![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 27, 2022, 7:26 PM IST
ಪಣಜಿ: ರಾಜ್ಯದ ಎಲ್ಲ 40 ಕ್ಷೇತ್ರಗಳಲ್ಲಿ ಬಿಜೆಪಿಯು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು 22 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸುಲಭವಾಗಿ ಜಯ ಸಾಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸಾಖಳಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಾವಂತ್ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಗೋವಾ ಚುನಾವಣಾ ಪ್ರಭಾರಿ ದೇವೇಂದ್ರ ಫಡ್ನವೀಸ್ ಮತ್ತು ರಾಜೇಶ್ ಪಾಟ್ನೇಕರ್ ಉಪಸ್ಥಿತರಿದ್ದರು.
ಸಾಖಳಿ ಕ್ಷೇತ್ರದಲ್ಲಿ ಜನತೆ ಪ್ರಸಕ್ತ ಬಾರಿ ಮತ್ತೆ ನನ್ನನ್ನು ಆಶೀರ್ವದಿಸಲಿದ್ದಾರೆ. ಪ್ರಸಕ್ತ ಚುನಾವಣೆಯಲ್ಲಿ ಬಿಜೆಪಿ ಸರಳ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ವಿಶ್ವಾಸ ವ್ಯಕ್ತಪಡಿಸಿದರು.
ಒತ್ತಡಕ್ಕೆ ಮಣಿಯುವುದಿಲ್ಲ
ನಾನು ಚುನಾವಣೆಯಲ್ಲಿ ಸ್ಫರ್ಧಿಸಲು ತೀರ್ಮಾನಿಸಿದ್ದೇನೆ. ನನ್ನ ಜೊತೆ ಚರ್ಚೆಗೆ ಬರುವವರು ಬರಲಿ ಚರ್ಚೆಗೆ ಸಿದ್ಧನಿದ್ದೇನೆ. ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಲಕ್ಷ್ಮೀಕಾಂತ ಪಾರ್ಸೇಕರ್ ಹೇಳಿದ್ದಾರೆ.
ಇದನ್ನೂ ಓದಿ : ವಿಧಾನಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಉತ್ಪಲ್ ಪರ್ರಿಕರ್
ಬಿಜೆಪಿಯಿಂದ ಟಿಕೆಟ್ ಲಭಿಸದ ಕಾರಣ ಪಾರ್ಸೇಕರ್ ಮಾಂದ್ರೆ ಕ್ಷೇತ್ರದಿಂದ ಪಕ್ಷೇತರರಾಗಿ ಕಣಕ್ಕಿಳಿದಿದ್ದು ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಇದುವರೆಗೂ ನನ್ನೊಂದಿಗೆ ಯಾರೂ ಚರ್ಚೆಗೆ ಬಂದಿಲ್ಲ. ಬರಲಿಚ್ಛಿಸುವವರು ನೇರವಾಗಿ ಚರ್ಚೆಗೆ ಬರಲಿ ಎಂದು ಬಿಜೆಪಿ ನಾಯಕರಿಗೆ ಸವಾಲೆಸೆದಿದ್ದಾರೆ. ಮುಖ್ಯಮಂತ್ರಿ ಅಥವಾ ಸಚಿವನಾಗಲು ನನಗೆ ಟಿಕೆಟ್ ಬೇಡ. ಹಾಗಾಗಿ ಬಿಜೆಪಿಗೆ ಮತ್ತೆ ಸೇರುವ ಪ್ರಶ್ನೆಯೇ ಉಧ್ಭವಿಸುವುದಿಲ್ಲ. ಪಕ್ಷಕ್ಕಾಗಿ ಇಲ್ಲಿಯ ವರೆಗೆ ಸಾಕಷ್ಟು ಕೆಲಸ ಮಾಡಿದ್ದೇನೆ. ಇನ್ನು ಮುಂದೆಯೂ ಜನಪರ ಕೆಲಸ ಮಾಡುತ್ತೇನೆ. ಎಂದು ಹೇಳುವ ಮೂಲಕ ಬಿಜೆಪಿ ನಾಯಕರು ತನ್ನ ಮನವೊಲಿಸುವ ಎಲ್ಲಾ ಸಾಧ್ಯತೆಗಳನ್ನು ಪಾರ್ಸೇಕರ್ ತಳ್ಳಿಹಾಕಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.