ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಪೂರೈಕೆ ಮಾಡಿ

ಕೂಡಲೇ ಈ ಭಾಗದ ವಿದ್ಯುತ್‌ ಸಮಸ್ಯೆ ಬಗೆಹರಿಸಬೇಕೆಂದು ಒತ್ತಾಯಿಸಿದರು.

Team Udayavani, Jan 19, 2022, 6:12 PM IST

ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಪೂರೈಕೆ ಮಾಡಿ

ಬೈಲಹೊಂಗಲ: ರೈತರ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್‌ ಪೂರೈಕೆ ಮಾಡಲು ಒತ್ತಾಯಿಸಿ ತಾಲೂಕಿನ ನೇಸರಗಿ ಸುತ್ತಮುತ್ತಲಿನ ಗ್ರಾಮಸ್ಥರು ಮಲ್ಲಾಪುರದಲ್ಲಿರುವ ನೇಸರಗಿ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಕಚೇರಿ ಎದುರು ಅಡುಗೆ ಮಾಡಿ ಮಂಗಳವಾರ ಪ್ರತಿಭಟಿಸಿದರು.

ಗ್ರಾಮದ ಮುಖಂಡರಾದ ಬಾಳಪ್ಪ ಮಾಳಗಿ, ಸೋಮನಗೌಡ ಪಾಟೀಲ, ಜೈ ಭೀಮ್‌ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ರಮೇಶ ರಾಯಪ್ಪಗೋಳ ಮಾತನಾಡಿ, ಹಲವು ವರ್ಷಗಳಿಂದ ಮುರಕೀಭಾವಿ ಪೀಡರ್‌ ನಂ. 4ರ ಮೂಲಕ ಒಳಪಡುವ ಗ್ರಾಮಗಳಲ್ಲಿರುವ ಹೊಲಗಳಿಗೆ ಸರಿಯಾದ ರೀತಿಯಲ್ಲಿ ವಿದ್ಯುತ್‌ ಒದಗಿಸಲಾಗುತ್ತಿದ್ದು, ಇದೀಗ ದಿಢೀರ್‌ ಆಗಿ ಹೆಸ್ಕಾಂ ನಿಗಮವು ವಿದ್ಯುತ್‌ ಪೂರೈಕೆಯಲ್ಲಿ ತೊಂದರೆ ಮಾಡುತ್ತಿರುವುದರಿಂದ ಸರಿಯಾಗಿ ವಿದ್ಯುತ್‌ ಪೂರೈಕೆಯಾಗದೆ ಹೊಲಗಳಲ್ಲಿರುವ ಫಸಲಿಗೆ ತೊಂದರೆಯಾಗುತ್ತಿದೆ.

ರಾತ್ರಿ ವೇಳೆ ವಿದ್ಯುತ್‌ ನೀಡುತ್ತಿರುವುದರಿಂದ ಪ್ರಾಣಾಪಾಯವಾದರೆ ಯಾರು ಹೋಣೆ? ಹೀಗಾಗಿ ಕೂಡಲೇ ಈ ಭಾಗದ ವಿದ್ಯುತ್‌ ಸಮಸ್ಯೆ ಬಗೆಹರಿಸಬೇಕೆಂದು ಒತ್ತಾಯಿಸಿದರು. ಸ್ಥಳಕ್ಕೆ ಆಗಮಿಸಿದ ಬೈಲಹೊಂಗಲ ಕೆಇಬಿಯ ಎಇಇಗಳಾದ ಕೆ. ಜೈನ್‌, ಅಣ್ಣಪ್ಪ ಲಮಾಣಿ ಮಾತನಾಡಿ, ಈಗ ಹೊಸದಾಗಿ ಮಾರ್ಗಸೂಚಿ ಮಾಡಲಾಗಿದೆ. ಇದರಿಂದ ಬೇರೆ ಗ್ರಾಮಗಳಿಗೆ ತೊಂದರೆಯಾಗದಂತೆ ಮಾಡಲಾಗಿದ್ದು, ಸದ್ಯ ಕಲ್ಲಿದ್ದಲು ಸಮಸ್ಯೆಯಿದೆ. ಹೀಗಾಗಿ ಸ್ವಲ್ಪ ದಿನ
ಸಹಕರಿಸಿಕೊಂಡು ಹೋಗಬೇಕೆಂದು ಮನವಿ ಮಾಡಿದರು.

