ಭಾರತಕ್ಕಿದೆ ಕ್ರಾಂತಿಕಾರಿ ಯುವಕರ ಅವಶ್ಯಕತೆ


Team Udayavani, Jan 28, 2022, 12:27 PM IST

12youth

ವಾಡಿ: ಸ್ವಾತಂತ್ರ್ಯ ಚಳವಳಿಯಲ್ಲಿ ಬ್ರಿಟಿಷರನ್ನು ನಡುಗಿಸಿದ್ದ ಕೆಚ್ಚೆದೆಯ ನೇತಾಜಿ ಸುಭಾಶ್ಚಂದ್ರ ಬೋಸ್‌, ಶಹೀದ್‌ ಭಗತ್‌ಸಿಂಗ್‌, ಚಂದ್ರಶೇಖರ ಆಜಾದ್‌, ಖುದಿರಾಮ ಬೋಸ್‌ ಅವರಂತ ಕ್ರಾಂತಿಕಾರಿ ಯುವಕರ ಅವಶ್ಯಕತೆ ಸ್ವಾತಂತ್ರ್ಯೋತ್ತರದ ಶೋಷಿತ ಭಾರತಕ್ಕಿದೆ ಎಂದು ಗುಲಬರ್ಗಾ ವಿವಿ ಜೈವಿಕ ತಂತ್ರಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ| ರಮೇಶ ಲಂಡನಕರ ಅಭಿಪ್ರಾಯ ವ್ಯಕ್ತಪಡಿಸಿದರು.

ಎಐಡಿಎಸ್‌ಒ, ಎಐಡಿವೈಒ, ಆರ್‌ಕೆಎಸ್‌ ಸಂಘಟನೆಗಳ ವತಿಯಿಂದ ಗುರುವಾರ ಪಟ್ಟಣದ ಅಂಬೇಡ್ಕರ್‌ ಸ್ಮಾರಕ ಭವನದಲ್ಲಿ ಏರ್ಪಡಿಸಲಾಗಿದ್ದ ನೇತಾಜಿ ಸುಭಾಶ್ಚಂದ್ರ ಬೋಸ್‌ ಅವರ 125ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.

ಬಡತನ, ನಿರುದ್ಯೋಗ, ಶೋಷಣೆ, ಜಾತಿವಾದ, ಕೋಮುವಾದ, ಭ್ರಷ್ಟಾಚಾರದಿಂದ ಕೂಡಿರುವ ದೇಶದಲ್ಲಿ ಯುವಜನರು ಕೆಟ್ಟ ರಾಜಕಾರಣಕ್ಕೆ ದುರ್ಬಳಕೆಯಾಗುತ್ತಿದ್ದಾರೆ. ಅತ್ಯಂತ ಸರಳವಾಗಿ ಮಾದಕ ವಸ್ತುಗಳು ಯುವಜನರ ಕೈಗೆ ಸಿಗುವಂತಹ ಕೆಟ್ಟ ವ್ಯವಸ್ಥೆ ಬದಲಿಸಲು ಯುವಶಕ್ತಿ ವೈಚಾರಿಕವಾಗಿ ಜಾಗೃತರಾಗಬೇಕಿದೆ. ಇದಕ್ಕಾಗಿ ಅನ್ಯಾಯದ ವಿರುದ್ಧ ಸಿಡಿದೇಳುವ ಮತ್ತು ಹೋರಾಟದ ಮನೋಭಾವ ಮೂಡಿಸುವ ವೈಚಾರಿಕ ಪಠ್ಯ ಶಿಕ್ಷಣ ಜಾರಿಗೆ ಬರಬೇಕು ಎಂದರು.

