![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jan 30, 2022, 1:28 PM IST
ಪುನೀತ್ ರಾಜ್ಕುಮಾರ್ ನಿಧನರಾಗಿ ಶನಿವಾರಕ್ಕೆ ಮೂರು ತಿಂಗಳು. ಈ ಹಿನ್ನೆಲೆಯಲ್ಲಿ ಅವರ ಕುಟುಂಬ ವರ್ಗ ಶನಿವಾರ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ರಾಜ್ಕುಮಾರ್ ಸಮಾಧಿಗೆ ತೆರಳಿ ಪೂಜೆಸಲ್ಲಿಸಿದರು. ಈ ವೇಳೆ ರಾಘವೇಂದ್ರ ರಾಜ್ಕುಮಾರ್, ಅಶ್ವಿನಿ ಪುನೀತ್ ರಾಜ್ಕುಮಾರ್ ಸೇರಿದಂತೆ ಕುಟುಂಬ ವರ್ಗ ಹಾಜರಿತ್ತು.
ಎಂದಿನಂತೆ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಕೂಡಾ ಆಗಮಿಸಿ, ತಮ್ಮ ನೆಚ್ಚಿನ ನಟನಿಗೆ ಗೌರವ ಸಲ್ಲಿಸಿದರು. ಇನ್ನು ಇದೇ ವೇಳೆ ರಾಜ್ ಕುಟುಂಬ ಅಭಿಮಾನಿಗಳಿಗೆ 500 ಸಸಿಗಳನ್ನು ವಿತರಿಸುವ ಮೂಲಕ ಪರಿಸರ ಕಾಳಜಿ ಮೆರೆಯಿತು. ಮುಂದಿನ ದಿನಗಳಲ್ಲಿ ಸಮಾಧಿ ಬಳಿ ಬರುವ ಅಭಿಮಾನಿಗಳಿಗೆ ಮತ್ತಷ್ಟುಗಿಡಗಳನ್ನು ವಿತರಿಸಿ, ಪುನೀತ್ ಹುಟ್ಟುಹಬ್ಬದ ವೇಳೆ ಒಂದು ಲಕ್ಷಕ್ಕೂ ಹೆಚ್ಚು ಗಿಡಗಳನ್ನು ವಿತರಿಸುವ ಗುರಿ ಹೊಂದಿದೆ. ಈ ಕುರಿತು ಮಾತನಾಡಿದ ರಾಘವೇಂದ್ರ ರಾಜ್ಕುಮಾರ್, “ಎಲ್ಲೆಲ್ಲಿಂದಲೋ ಕಷ್ಟಪಟ್ಟು ಅಪ್ಪು ಮೇಲಿನ ಪ್ರೀತಿಗಾಗಿ ಅಭಿಮಾನಿಗಳು ಬರುತ್ತಿದ್ದಾರೆ.
ಹೀಗೆ ಬರುವ ಅಭಿಮಾನಿಗಳಿಗೆ ಒಂದೊಂದು ಗಿಡ ನೀಡಿದರೆ ಪರಿಸರ ರಕ್ಷಣೆ ಮಾಡಿದಂತಾಗುತ್ತದೆ. ಅಪ್ಪುಗೆ ಪರಿಸರ, ಕಾಡೆಂದರೆ ತುಂಬಾ ಇಷ್ಟ. ಹೀಗಾಗಿ ಅಭಿಮಾನಿಗಳು ಗಿಡ ನೆಟ್ಟು, ಅದನ್ನು ಒಂದು ವರ್ಷ ನೋಡಿಕೊಂಡರೆ ಮತ್ತೆ ಅದು ಬೆಳೆದುಕೊಂಡು ಹೋಗುತ್ತದೆ. ಇದಲ್ಲದೇ ಗಿಡ, ಮರಗಳಲ್ಲಿ ಆತ್ಮಗಳು ವಾಸಿಸುತ್ತವೆ ಎಂಬ ನಂಬಿಕೆಯೂ ಇದೆ. ಹಾಗಾಗಿ, ಆ ಆತ್ಮಗಳಿಗೂ ನಾವು ಗೌರವ ಕೊಟ್ಟಂತಾಗುತ್ತದೆ. ಅಪ್ಪು ಅಭಿಮಾನಿಗಳು ಗಿಡ ನೆಟ್ಟು ಇಡೀ ಕರ್ನಾಟಕವನ್ನು ಹಸಿರಾಗಿಸಬೇಕು’ ಎಂದು ಮನವಿ ಮಾಡಿದರು.
ಇನ್ನು, ಶನಿವಾರ ಸಮಾಧಿ ಬಳಿ ಅನ್ನದಾನ ಹಾಗೂ ಸಂಜೆ ವೇಳೆ ದೀಪೋತ್ಸವ ಕೂಡಾ ನಡೆಯಿತು.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.