ಗುಡ್ಡದ ಅಡಿಕೆ ತೋಟ ಸೃಷ್ಟಿಸಿದ ವಿಹಂಗಮ ನೋಟ; ರಾಮಕುಂಜ ಯುವಕನ ವಿಶಿಷ್ಟ ಸಾಧನೆ


Team Udayavani, Jan 29, 2022, 7:05 AM IST

ಗುಡ್ಡದ ಅಡಿಕೆ ತೋಟ ಸೃಷ್ಟಿಸಿದ ವಿಹಂಗಮ ನೋಟ; ರಾಮಕುಂಜ ಯುವಕನ ವಿಶಿಷ್ಟ ಸಾಧನೆ

ಕಡಬ: ಅಡಿಕೆಗೆ ಬಂಪರ್‌ ಧಾರಣೆ ಸಿಗುತ್ತಿರುವುದರಿಂದ ಅನೇಕ ಯುವಕರು ಅಡಿಕೆ ಕೃಷಿ ಯತ್ತ ಮನಸ್ಸು ಮಾಡುತ್ತಿದ್ದಾರೆ. ರಾಮಕುಂಜ ಯುವಕರೊಬ್ಬರು ಗುಡ್ಡದ ಮೇಲೆ ಅಡಿಕೆ ತೋಟ ಅರಳಿಸುವ ವಿಶೇಷ ಪ್ರಯತ್ನಕ್ಕೆ ಇಳಿದಿದ್ದಾರೆ.

ಹಳೆನೇರೆಂಕಿ ಗ್ರಾಮದ ಇಜ್ಜಾವು ಶಿವಪ್ರಸಾದ್‌ ಆಚಾರ್ಯರು ಮನೆಯ ಹಿಂದಿನ ಗುಡ್ಡದ ಮೇಲೆ ಸುಮಾರು 13 ಎಕರೆ ಜಾಗದಲ್ಲಿ ಗುಂಡಿ ಗಳನ್ನು ತೋಡಿ ಅಡಿಕೆ ಸಸಿ ನಾಟಿ ಮಾಡಿ ದ್ದಾರೆ. ಗುಡ್ಡ ವನ್ನು ಇಳಿಜಾರು ರೀತಿಯಲ್ಲಿ ತಟ್ಟು ಮಾಡಿದ್ದು, ನಡುನಡುವೆ ರಸ್ತೆ, ಎತ್ತರದಲ್ಲಿ ಭಾರೀ ಗಾತ್ರದ ಟ್ಯಾಂಕ್‌ ನಿರ್ಮಿಸಿ ಹನಿ ನೀರಾವರಿ ಅಳವಡಿಸಿದ್ದಾರೆ.

ನಿವೃತ್ತ ಉಪನ್ಯಾಸಕ, ಜ್ಯೋತಿಷಿ ಮಾಧವ ಆಚಾರ್ಯ ಇಜ್ಜಾವು ಅವರ ಪುತ್ರ, ಮೆಕ್ಯಾನಿಕಲ್‌ ಎಂಜಿನಿಯರ್‌ ಶಿವಪ್ರಸಾದ್‌ ಆಚಾರ್ಯ ಕಟ್ಟಡ ನಿರ್ಮಾಣ ವೃತ್ತಿಯವರು. ಜತೆಗೆ ಹಿರಿಯರಿಂದ ಬಂದ ಭೂಮಿಯಲ್ಲಿ ಕೃಷಿ ಅಭಿವೃದ್ಧಿಯೊಂದಿಗೆ ಖಾಲಿ ಗುಡ್ಡದಲ್ಲಿ ಅಡಿಕೆ ಕೃಷಿಗಿಳಿದಿದ್ದಾರೆ.

