ಭಟ್ಕಳ: 5 ಕೋಟಿ ರೂ.ಜೀವ ವಿಮೆ ಲಪಟಾಯಿಸಲು ನಕಲಿ ಮರಣ ದಾಖಲೆ ಸೃಷ್ಟಿ!


Team Udayavani, Jan 20, 2022, 6:52 PM IST

1-sadsad

ಭಟ್ಕಳ: ಜಾಲಿ ಪಟ್ಟಣ ಪಂಚಾಯತ್‍ನಲ್ಲಿ ಈ ಹಿಂದೆ ನಕಲಿ ಅನಾಪೇಕ್ಷಣಾ ಪತ್ರ ನೀಡಿಕೆಯ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು ಜೀವಂತ ವ್ಯಕ್ತಿಯೇ ಮರಣ ಹೊಂದಿದ್ದಾನೆಂದು ನಕಲಿ ಮರಣ ದಾಖಲೆ ಸೃಷ್ಟಿಸಿದ್ದು ಆತನ ಹೆಸರಿನಲ್ಲಿದ್ದ 5 ಕೋಟಿ ರೂಪಾಯಿ ಜೀವ ವಿಮೆಯನ್ನು ಲಪಟಾಯಿಸಲು ಹವಣಿಸಿದಾಗ ಬೆಳಕಿಗೆ ಬಂದಿದೆ.

ತಾಲೂಕಿನ ಜಾಲಿ ಪಟ್ಟಣ ಪಂಚಾಯತ್ ಜನನ ಮರಣ ನೋಂದಣಿ ವಿಭಾಗದಲ್ಲಿ 2021ರ ಅಗಸ್ಟ್ 4ನೇ ತಾರೀಖಿನಂದು ಹಾಸನದ ಎಚ್.ಡಿ. ದೇವೇಗೌಡ ನಗರ ಎನ್ನುವ ವಿಳಾಸವುಳ್ಳ ಮಹಿಳೆ ಮೀನಾಕ್ಷಿ ಡಿ.ಎಚ್. ಎನ್ನುವವರು ಬಂದು ತನ್ನ ಮಗ ತೀರಿಕೊಂಡಿದ್ದು ಮರಣ ಪ್ರಮಾಣ ಪತ್ರವನ್ನು ನೀಡುವಂತೆ ಮನವಿ ಮಾಡಿದ್ದರು. ಆ ನಂತರ ಜನನ ಮರಣ ವಿಭಾಗದ ಸಿಬ್ಬಂದಿಗಳು ಕ್ರಮ ತೆಗೆದುಕೊಂಡಿದ್ದು ಸೆಪ್ಟಂಬರ್ 2021ರ 13ರಂದು ಹರ್ಷವರ್ಧನ್ ಎನ್ನುವ ವ್ಯಕ್ತಿಯ ಮರಣ ಪ್ರಮಾಣ ಪತ್ರವನ್ನು ನೀಡಲಾಗಿತ್ತು.

ಜಾಲಿಯ ಜಂಗನಗದ್ದೆಯಲ್ಲಿನ ವಿಳಾಸ ನೀಡಿದ್ದ ಮಹಿಳೆ ಇಲ್ಲಿನ ನಕಲಿ ಆಧಾರ್ ಕಾರ್ಡ ಕೂಡಾ ಹಾಜರುಪಡಿಸಿರುವುದು ಇದು ಹೇಗೆ ಸಾಧ್ಯವಾಯಿತು ಎನ್ನುವುದು ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ. ಹರ್ಷವರ್ಧನ್ ಎನ್ನುವವರು ಹಾಸನದವರಾಗಿದ್ದು ಉತ್ತಮ ವ್ಯವಹಾರ ಮಾಡಿಕೊಂಡಿರುವ ವ್ಯಕ್ತಿ ಎನ್ನಲಾಗಿದೆ. ಆತನ ಹೆಸರಿನಲ್ಲಿ 5 ಕೋಟಿ ವಿಮಾ ಮಾಡಿಸಲಾಗಿದ್ದು ವಿಮಾ ಹಣವನ್ನ ಲಪಟಾಯಿಸಲು ಜಾಲಿ ಪಟ್ಟಣ ಪಂಚಾಯತ್ ಸಿಬ್ಬಂದಿಯೋರ್ವರನ್ನು ಬಳಸಿಕೊಂಡು ನಕಲಿ ದಾಖಲೆ ಸೃಷ್ಟಿಸಲಾಗಿದೆ ಎನ್ನಲಾಗಿದೆ.

