ಕವಿ ಮುದ್ದಣನಿಗೆ ಕೇಂದ್ರ ಸರಕಾರದ ಗೌರವ: 150 ರೂ. ಮುಖಬೆಲೆಯ ನಾಣ್ಯ ಬಿಡುಗಡೆ


Team Udayavani, Jan 25, 2022, 6:05 AM IST

ಕವಿ ಮುದ್ದಣನಿಗೆ ಕೇಂದ್ರ ಸರಕಾರದ ಗೌರವ: 150 ರೂ. ಮುಖಬೆಲೆಯ ನಾಣ್ಯ ಬಿಡುಗಡೆ

ಮಂಗಳೂರು: ಕವಿ ಮುದ್ದಣ ಅವರ ಗೌರವಾರ್ಥ ಭಾರತ ಸರಕಾರದ ವಿತ್ತ ಸಚಿವಾಲಯ ಹೊರತಂದಿರುವ 150 ರೂ. ಮುಖಬೆಲೆಯ ನಾಣ್ಯವನ್ನು ಭಾರತ ಸರಕಾರದ ಸಂಸದೀಯ ವ್ಯವಹಾರ ಹಾಗೂ ಸಂಸ್ಕೃತಿ ಖಾತೆ ರಾಜ್ಯ ಸಚಿವ ಅರ್ಜುನ್‌ ರಾಮ್‌ ಮೇಘವಾಲ್‌ ಸೋಮವಾರ ಹೊಸದಿಲ್ಲಿಯಲ್ಲಿ ವೆಬಿನಾರ್‌ ಮೂಲಕ ಬಿಡುಗಡೆಗೊಳಿಸಿದರು.

ದೇವರು ಕವಿಗಳನ್ನು ಸೃಷ್ಟಿಸುತ್ತಾರೆ. 30 ವರ್ಷದ ಅಲ್ಪಾವಧಿಯಲ್ಲಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಲೋಕಕ್ಕೆ ಅಮರ ಕಾಣಿಕೆ ನೀಡಿದ ಕವಿ ಮುದ್ದಣ ಅವರ ನೆನಪಿನಲ್ಲಿ ನಾಣ್ಯವನ್ನು ಬಿಡುಗಡೆ ಮಾಡಿ ಭಾರತ ಸರಕಾರ ಅವರನ್ನು ಗೌರವಿಸಿದೆ ಎಂದರು.

ಕೋಲ್ಕತಾ ಟಂಕಸಾಲೆಯ ಮಹಾ ಪ್ರಬಂಧಕ ರಜತ್‌ ಪಾಲ್‌, ಹೆಚ್ಚುವರಿ ಮಹಾಪ್ರಬಂಧಕ ಗೋರಖ್‌ನಾಥ್‌ ಯಾದವ್‌, ಉದ್ಯಮಿ ಸುಧೀರ್‌ ಲೂನವತ್‌ ಬಿಕ್‌ನೇರ್‌ ಉಪಸ್ಥಿತರಿದ್ದರು. ಮುದ್ದಣ ಪ್ರಕಾಶನದ ಸ್ಥಾಪಕ ಗೌರವಾಧ್ಯಕ್ಷ ನಂದಳಿಕೆ ಬಾಲಚಂದ್ರ ರಾವ್‌, ಅಧ್ಯಕ್ಷೆ ಎನ್‌. ವಿಜಯಲಕ್ಷ್ಮೀ ಬಿ. ರಾವ್‌, ಸಂಚಾಲಕಿ ಎನ್‌. ಸೌಜನ್ಯ ಬಿ. ರಾವ್‌ ಭಾಗವಹಿಸಿದ್ದರು.

