ಮಾರಿಕಾಂಬಾ ವ್ಯವಸ್ಥಾಪಕ ಸಮಿತಿ ಲೆಕ್ಕಪತ್ರ ವಿವಾದ; ಸದ್ಯದಲ್ಲಿಯೇ ಸಮಾಲೋಚನಾ ಸಭೆ


Team Udayavani, Jan 30, 2022, 7:31 PM IST

ಮಾರಿಕಾಂಬಾ ವ್ಯವಸ್ಥಾಪಕ ಸಮಿತಿ ಲೆಕ್ಕಪತ್ರ ವಿವಾದ; ಸದ್ಯದಲ್ಲಿಯೇ ಸಮಾಲೋಚನಾ ಸಭೆ

ಸಾಗರ: ಶಿರಸಿಯ ನಂತರ ನಾಡಿನ ಎರಡನೇ ಅತಿ ದೊಡ್ಡ ಮಾರಿ ಜಾತ್ರೆ ನಿರ್ವಹಿಸುವ ಇಲ್ಲಿನ ಮಾರಿಕಾಂಬಾ ವ್ಯವಸ್ಥಾಪಕ ಸಮಿತಿಯ ಸರ್ವಸದಸ್ಯರ ಸಭೆಯು ವೀರಶೈವ ಕಲ್ಯಾಣ ಮಂಟಪದಲ್ಲಿ ಭಾನುವಾರ ಗೊಂದಲದ ನಡುವೆ ನಡೆದು, ಹಾಲಿ ವ್ಯವಸ್ಥಾಪಕ ಸಮಿತಿಯೇ ಅಧಿಕಾರದಲ್ಲಿ ಮುಂದುವರೆಯುವ ನಿರ್ಣಯ ಕೈಗೊಳ್ಳಲಾಯಿತು. ಹೊಸದಾಗಿ ಸಮಿತಿಗೆ 15 ಸದಸ್ಯರನ್ನು ನೇಮಕ ಮಾಡಿಕೊಳ್ಳುವ ಮೂಲಕ ಶಾಸಕರ ನೇತೃತ್ವದಲ್ಲಿ ಸದ್ಯದಲ್ಲಿಯೇ ಮತ್ತೊಂದು ಸಮಾಲೋಚನಾ ಸಭೆಯ ಕರೆಯುವ ನಿರ್ಧಾರವನ್ನೂ ಪ್ರಕಟಿಸಲಾಯಿತು.

ಸಭೆ ಆರಂಭದಿಂದಲೂ ಗೊಂದಲವೇ ಹೆಚ್ಚು ಕಂಡು ಬಂದಿತು. ಸಭೆಗೆ ಸದಸ್ಯರು ಅಲ್ಲದವರು ಬರುವ ಪ್ರಯತ್ನ ನಡೆಸಿದಾಗ ಪೊಲೀಸರ ಬಂದೋಬಸ್ತಿನಲ್ಲಿ ಅವರನ್ನು ತಡೆಯುವ ಪ್ರಯತ್ನ ನಡೆಯಿತು. ತಮಗೆ ಸಭೆಯಲ್ಲಿ ಪಾಲ್ಗೊಳ್ಳಲು ಅವಕಾಶ ಕೊಡದಿರುವುದು ಮತ್ತು ಶಾಸಕರನ್ನು ಸಭೆಗೆ ಕರೆಯದೆ ಇರುವುದರ ವಿರುದ್ಧ ಕೆಲವರು ಧಿಕ್ಕಾರ ಸಹ ಕೂಗಿದರು.

ಹಿತರಕ್ಷಣಾ ಸಮಿತಿಯ ಆನಂದ್ ಮಾತನಾಡಿ, ಹಾಲಿ ಸಮಿತಿಯ ಬಗ್ಗೆ ಭ್ರಷ್ಟಾಚಾರ ಆರೋಪ ಇರುವುದರಿಂದ ಸಮಿತಿಯು ತನ್ನ ಸ್ಥಾನವನ್ನು ಬಿಟ್ಟುಕೊಟ್ಟು ಹೊಸಬರಿಗೆ ಅವಕಾಶ ಕಲ್ಪಿಸಬೇಕು ಎಂದು ಪ್ರತಿಪಾದಿಸಿದರೆ, ಹಾಲಿ ಸಮಿತಿಯ ಸಹ ಸಂಚಾಲಕ ಕೃಷ್ಣಮೂರ್ತಿ ಎಸ್.ವಿ. ಮತ್ತು ಪುರುಷೋತ್ತಮ್ ಸಭೆ ಒಪ್ಪಿಗೆ ಇದ್ದರೆ ಹೊಸ ಸಮಿತಿಯನ್ನು ಆಯ್ಕೆ ಮಾಡಬಹುದು ಎಂದು ಹೇಳಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಮಾತನಾಡಿ, ಕಳೆದ ಮಾರಿಜಾತ್ರೆ ಸಂದರ್ಭದಲ್ಲಿ ಶಾಸಕರು ಅಭಿವೃದ್ಧಿಗಾಗಿ 1 ಕೋಟಿ ರೂ. ನೀಡಿದ್ದಾರೆ. ಇದರಿಂದ ರಸ್ತೆ, ಚರಂಡಿ, ಸ್ವಚ್ಛತೆಯಂತಹ ಕೆಲಸವನ್ನು ಕೈಗೊಂಡು, ಶಾಸಕರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ಜಾತ್ರೆ ಮಾಡಲಾಗಿದೆ. ಆದರೆ ಸಭೆಗೆ ಶಾಸಕರನ್ನು ಕರೆಯದಿರುವುದು ಹಾಗೂ ಜಾತ್ರಾ ಯಶಸ್ಸಿಗೆ ಆಡಳಿತಾತ್ಮಕವಾಗಿ ಸಹಕಾರ ನೀಡುವ ಉಪವಿಭಾಗಾಧಿಕಾರಿಗಳನ್ನು ಕರೆಯದೆ ಇರುವುದು ಸರಿಯಲ್ಲ. ಜೊತೆಗೆ ಸಮಿತಿಯನ್ನು ವಜಾಗೊಳಿಸಿ ಟ್ರಸ್ಟ್ ಮಾಡುವ ಉದ್ದೇಶ ಬೇಡ ಎಂದು ಒತ್ತಾಯಿಸಿದರು.