ಎಐಯುಟಿಯುಸಿ ಜಿಲ್ಲಾ ಉಪಾಧ್ಯಕ್ಷ ರಾಘವೇಂದ್ರ ಎಂ.ಜಿ ಮಾತನಾಡಿ, 1947ರಲ್ಲಿ ಆಗಿದ್ದು ಕೇವಲ ರಾಜಕೀಯ ಹಸ್ತಾಂತರ. ಭಿಕ್ಷೆ ರೂಪದಲ್ಲಿ ಶ್ರೀಮಂತರ ಕೈಗೆ ಸ್ವಾತಂತ್ರ್ಯ ನೀಡಿ ತೊಲಗಿದ ಬ್ರಿಟಿಷರು, ಭಾರತದಲ್ಲಿ ಶೋಷಣೆ ಶಾಶ್ವತವಾಗಿರಲು ಕಾರಣರಾದರು. ಕ್ರಾಂತಿಕಾರಿಗಳ ನೇತೃತ್ವದಲ್ಲಿ ಸ್ವಾತಂತ್ರ್ಯ ಬಂದಿದ್ದರೆ ದೇಶದ ಸ್ಥಿತಿ ಹೀಗಿರುತ್ತಿರಲಿಲ್ಲ ಎಂದರು.

ಶಿಕ್ಷಣಪ್ರೇಮಿ ಪ್ರಕಾಶ ಚಂದನಕೇರಿ ಮುಖ್ಯ ಅತಿಥಿಯಾಗಿದ್ದರು. ಆರ್‌ಕೆಎಸ್‌ ಜಿಲ್ಲಾ ಉಪಾಧ್ಯಕ್ಷ ಗುಂಡಣ್ಣ ಎಂ.ಕೆ, ಮುಖಂಡರಾದ ವೀರಭದ್ರಪ್ಪ ಆರ್‌.ಕೆ, ಶರಣು ಹೇರೂರ, ಮಲ್ಲಿನಾಥ ಹುಂಡೇಕಲ್‌, ಗೌತಮ ಪರತೂರಕರ, ಮಲ್ಲಿಕಾರ್ಜುನ ಗಂದಿ, ವಿಠ್ಠಲ ರಾಠೊಡ, ರಾಜು ಒಡೆಯರಾಜ, ಯೇಸಪ್ಪ ಕೇದಾರ ಮತ್ತಿತರರು ಪಾಲ್ಗೊಂಡಿದ್ದರು. ಗೋವಿಂದ ಯಳವಾರ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chalavadi Narayanaswamy ಡ್ರಾಮಾ ಬೇಡ: ಪ್ರಿಯಾಂಕ್‌ ಖರ್ಗೆ

Chalavadi Narayanaswamy ಡ್ರಾಮಾ ಬೇಡ: ಪ್ರಿಯಾಂಕ್‌ ಖರ್ಗೆ

ಬಿಜೆಪಿಯದ್ದು ಜಗಳ ಹಚ್ಚುವ ಪಾಲಿಟಿಕ್ಸ್‌: ಡಾ|ಶರಣಪ್ರಕಾಶ

ಬಿಜೆಪಿಯದ್ದು ಜಗಳ ಹಚ್ಚುವ ಪಾಲಿಟಿಕ್ಸ್‌: ಡಾ|ಶರಣಪ್ರಕಾಶ

siddaramaiahಸಿದ್ಧರಾಮಯ್ಯ ಲೂಟಿಕೋರ ಅಲ್ಲ, ಜುಗ್ಗಯ್ಯ…: ಕಾಗಿನೆಲೆ ಶ್ರೀಗಳು

Kalaburagi; ಸಿದ್ಧರಾಮಯ್ಯ ಲೂಟಿಕೋರ ಅಲ್ಲ, ಜುಗ್ಗಯ್ಯ…: ಕಾಗಿನೆಲೆ ಶ್ರೀಗಳು

Siddaramaiah

Kalaburagi: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ-ಕೈಗಾರಿಕಾ ನೀತಿ ಜಾರಿಗೆ ಬದ್ದ: ಸಿಎಂ

ಹಗರಣದಲ್ಲೇ ಮುಳುಗಿದೆ ಕಾಂಗ್ರೆಸ್‌ ಸರ್ಕಾರ: ಪಿ. ರಾಜೀವ್‌

ಹಗರಣದಲ್ಲೇ ಮುಳುಗಿದೆ ಕಾಂಗ್ರೆಸ್‌ ಸರ್ಕಾರ: ಪಿ. ರಾಜೀವ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.