ಆತನ ತಾಯಿ ಎಂದು ಹೇಳಿಕೊಂಡು ಜಾಲಿಯ ಜಂಗನಗದ್ದೆಯ ವಿಳಾಸ ನೀಡಿದ ಮಹಿಳೆ ಯಾರು ಎನ್ನುವುದು ತಿಳಿದು ಬರಬೇಕಿದೆ. ಆಕೆಯು ಜಂಗನಗದ್ದೆಯ ವಿಳಾಸದ ದಾಖಲೆಗಳನ್ನು ನೀಡಿದ ನಂತರ ಜಾಲಿ ಪಟ್ಟಣ ಪಂಚಾಯತ್ ಆರೋಗ್ಯ ವಿಭಾಗದ ವತಿಯಿಂದ ಸ್ಥಳ ಪಂಚನಾಮೆ ಮಾಡಿ ಖಚಿತಪಡಿಸಿಕೊಂಡು ಮರಣ ದಾಖಲೆಯನ್ನು ನೀಡಲಾಗಿದ್ದು ಎಲ್ಲವೂ ನಕಲಿ ಎನ್ನುವುದು ತಿಳಿದು ಬಂದಿದೆ.

ವ್ಯಕ್ತಿಯು ಓರ್ವ ಉತ್ತಮ ವ್ಯವಹಾರಸ್ಥನಾಗಿದ್ದು ಆತನ ಹೆಸರಿನಲ್ಲಿರುವ ವಿಮಾ ಹಣವನ್ನು ಹೊಡೆಯುವುದಕ್ಕೆ ಇಂತಹ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮರಣ ಪ್ರಮಾಣ ಪತ್ರವನ್ನು ಪಡೆಯಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದ್ದು ಈ ಕೃತ್ಯಕ್ಕೆ ಆರೋಗ್ಯ ವಿಭಾಗದ ಸಿಬ್ಬಂದಿಗಳ ಕೈವಾಡವಿರುವುದು ಕೂಡಾ ಬೆಳಕಿಗೆ ಬಂದಿದ್ದು ಇನ್ನಷ್ಟೇ ಸಂಪೂರ್ಣ ವಿಷಯ ತಿಳಿದು ಬರಬೇಕಿದೆ.

ಈ ಬಗ್ಗೆ ಜಾಲಿ ಪಟ್ಟಣ ಪಂಚಾಯತ್ ಹಿರಿಯ ಆರೋಗ್ಯ ನಿರೀಕ್ಷಕ ವಿನಾಯಕ ನಾಯ್ಕ ಅವರು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದು ದೂರನ್ನು ಆಧರಿಸಿ ನಗರ ಠಾಣೆಯ ಇನ್ಸಪೆಕ್ಟರ್ ದಿವಾಕರ ಪಿ.ಎಂ. ಅವರು ಸಿಬ್ಬಂದಿಗಳೊಂದಿಗೆ ಜಾಲಿ ಪಟ್ಟಣ ಪಂಚಾಯತಕ್ಕೆ ತೆರಳಿ ಅಲ್ಲಿನ ಕಂಪ್ಯೂಟರ್, ಕಡತಗಳನ್ನು ವಶಕ್ಕೆ ಪಡೆದು ತನಿಖೆ ಆಂಭಿಸಿದ್ದಾರೆ.

ಟಾಪ್ ನ್ಯೂಸ್

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.