ಪ್ರತಿಭಟನಾಕಾರರು ಇದಕ್ಕೆ ಒಪ್ಪದೆ ಬೇಡಿಕೆ ಈಡೇರುವವರೆಗೆ ಎಲ್ಲ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿ ಸ್ಥಳದಲ್ಲಿಯೇ ಉಪ್ಪಿಟ್ಟು, ಬಜಿ, ಚಹಾ ತಯಾರಿಸಿ ಅಲೊಪಹಾರ ಸೇವಿಸಿ ವಿಶಿಷ್ಟವಾಗಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಶಾಸಕ ಮಹಾಂತೇಶ ದೊಡ್ಡಗೌಡರ ಮಾತನಾಡಿ, ಕಲ್ಲಿದ್ದಲು ಸಮಸ್ಯೆ ಸರಕಾರ ಮಟ್ಟದಲ್ಲಿದ್ದು, ಅದರ ಪರಿಹಾರವಾದರೆ ವಿದ್ಯುತ್‌ ಸಮಸ್ಯೆ ಬಗೆಹರಿಯುತ್ತದೆ. ಜನರು ಸಹಕಾರ ನೀಡಿ ಸಮಸ್ಯೆ ಬಗೆಹರಿಸಿಕೊಳ್ಳಬೇಕೆಂದರು.

ನಾಗರಿಕರ ಮನವಿಗೆ ಸ್ಪಂದಿಸಿದ ಹೆಸ್ಕಾಂ ಅಧಿಕಾರಿಗಳಾದ ಕೆ.ಜೈನ್‌, ಅಣ್ಣಪ್ಪ ಲಮಾಣಿ, ವಸಂತಗೌಡಾ ಪಾಟೀಲ ಮಾತನಾಡಿ, ರೈತರ ಪಂಪ್‌ ಸೆಟ್‌ಗಳಿಗೆ ಹಗಲಿನ ವೇಳೆಯಲ್ಲಿ 7 ತಾಸು ವಿದ್ಯುತ್‌ ಪೂರೈಕೆ ಮಾಡಲಾಗುವುದೆಂದು ಭರವಸೆ ನೀಡಿದರು. ಇದರಿಂದ ಪ್ರತಿಭಟನಾಕಾರರು ಪ್ರತಿಭಟನೆ ಹಿಂಪಡೆದರು. ಮುಂಜಾನೆಯಿಂದ ಸಂಜೆಯವರೆಗೆ ಪ್ರತಿಭಟನೆ ನಡೆದಿರುವುದರಿಂದ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗಿತ್ತು.

ಕೆಂಚಪ್ಪ ಕಳ್ಳಿಬಡ್ಡಿ, ಸುರೇಶ ಕೆಳಗೇರಿ, ಬಿ.ಎಫ್‌. ಕೊಳದೂರ, ಬಾಳಪ್ಪ ಹಸಬಿ, ಸದೆಪ್ಪ ಮೂಲಿಮನಿ, ಸಿದ್ದಪ್ಪ ಮಾಳನ್ನವರ, ಪ್ರಭು ಗಲಬಿ, ಸುಜಾತ ತುಬಾಕಿ, ಪುಂಡಲಿಕ ಮದನಭಾವಿ, ಗುರುಬಸು ಶಿಂತ್ರಿ, ಮಲ್ಲಿಕಾರ್ಜುನ ಕಲ್ಲೋಳಿ, ನಿಂಗಪ್ಪ ತಳವಾರ, ದೇಮಣ್ಣ ಗುಜನಟ್ಟಿ,ಚನಗೌಡ ಪಾಟೀಲ, ಯಮನಪ್ಪ ಪೂಜೇರಿ, ಫಕೀರಪ್ಪ ತೋಟಗಿ, ಸಲೀಂ ನಧಾಪ್‌, ಮಕಬುಲ್‌ ಬೇಪಾರಿ, ಅಡಿವೆಪ್ಪ ಚಿಗರಿ, ಯಲ್ಲಪ್ಪ ಪೂಜೇರಿ, ಅಡಿವೆಪ್ಪ ಮಾಳನ್ನವರ, ಎಸ್‌. ಎಂ. ಪಾಟೀಲ, ಸೋಮಶೇಖರ ಮಾಳನ್ನವರ, ಸೋಮನಟ್ಟಿ, ಮಾಸ್ತಮರಡಿ, ಮಲ್ಲಾಪುರ ಮತ್ತಿತರ ಗ್ರಾಮಗಳ ಗ್ರಾಮಸ್ಥರು ಇದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.