ಕಳೆಗುಂದಿದ್ದ ಕರ್ಕುಂಜೆ ಕನ್ನಡ ಶಾಲೆಗೆ ನವರೂಪ

"ಕನ್ನಡ ಮನಸುಗಳು ಪ್ರತಿಷ್ಠಾನ'ದ ಪ್ರಯತ್ನ ; ಚಿತ್ರ ನಟಿ ನೀತು ಭಾಗಿ

Team Udayavani, Jan 30, 2022, 6:50 AM IST

ಕಳೆಗುಂದಿದ್ದ ಕರ್ಕುಂಜೆ ಕನ್ನಡ ಶಾಲೆಗೆ ನವರೂಪ

ಕರ್ಕುಂಜೆ ಕನ್ನಡ ಶಾಲೆಗೆ ಹೊಸ ರೂಪ.

ಕುಂದಾಪುರ: ಸರಕಾರಿ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ, ಬೆಳೆಸಬೇಕು ಎನ್ನುವ ಕೂಗು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಇದಕ್ಕೊಂದು ನಿದರ್ಶನ ಎಂಬಂತೆ “ಕನ್ನಡ ಮನಸುಗಳು ಪ್ರತಿಷ್ಠಾನ’ ಎಂಬ ತಂಡವೊಂದು ತಮ್ಮ ಸ್ವಂತ ಹಣ ಮಾತ್ರವಲ್ಲದೆ, ದಾನಿಗಳಿಂದಲೂ ಹಣ ಸಂಗ್ರಹಿಸಿ ಗ್ರಾಮೀಣ ಭಾಗಗಳ ಕನ್ನಡ ಶಾಲೆಗಳಿಗೆ ನವರೂಪ ನೀಡಿ, ಅಭಿವೃದ್ಧಿಪಡಿಸಲು ಟೊಂಕಕಟ್ಟಿ ನಿಂತಿದೆ.

ಈ ಕನ್ನಡ ಮನಸುಗಳು ಪ್ರತಿಷ್ಠಾನವು ಸರಕಾರಿ ಕನ್ನಡ ಶಾಲೆ ಉಳಿಸಿ ಅಭಿಯಾನವನ್ನು ಕೈಗೊಂಡಿದ್ದು, ಅದರಡಿ ಈ ಬಾರಿ ಬೈಂದೂರು ವಲಯದ 94 ವರ್ಷಗಳ ಇತಿಹಾಸವಿರುವ ಕರ್ಕುಂಜೆ ಸರಕಾರಿ ಹಿ.ಪ್ರಾ. ಶಾಲೆಯನ್ನು ಆಯ್ಕೆ ಮಾಡಿಕೊಂಡಿದೆ. ಶಾಲೆಗೆ ಸುಣ್ಣ- ಬಣ್ಣ ಬಳಿದು, ಹೊಸ ಮೆರುಗು ನೀಡುವುದರ ಜತೆಗೆ, ಇನ್ನಿತರ ಪೀಠೊ ಪಕರಣ ಗಳನ್ನು ನೀಡುವ ಮೂಲಕ ಎಲ್ಲರಿಗೂ ಮಾದರಿಯಾಗುವ ಕಾರ್ಯವನ್ನು ಮಾಡಿದೆ.

60 ಮಂದಿಯ ತಂಡ
ದೂರದ ಬೆಂಗಳೂರಿನಿಂದ ಆಗಮಿ ಸಿರುವ ಈ ಕನ್ನಡ ಮನಸುಗಳು ತಂಡದಲ್ಲಿ ಒಟ್ಟು 100 ಮಂದಿಯಿದ್ದು, ಈ ಬಾರಿ ಈ ಶನಿವಾರ ಕರ್ಕುಂಜೆ ಶಾಲೆ ಹಾಗೂ ಕೂಡಿಗಿ ಕಿರಿಯ ಪ್ರಾಥಮಿಕ ಶಾಲೆಗೆ ಕೈಂಕರ್ಯಕ್ಕಾಗಿ 60 ಮಂದಿ ಆಗಮಿಸಿದ್ದಾರೆ. ಈ ತಂಡದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಯುವಕ-ಯುವತಿಯರು ಸೇರಿಕೊಂಡಿದ್ದಾರೆ. ಉದ್ಯೋಗದ ಜತೆ- ಜತೆಗೆ ಕನ್ನಡ ಶಾಲೆಗಳನ್ನು ಉಳಿಸುವ ಸಮಾಜಮುಖೀ ಕಾಯಕದಲ್ಲಿಯೂ ತೊಡಗಿಸಿಕೊಂಡಿರುವುದು ಅನು ಕರಣೀಯ. ರಾಜ್ಯದ 31 ಜಿಲ್ಲೆಗಳಲ್ಲಿ ತಲಾ 2 ಶಾಲೆ ಆಯ್ಕೆ ಮಾಡಿಕೊಂಡು, ಹೊಸ ರೂಪ ಕೊಡುವ ಪಣ ತೊಟ್ಟಿದ್ದಾರೆ.

