಅಡ್ಯನಡ್ಕ ಹಾಗೂ ಸಂಚಾರಿ ಪಶು ಚಿಕಿತ್ಸಾಲಯಗಳಿವೆ. ಕನ್ಯಾನ, ಪರಿ ಯಲ್ತಡ್ಕ, ಪೆರ್ನೆ, ಸಜೀಪಮೂಡ, ಪಂಜಿಕಲ್ಲು, ಮೇರಮಜಲು, ಕಕ್ಯ ಪದವು, ಕುಡ್ತಮುಗೇರುಗಳಲ್ಲಿ ಪ್ರಾಥ ಮಿಕ ಪಶು ಚಿಕಿತ್ಸಾ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. ಹೀಗೆ 22 ಕಡೆ ಗಳಲ್ಲಿ ಇಲಾಖೆಯ ಕಚೇರಿಗಳಿದ್ದು, ಒಬ್ಬೊ ಬ್ಬರು ಒಂದೊಂದು ಕಡೆ ಕರ್ತವ್ಯ ನಿರ್ವ ಹಿಸಿದರೂ ಭರ್ತಿಯಾಗದ ಸ್ಥಿತಿ ಇದೆ.

ಒಂದೆರಡು ವರ್ಷಗಳ ಹಿಂದೆ ಪಶುಪಾಲನ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿಗಳು ಹುದ್ದೆಗಳ ಭರ್ತಿಗಾಗಿ ಆರ್ಥಿಕ ಇಲಾಖೆಗೆ ಪತ್ರ ಬರೆದಿದ್ದು, ಮುಂದಿನ 6 ತಿಂಗಳೊಳಗಾಗಿ ಇಡೀ ರಾಜ್ಯದಲ್ಲಿ ಇಲಾಖೆಯ ಶೇ. 50ದಷ್ಟು ಹುದ್ದೆಗಳು ಭರ್ತಿಯಾಗುತ್ತದೆ ಎಂದು ಹೇಳಲಾಗಿತ್ತು. ಆದರೆ ಅದು ಅನುಷ್ಠಾನ ಆಗಿದೆಯೋ ಅಥವಾ ಇಲ್ಲವೇ ಎಂಬುದರ ಕುರಿತು ಕೂಡ ಮಾಹಿತಿ ಇಲ್ಲವಾಗಿದೆ.

ಹಿರಿಯ ಪಶುವೈದ್ಯಕೀಯ ಪರೀಕ್ಷಕರು 18 ಹುದ್ದೆಗಳಲ್ಲಿ 4 ಮಾತ್ರ ಭರ್ತಿ ಇದ್ದು, 2 ಪಶುವೈದ್ಯಕೀಯ ಪರೀಕ್ಷಕ ಹುದ್ದೆಗಳಲ್ಲಿ 2 ಕೂಡ ಭರ್ತಿ ಇದೆ. ಪಶು ವೈದ್ಯಕೀಯ ಸಹಾಯಕರ 12 ಹುದ್ದೆಗಳಲ್ಲಿ ಯಾವುದೂ ಕೂಡ ಭರ್ತಿಯಿಲ್ಲ.

ಡಿ ದರ್ಜೆ ನೌಕರರ 35 ಹುದ್ದೆಗಳಲ್ಲಿ 2 ಮಾತ್ರ ಭರ್ತಿಯಿದ್ದು, 33 ಖಾಲಿ ಇವೆ. ದ್ವಿತೀಯ ದರ್ಜೆ ಸಹಾಯಕ ಹಾಗೂ ವಾಹನ ಚಾಲಕರ ತಲಾ ಒಂದು ಹುದ್ದೆಗಳು ಭರ್ತಿ ಇವೆ.

ಇಲಾಖೆಯ ಸಿಬಂದಿಯ ಒತ್ತಡ ತಗ್ಗಿಸುವ ದೃಷ್ಟಿಯಿಂದ ಗ್ರೂಪ್‌ ಡಿ ನೌಕರರನ್ನು ಮಾತ್ರ ಹೊರಗುತ್ತಿಗೆಯ ಆಧಾರದಲ್ಲಿ ತೆಗೆದುಕೊಳ್ಳಲು ಅವಕಾಶವಿದ್ದು, ಕೆಲವೊಂದು ಮಂದಿ ಮಾತ್ರ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಉಳಿದಂತೆ ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬಂದಿಯು ಎರಡು-ಮೂರು ಹುದ್ದೆಗಳನ್ನು ನಿಭಾಯಿಸುವ ಪರಿಸ್ಥಿತಿ ಇದೆ.