ಕೊರೊನಾ ಕಾಲದಲ್ಲಿ ಆರಂಭ
ಹಿಟಾಚಿ ಜೆಸಿಬಿ ಇದ್ದು, ಕೊರೊನಾ ಕಾಲದಲ್ಲಿ ಹಿಟಾಚಿಗೆ ಕೆಲಸ ಇರಲಿಲ್ಲ. ಆಗ ಸ್ವಂತ ಕೃಷಿಗೆ ಹಿಟಾಚಿ ಬಳಸಲು ನಿರ್ಧರಿಸಿ ಗುಡ್ಡವನ್ನು ತಟ್ಟು ಮಾಡುವ ಕೆಲಸ ಆರಂಭಿಸಿದ್ದರು. ಈ ಕಾರ್ಯಕ್ಕೆ ಸುಮಾರು ಆರು ತಿಂಗಳು ಹಿಡಿಯಿತು. ಸುಮಾರು 2.5 ಅಡಿ ಅಗಲ, 2 ಅಡಿ ಆಳದ ಗುಂಡಿಗಳನ್ನು ತೋಡಿ ಅಡಿಕೆ ಗಿಡ ನೆಡಲಾಗಿದ್ದು, 6 ಗಿಡಗಳ ನಡುವೆ ಮಾರ್ಗ ನಿರ್ಮಿಸಲಾಗಿದೆ. ಭವಿಷ್ಯದಲ್ಲಿ ಮದ್ದು ಸಿಂಪಡನೆ ಮಾಡಲು, ಅಡಿಕೆ ಫ‌ಸಲು ಕೊಯ್ಲು ಮತ್ತು ಸಾಗಾಟಕ್ಕೆ ಉಪಯೋಗಿಸುವ ದೂರದೃಷ್ಟಿಯಿಂದ ಈ ರಸ್ತೆ ನಿರ್ಮಿಸಲಾಗಿದೆ.

ವ್ಯವಸ್ಥಿತವಾಗಿ ನಿರ್ಮಿಸಲಾದ ತೋಟದಲ್ಲಿ ಅರ್ಧದಷ್ಟು ಮಂಗಳಾ ಮತ್ತು ಇನ್ನರ್ಧದಷ್ಟು ರತ್ನಗಿರಿ ತಳಿಯ ಸುಮಾರು 4 ಸಾವಿರ ಅಡಿಕೆ ಸಸಿ ನಾಟಿ ಮಾಡಲಾಗಿದೆ. ಗುಡ್ಡದ ಎತ್ತರದಲ್ಲಿ 30 ಅಡಿ ಸುತ್ತಳತೆ ಮತ್ತು 25 ಅಡಿ ಆಳದ ಭಾರೀ ಟ್ಯಾಂಕ್‌ ನಿರ್ಮಿಸಿದ್ದು, ಟ್ಯಾಂಕ್‌ನ ಸುತ್ತ 14 ಅಡಿಗಳಷ್ಟು ಮಣ್ಣು ಪೇರಿಸಲಾಗಿದೆ. 2 ಕೊಳವೆ ಬಾವಿಗಳಿಂದ ಟ್ಯಾಂಕ್‌ಗೆ ನೀರು ತುಂಬಲಾಗುತ್ತದೆ.

ಜಾಲತಾಣದಲ್ಲೂ ಸದ್ದು
ಶಿವಪ್ರಸಾದ್‌ ರೂಪಿಸಿರುವ ವಿಶೇಷ ತೋಟ ಸಾಮಾಜಿಕ ಜಾಲ ತಾಣದಲ್ಲಿಯೂ ಗಮನ ಸೆಳೆದಿದ್ದು, ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ವ್ಯಾಟ್ಸ್‌ಆ್ಯಪ್‌ನಲ್ಲಿ ತೋಟದ ವಿಹಂಗಮ ನೋಟದ ವೀಡಿಯೋ ಜನಮೆಚ್ಚುಗೆ ಗಳಿಸಿದೆ.