11ನೇ ಶಾಲೆ
ಈವರೆಗೆ ರಾಮನಗರ, ಬೆಂಗಳೂರು, ಮಂಡ್ಯ, ಹಾಸನ, ಶಿವಮೊಗ್ಗ ಸೇರಿದಂತೆ ದ.ಕ ಜಿಲ್ಲೆಯ ಸುಳ್ಯ ಶಾಲೆ ಸೇರಿದಂತೆ 10 ಶಾಲೆಗಳನ್ನು ಈಗಾಗಲೇ ಅಭಿವೃದ್ಧಿಪಡಿಸಿದ್ದು, ಇದು 11ನೇ ಶಾಲೆಯಾಗಿದೆ. 31 ಜಿಲ್ಲೆಯಿಂದ ಬರೋಬ್ಬರಿ 62 ಶಾಲೆಗಳ ಅಭಿವೃದ್ಧಿಗೆ ಪಣತೊಟ್ಟಿರುವ ಈ ತಂಡಕ್ಕೆ ಸೂರ್ಯ ಫೌಂಡೇಶನ್‌ ಪ್ರಧಾನ ನೆರವು ನೀಡುತ್ತಿದ್ದು, 50 ಸಾವಿರ ರೂ.ನಿಂದ 1 ಲಕ್ಷ ರೂ.ವರೆಗೆ ಪೇಂಟಿಂಗ್‌ ವೆಚ್ಚ ಭರಿಸುತ್ತದೆ. ಇನ್ನಿತರ ದಾನಿಗಳಿಂದ ಶಾಲೆಗೆ ಅಗತ್ಯವಿರುವ ಪೀಠೊಪಕರಣ, ಫ್ಯಾನ್‌, ವಿದ್ಯುತ್‌ ದೀಪ, ಡಿಜಿಟಲೀಕರಣ, ಪ್ರಾಜೆಕ್ಟರ್‌ ಇನ್ನಿತರ ಸಲಕರಣಗಳನ್ನು ಸಹ ಈ ತಂಡ ಒದಗಿಸಿಕೊಡುತ್ತದೆ.

ನಮ್ಮೂರ ಶಾಲೆಯ ಬಗ್ಗೆ ನಮ್ಮ ತಂಡದಲ್ಲಿ ಮನವಿ ಮಾಡಿಕೊಂಡಿದ್ದೆ. ನಮ್ಮೂರಿಗೆ ಬಂದು ನಮ್ಮ ಶಾಲೆಯನ್ನು ಅವರ ಶಾಲೆ ಎಂದು ಭಾವಿಸಿ ಖುಷಿಂದಲೇ ಕೆಲಸ ಮಾಡಿದ್ದಾರೆ ಎನ್ನುತ್ತಾರೆ ತಂಡದ ಸದಸ್ಯ, ಸ್ಥಳೀಯರಾದ ಗಣೇಶ್‌ ಕೊಡ್ಲಾಡಿ.

25 ಶಾಲೆಗಳಿಂದ ಬೇಡಿಕೆ
ಆರಂಭದಲ್ಲಿ ದಾನಿಗಳಿಂದ ಸಂಗ್ರಹಿಸಿದ ಹಣದಲ್ಲಿ ಕೇವಲ ಬಣ್ಣ ಮಾತ್ರ ಬಳಿಯುತ್ತಿದ್ದೇವು. ಈಗೀಗ ಕಲಿಕೆಗೆ ಪೂರಕವಾದ ಪೀಠೊಪಕರಣಗಳಿಗೂ ಬೇಡಿಕೆ ಬರುತ್ತಿದೆ. ಜಿಲ್ಲೆಯಲ್ಲಿಯೇ ಅತ್ಯಂತ ಹಿಂದುಳಿದ ಶಾಲೆಗಳಿಗೆ ನಮ್ಮ ಮೊದಲ ಪ್ರಾಶಸ್ತ್ಯ ಕೊಡಲಾಗುತ್ತಿದೆ. ರಾಜ್ಯದ ಬೇರೆ ಬೇರೆ ಸುಮಾರು 25ಕ್ಕೂ ಹೆಚ್ಚು ಶಾಲೆಗಳಿಂದ ಈಗಾಗಲೇ ಬೇಡಿಕೆ ಬಂದಿದೆ. ಹಂತ-ಹಂತವಾಗಿ ಆ ಶಾಲೆಗಳ ಅಭಿವೃದ್ಧಿಪಡಿಸುತ್ತೇವೆ.
-ಪವನ್‌, ತಂಡದ ಪ್ರಮುಖರು

ಅನೇಕ ನೆರವು
116 ಮಕ್ಕಳು ಓದುತ್ತಿದ್ದು, ಶತಮಾನೋತ್ಸವಕ್ಕೆ ಕೇವಲ ಆರು ವರ್ಷಗಳು ಬಾಕಿ ಇವೆ. ಅನೇಕ ಅಭಿವೃದ್ಧಿ ಕೆಲಸ ಆಗಬೇಕಿತ್ತು. ಪಂಚಾಯತ್‌ ಹಾಗೂ ಹಳೆ ವಿದ್ಯಾರ್ಥಿ ಗಣೇಶ್‌ ಅವರ ನೆರವಿಂದ ಕನ್ನಡ ಮನಸುಗಳು ತಂಡದವರು ನಮ್ಮ ಶಾಲೆಗೆ ಬಂದಿದ್ದಾರೆ. ಬಣ್ಣ ಬಳಿಯುವ ಜತೆಗೆ ನಮ್ಮ ಶಾಲೆಗೆ ಅಗತ್ಯವಿರುವ ಬೇಡಿಕೆಗಳಾದ ಪ್ರಾಜೆಕ್ಟರ್‌, ಪ್ರಿಂಟರ್‌, ಟ್ಯೂಬ್‌ಲೈಟ್‌, ಮ್ಯಾಟ್‌, 14 ಕೋಣೆಗಳಿಗೆ ಬೇಕಾಗಿರುವ ಫ್ಯಾನ್‌ಗಳನ್ನು ಈಡೇರಿಸಿದ್ದಾರೆ. ಈ ತಂಡಕ್ಕೆ ಕೃತಜ್ಞತೆ.
– ಮೋತಿಲಾಲ್‌ ಲಮಣಿ, ಮುಖ್ಯೋಪಾಧ್ಯಾಯರು, ಕರ್ಕುಂಜೆ ಶಾಲೆ

ಟಾಪ್ ನ್ಯೂಸ್

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.