ಎಷ್ಟು ಹುದ್ದೆಗಳು ಖಾಲಿ
ಬಂಟ್ವಾಳ ತಾಲೂಕಿಗೆ ಮಂಜೂರಾ ಗಿರುವ ಮುಖ್ಯ ಪಶುವೈದ್ಯಾಧಿಕಾರಿ(ಆಡಳಿತ) ಒಂದು ಹುದ್ದೆ ಇದ್ದು, ಅದು ಭರ್ತಿಯಾಗಿದೆ. ಮುಖ್ಯಪಶುವೈದ್ಯಾಧಿಕಾರಿ/ ಹಿರಿಯ ಪಶುವೈದ್ಯಾಧಿಕಾರಿ/ಪಶು ವೈದ್ಯಾಧಿಕಾರಿ ಒಟ್ಟು 15 ಹುದ್ದೆಗಳಲ್ಲಿ 5 ಮಂದಿ ಮಾತ್ರ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಜಾನುವಾರು ಅಭಿವೃದ್ಧಿ ಅಧಿಕಾರಿ ಒಂದು ಹುದ್ದೆ ಭರ್ತಿ ಇದೆ. ಜಾನುವಾರು ಅಧಿಕಾರಿ 3 ಹುದ್ದೆಗಳಲ್ಲಿ 2 ಮಾತ್ರ ಭರ್ತಿ ಇದೆ.

ಚಾರ್ಜ್‌ಗಳ ಮೂಲಕ ಕರ್ತವ್ಯ ನಿಭಾವಣೆ
ಹಾಲಿ ಇರುವವರಿಗೆ 2-3 ಚಾರ್ಜ್‌ಗಳನ್ನು ನೀಡಿ ನಿರ್ವಹಣೆ ಮಾಡಲಾಗುತ್ತಿದೆ. ಬೆಳಗ್ಗೆ-ಮಧ್ಯಾಹ್ನ ಹೀಗೆ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮುಖ್ಯಪಶುವೈದ್ಯಾಧಿಕಾರಿ ಹುದ್ದೆಗಳಿಗೆ 12 ವರ್ಷ ಸೇವಾವಧಿಯಾಗಿರುವವರು ಬೇಕಾಗುತ್ತದೆ. ಡಿ ಗ್ರೂಪ್‌ಗ್ಳಿಗೆ ಹೊರ ಗುತ್ತಿಗೆಯಲ್ಲಿ ತೆಗೆದುಕೊಳ್ಳಬಹುದಾಗಿದ್ದು, 18 ಮಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
-ಡಾ| ಎಂ.ಎಸ್‌.ಹರೀಶ್‌,
ಮುಖ್ಯ ಪಶು ವೈದ್ಯಾಧಿಕಾರಿ (ಆಡಳಿತ), ಬಂಟ್ವಾಳ

– ಕಿರಣ್‌ ಸರಪಾಡಿ

 

ಟಾಪ್ ನ್ಯೂಸ್

krishne-bhyre-gowda

ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

10

Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Punjalkatte ಪಾಂಡವರಕಲ್ಲು: ಅಂಗನವಾಡಿ ಕೇಂದ್ರಕ್ಕೆ ಶೀಟ್‌ ಅಳವಡಿಕೆಗೆ ನಿರ್ಧಾರ

Punjalkatte ಪಾಂಡವರಕಲ್ಲು: ಅಂಗನವಾಡಿ ಕೇಂದ್ರಕ್ಕೆ ಶೀಟ್‌ ಅಳವಡಿಕೆಗೆ ನಿರ್ಧಾರ

Sullia 2 ವರ್ಷಗಳ ಹಿಂದೆ ನಡೆದಿದ್ದ ಕಳವು ಆರೋಪಿ ಬಂಧನ

Sullia 2 ವರ್ಷಗಳ ಹಿಂದೆ ನಡೆದಿದ್ದ ಕಳವು ಆರೋಪಿ ಬಂಧನ

Dharmasthala ಅನ್ನದಾನಕ್ಕೆ ಮತ್ತಷ್ಟು ಮಹತ್ವ : ಡಾ| ವೀರೇಂದ್ರ ಹೆಗ್ಗಡೆ

Dharmasthala ಅನ್ನದಾನಕ್ಕೆ ಮತ್ತಷ್ಟು ಮಹತ್ವ : ಡಾ| ವೀರೇಂದ್ರ ಹೆಗ್ಗಡೆ

Vitla: ಲಿಫ್ಟ್ ನಲ್ಲಿ ಸಿಲುಕಿದ ವಿದ್ಯಾರ್ಥಿಗಳು

Vitla: ಲಿಫ್ಟ್ ನಲ್ಲಿ ಸಿಲುಕಿದ ವಿದ್ಯಾರ್ಥಿಗಳು

Theft case ಬಡಗಕಜೆಕಾರು: ನಿರ್ಮಾಣ ಹಂತದ ರುದ್ರ ಭೂಮಿಯಿಂದ ಕಳವು

Theft case ಬಡಗಕಜೆಕಾರು: ನಿರ್ಮಾಣ ಹಂತದ ರುದ್ರ ಭೂಮಿಯಿಂದ ಕಳವು

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

krishne-bhyre-gowda

ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

12

Chowkidar Movie: ಚೌಕಿದಾರ್‌ಗೆ ಮುಹೂರ್ತ ಇಟ್ರಾ!

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.