ಭವಿಷ್ಯದ ಮುಂದಾಲೋಚನೆ
ಒಂದು ಗಿಡಕ್ಕೆ ಎರಡು ಡ್ರಿಪ್‌ ಅಳವಡಿಸಲಾಗಿದ್ದು, ಒಂದು ತಾಸಿನಲ್ಲಿ 8 ಲೀಟರ್‌ ನೀರು ಗಿಡಕ್ಕೆ ಬೀಳುತ್ತದೆ. ಅಷ್ಟೂ ನಾಲ್ಕು ಸಾವಿರ ಗಿಡಗಳಿಗೆ ಕೇವಲ ಒಂದು ತಾಸಿನಲ್ಲಿ ನೀರು ಉಣಿಸಲಾಗುತ್ತದೆ. ವಿಶೇಷವೆಂದರೆ ಇದೇ ಹನಿ ನೀರು ವ್ಯವಸ್ಥೆಯಲ್ಲಿ 20 ಸಾವಿರ ಗಿಡಗಳಿಗೆ ಏಕಕಾಲದಲ್ಲಿ ನೀರುಣಿಸಬಹುದು. ಮಾತ್ರವಲ್ಲ, ಈ ಹನಿ ನೀರಾವರಿ ಯೋಜನೆಯಲ್ಲಿ ವೆಂಚರ್‌ ಅಳವಡಿಸಲಾಗಿದ್ದು, ಅದರ ಮೂಲಕ ಗಿಡಗಳಿಗೆ ರಸಗೊಬ್ಬರವನ್ನು ದ್ರವರೂಪದಲ್ಲಿ ಪೂರೈಸಲು ವ್ಯವಸ್ಥೆ ಕಲ್ಪಿಸಲಾಗಿದೆ. ಇದರ ಈಗಿನ ನಿರ್ವಹಣೆ ದಿನದಲ್ಲಿ ಕೇವಲ ಒಂದು ತಾಸು ಅಷ್ಟೆ. ಈ ಅಡಿಕೆ ತೋಟದ ನಿರ್ಮಾಣಕ್ಕೆ ಸುಮಾರು 20 ಲಕ್ಷ ರೂ ಖರ್ಚು ಮಾಡಲಾಗಿದೆ. ಆದರೆ ಭವಿಷ್ಯದಲ್ಲಿ ಖರ್ಚುವೆಚ್ಚಗಳು ಕಡಿಮೆ ಎಂದು ಅಂದಾಜಿಸಲಾಗಿದೆ. ಈ ವ್ಯವಸ್ಥಿತ ತೋಟವನ್ನು ಇನ್ನಷ್ಟು ವಿಸ್ತರಿಸುವ ಯೋಜನೆ ಇವರಲ್ಲಿದೆ.

ಕೊರೊನಾದಿಂದ ಲಾಕ್‌ ಡೌನ್‌ ಆದಾಗ ಗುಡ್ಡದಲ್ಲಿ ಅಡಿಕೆ ಕೃಷಿಗಿಳಿದೆ. ವಿಶೇಷ ಯೋಜನೆ, ದೂರದೃಷ್ಟಿಯಿಂದ ನಾಲ್ಕೇ ವರ್ಷಗಳಲ್ಲಿ ಉತ್ತಮ ಫ‌ಸಲು ಪಡೆಯುವ ಉದ್ದೇಶ ಹೊಂದಿದ್ದೇನೆ. ಈ ತೋಟದಲ್ಲಿ ಜಾರಿಗೊಳಿಸಿರುವ ಯೋಜನೆಗಳಿಂದ ಭವಿಷ್ಯದಲ್ಲಿ ನಿರ್ವಹಣೆ ವೆಚ್ಚ ಕಡಿಮೆಯಾಗಲಿದೆ. ಕೃಷಿಯಲ್ಲಿ ಯುವಜನತೆ ಹೆಚ್ಚು ತೊಡಗಿಸಿಕೊಂಡಾಗ ಸ್ವಾವಲಂಬಿ ಬದುಕಿನೊಂದಿಗೆ ಸದೃಢ ಭಾರತ ನಿರ್ಮಾಣ ಸಾಧ್ಯ.
– ಶಿವಪ್ರಸಾದ್‌ ಆಚಾರ್ಯ ಇಜ್ಜಾವು

ಟಾಪ್ ನ್ಯೂಸ್

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Thumbe: ಅಗೆದಲ್ಲಿ ಕಡೆಗೂ ಡಾಮರು

Thumbe: ಅಗೆದಲ್ಲಿ ಕಡೆಗೂ ಡಾಮರು

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.