ಮಂಗಳೂರಿನಲ್ಲಿ ಬಿಡುಗಡೆ
ಮುದ್ದಣ ಅವರ ಗೌರವಾರ್ಥ ನಾಣ್ಯವನ್ನು ಮಂಗಳೂರಿನ ಸಕೀìಟ್‌ ಹೌಸ್‌ನಲ್ಲಿ ಸಂಸದ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಸ್ಥಳೀಯವಾಗಿ ಬಿಡುಗಡೆಗೊಳಿಸಿದರು. ಅವಿಭಜಿತ ದ.ಕ. ಜಿಲ್ಲೆಯ ಶ್ರೇಷ್ಠ ಕವಿಗಳ ಪರಂಪರೆಯಲ್ಲಿ ಮುದ್ದಣ ಅನನ್ಯ ಕೊಡುಗೆ ನೀಡಿದ್ದಾರೆ. ಅವರ ಹೆಸರಿನಲ್ಲಿ ಗೌರವ ನಾಣ್ಯ ತಂದಿರುವುದು ಉಭಯ ಜಿಲ್ಲೆಗೆ ಸಂದ ಗೌರವ. ಹಲವು ದಶಕಗಳಿಂದ ಕವಿ ಮುದ್ದಣ ಅವರ ಹೆಸರಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿರುವ ನಂದಳಿಕೆ ಬಾಲಚಂದ್ರ ರಾವ್‌ ಹಾಗೂ ಅವರ ತಂಡವನ್ನು ಅಭಿನಂದಿಸುತ್ತೇನೆ ಎಂದರು.

ಕಾರ್ಪೊರೇಟರ್‌ಗಳಾದ ಸುಧೀರ್‌ ಶೆಟ್ಟಿ ಕಣ್ಣೂರು, ಮನೋಹರ ಶೆಟ್ಟಿ ಹಾಗೂ ಮುಖಂಡರಾದ ಜಗದೀಶ ಶೇಣವ, ವಿಜಯ ಕುಮಾರ್‌, ಮಾಧವ ಸುವರ್ಣ ಉಪಸ್ಥಿತರಿದ್ದರು.

ಇದನ್ನೂ ಓದಿ:ರೀಬಾಕ್‌ನಿಂದ ಹೊಸ ಸ್ಮಾರ್ಟ್‌ವಾಚ್‌ ; “ರೀಬಾಕ್‌ ಆ್ಯಕ್ಟಿವ್‌ ಫಿಟ್‌ 1.0′ ಬಿಡುಗಡೆ

ಪ್ರಧಾನಿ ಮೋದಿ ಸಂದೇಶ
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಸಂದೇಶದ ಮೂಲಕ ಗೌರವ ಸಲ್ಲಿಸಿದ್ದಾರೆ. ಕವಿ ಮುದ್ದಣ ಅವರ 152ನೇ ಜಯಂತಿ ಸಂದರ್ಭ 150 ರೂ. ನಾಣ್ಯ ಬಿಡುಗಡೆಯ ಬಗ್ಗೆ ಕೇಳಿ ಸಂತೋಷವಾಯಿತು. ತಮ್ಮ ಸಂಕ್ಷಿಪ್ತ ಜೀವಿತಾವಧಿಯಲ್ಲಿ ಕವಿ ಮುದ್ದಣ ಭಾರತದ ಸಾಹಿತ್ಯ- ಸಾಂಸ್ಕೃತಿಕ ಪರಂಪರೆಯನ್ನು ಸಮೃದ್ಧಗೊಳಿಸಿದ್ದಾರೆ. “ಶ್ರೀ ರಾಮಾಶ್ವಮೇಧ’ “ಶ್ರೀ ರಾಮ ಪಟ್ಟಾಭಿಷೇಕಮ್‌’ ಮತ್ತು “ಅದ್ಭುತ ರಾಮಾಯಣ’ಗಳಂಥ ಕೃತಿಗಳು ಕನ್ನಡ ಸಾಹಿತ್ಯಕ್ಕೆ ಒಂದು ಹೊಸ ಆಯಾಮ ತಂದುಕೊಟ್ಟಿವೆ ಎಂಬುದಾಗಿ ಮುದ್ದಣ ಪ್ರಕಾಶನದ ಸ್ಥಾಪಕ ಗೌರವಾಧ್ಯಕ್ಷ ನಂದಳಿಕೆ ಬಾಲಚಂದ್ರ ರಾವ್‌ ಅವರಿಗೆ ಕಳುಹಿಸಿರುವ ಸಂದೇಶದಲ್ಲಿ ತಿಳಿಸಿದ್ದಾರೆ.

 

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.