ಪತ್ರಕರ್ತ ಎಂ.ರಾಘವೇಂದ್ರ ಮಾತನಾಡಿ, ದೇವಸ್ಥಾನದಲ್ಲಿ ಆಡಳಿತ ನಡೆಸುವವರ ಮೇಲೆ ಕಾನೂನಿನ ಹಿಡಿತ ಇರಲಿ ಎನ್ನುವ ಕಾರಣಕ್ಕೆ ಹಿಂದಿನ ಸರ್ವಸದಸ್ಯರ ಸಭೆಯಲ್ಲಿ ಟ್ರಸ್ಟ್ ಮಾಡುವ ನಿರ್ಣಯ ಕೈಗೊಳ್ಳಲಾಗಿದ್ದು, ಈಗಾಗಲೇ ಅದು ಜಿಲ್ಲಾ ನ್ಯಾಯಾಲಯದಲ್ಲಿ ಇದೆ. ದೇವಸ್ಥಾನದಲ್ಲಿ ಪಾರದರ್ಶಕತೆ ತರಲು ಟ್ರಸ್ಟ್ ಅಗತ್ಯ ಇದೆ ಎಂದು ಹೇಳಿದರು. ವ್ಯವಸ್ಥಾಪಕ ಸಮಿತಿ ಕಾರ್ಯದರ್ಶಿ ಬಿ.ಗಿರಿಧರರಾವ್ ಮಾತನಾಡಿ, ದೇವಸ್ಥಾನವು ಎಲ್ಲ ಹಂತದಲ್ಲಿಯೂ ನಮ್ಮ ಅವಧಿಯಲ್ಲಿ ಅಭಿವೃದ್ಧಿ ಹೊಂದಿದೆ. ಹಾಲಿ ಸುಮಾರು ೫೦೦ ಜನ ಸದಸ್ಯರಿದ್ದು, ಟ್ರಸ್ಟ್ ರಚನೆ ನಂತರ ಹೊಸದಾಗಿ ಸದಸ್ಯರನ್ನು ನೇಮಕ ಮಾಡಿಕೊಳ್ಳಲು ಸದಸ್ಯತ್ವ ಅಭಿಯಾನ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.

ನಗರಸಭಾ ಸದಸ್ಯೆ ಎನ್.ಲಲಿತಮ್ಮ ಮಾತನಾಡಿ, ಮಾರಿಕಾಂಬಾ ಹೆಣ್ಣು ದೇವರಾಗಿದ್ದು ವ್ಯವಸ್ಥಾಪಕ ಸಮಿತಿಯಲ್ಲಿ ಮಹಿಳೆಯರು ಇಲ್ಲದೆ ಇರುವುದು ಅವಮಾನಕರ ಸಂಗತಿಯಾಗಿದೆ. ಹೊಸ ಸಮಿತಿ ರಚನೆ ಮಾಡುವಾಗ ಮಹಿಳಾ ಪ್ರಾತಿನಿಧ್ಯ ನೀಡುವಂತೆ ಒತ್ತಾಯಿಸಿದರು. ಸಭೆಯಲ್ಲಿ ಎಂ.ನಾಗರಾಜ್, ಈಶ್ವರ್, ತಾರಾಮೂರ್ತಿ, ನಾಗೇಂದ್ರ ಕುಮಟಾ ಇನ್ನಿತರರು ಮಾತನಾಡಿದರು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ವ್ಯವಸ್ಥಾಪಕ ಸಮಿತಿ ಅಧ್ಯಕ್ಷ ಕೆ.ಎನ್.ನಾಗೇಂದ್ರ ಹಾಲಿ ಸಮಿತಿಯು ಮುಂದುವರೆಯಲಿದ್ದು, ಹೊಸದಾಗಿ 15 ಜನರನ್ನು ಸಮಿತಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಹೊಸ ಸಮಿತಿಯು ಶಾಸಕರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಮುಂದಿನ ಕಾರ್ಯಯೋಜನೆ ರೂಪಿಸುವುದಾಗಿ ಘೋಷಣೆ ಮಾಡಿದರು.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.