ಅನ್ನಭಾಗ್ಯ ಯೋಜನೆ ಅಕ್ಕಿ  ಅಕ್ರಮ ಸಾಗಾಟ: 80 ಮೂಟೆ ಅಕ್ಕಿ  ವಶ


Team Udayavani, Jan 31, 2022, 1:19 PM IST

Untitled-1

ಕುಣಿಗಲ್‌: ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ ವಾಹನದ ಮೇಲೆ ಆಹಾರಇಲಾಖಾಧಿಕಾರಿ ದಾಳಿ ಮಾಡಿ 80 ಮೂಟೆ ಅಕ್ಕಿ,ವಾಹನ ಹಾಗೂ ಚಾಲಕನನ್ನು ವಶಕ್ಕೆ ಪಡೆದಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.

ತುಮಕೂರು ಜಿಲ್ಲೆ ಹೆಬ್ಬೂರು ತಾಲೂಕುಬೊಮ್ಮನಹಳ್ಳಿ ಗ್ರಾಮದ ಹಾಲಿ ಕುಣಿಗಲ್‌ ತಾಲೂಕಿನಎಡೆಯೂರು ಹೋಬಳಿ ಚೊಟ್ಟನಹಳ್ಳಿ ಗ್ರಾಮದ ವಾಸಿವಾಹನ ಚಾಲಕ ಶ್ರೀನಿವಾಸ್‌ ಬಂಧಿತ ಆರೋಪಿ.ಪಟ್ಟಣದ ದೊಡ್ಡಪೇಟೆ ಕಡೆಯಿಂದ ಅಕ್ಕಿಯನ್ನುತುಂಬಿಕೊಂಡು ಬುಲೆರೋ ವಾಹನದಲ್ಲಿ ಮದ್ದೂರುಕಡೆಗೆ ಹೋಗುತ್ತಿರಬೇಕಾದರೆ ಆಹಾರ ಶಿರಸ್ತೇದಾರಮಲ್ಲಿಕಾರ್ಜುನಯ್ಯ, ಆಹಾರ ನಿರೀಕ್ಷಕ ಸಚಿನ್‌ಪ್ರಸಾದ್‌ ಚಿಕ್ಕಕೆರೆ ಏರಿ ಮೇಲೆ ದಾಳಿ ಮಾಡಿ 80 ಚೀಲಅಕ್ಕಿಯನ್ನು ವಶಕ್ಕೆ ಪಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.ಆಹಾರ ನಿರೀಕ್ಷಕ ಸಚಿನ್‌ ಪ್ರಸಾದ್‌ ನೀಡಿದದೂರಿನನ್ವಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಂಡಿದ್ದಾರೆ.

ನ್ಯಾಯ ಬೆಲೆ ಅಂಗಡಿ ಕೈವಾಡ: ಬಡತನ ರೇಖೆಗಿಂತ ಕೆಳಗೆ ಇರುವ ಕುಟುಂಬಕ್ಕೆ ನ್ಯಾಯ ಬೆಲೆ ಅಂಗಡಿ ಮೂಲಕ ಕೇಂದ್ರ ಹಾಗೂ ರಾಜ್ಯ ತಲಾ ಐದು ಕೆ.ಜಿ.ಅಕ್ಕಿಯನ್ನು ಒಬ್ಬ ವ್ಯಕ್ತಿಗೆ ಉಚಿತವಾಗಿನೀಡಲಾಗುತ್ತಿದೆ. ಇದನ್ನು ಪಡಿತದಾರರಿಗೆಸಮರ್ಪಕವಾಗಿ ನೀಡದೇ ಕಳ್ಳ ಸಾಗಾಣಿಕೆ ಮೂಲಕಅಕ್ಕಿಯನ್ನು ಸಾಗಿಸಿ ಮಾರಾಟ ಮಾಡುತ್ತಿರುವುದುಹಲವು ದಿನಗಳಿಂದ ನಡೆಯುತ್ತಿದೆ. ಇದರ ಹಿಂದೆನ್ಯಾಯ ಬೆಲೆ ಅಂಗಡಿಯ ಮಾಲೀಕರು ಹಾಗೂ ಅಧಿಕಾರಿಗಳ ಕೈವಾಡ ಇದೆ ಎನ್ನಲಾಗಿದೆ.

ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ ಕಾರ್ಯಕರ್ತ: ಶನಿವಾರ ಸಂಜೆ ಪಟ್ಟಣದ ದೊಡ್ಡಪೇಟೆಯಗೋಡನ್‌ವೊಂದರಲ್ಲಿ ಅಕ್ಕಿ ಮೋಟೆಯನ್ನು ಬುಲೆರೋ ವಾಹನದಲ್ಲಿ ತುಂಬಲಾಗುತ್ತಿತ್ತು. ಈಸಂಬಂಧ ಆಹಾರ ಇಲಾಖೆಯ ಅಧಿಕಾರಿ ಹಾಗೂತಹಶೀಲ್ದಾರ್‌ ಅವರಿಗೆ ಮೊಬೈಲ್‌ ಮೂಲಕಸಂಪರ್ಕಿಸಿ ವಿಷಯ ತಿಳಿಸಲಾಗಿತ್ತು.

ವಿಷಯ ತಿಳಿಸಿಒಂದು ಗಂಟೆಯಾದರೂ ಯಾವೊಬ್ಬ ಅಧಿಕಾರಿಯೂಸ್ಥಳಕ್ಕೆ ಬರಲಿಲ್ಲ, ಬಳಿಕ ಅಕ್ಕಿ ತುಂಬಿದ ಬುಲೆರೋವಾಹನ ದೊಡ್ಡಪೇಟೆಯ ಗುಜ್ಜಾರಿ ಮೊಹಲ್ಲಾಮಾರ್ಗವಾಗಿ ರಾಜ್ಯ ಹೆದ್ದಾರಿ 33 ರ ಟಿ.ಎಂ ರಸ್ತೆಯಚಿಕ್ಕಕೆರೆ ಏರಿ ಮೇಲೆ ಹೋಗುತ್ತಿರ ಬೇಕಾದರೆ ನಾನುಮತ್ತು ನನ್ನ ಕಾರ್ಯಕರ್ತರು ವಾಹನ ತಡೆದುಅಧಿಕಾರಿಗಳಿಗೆ ಮತ್ತೆ ಫೋನ್‌ ಮಾಡಿ ತಿಳಿಸಿದೆವು.

ಆಗ ಅಲ್ಲಿಗೆ ಆಹಾರ ಶಿರಸ್ತೇದಾರ್‌ಮಲ್ಲಿಕಾರ್ಜುನಯ್ಯ, ಹಾರ ನಿರೀಕ್ಷಕ ಸಚಿನ್‌ಪ್ರಸಾದ್‌ ಬಂದು ಅಕ್ಕಿಯನ್ನು ವಶಕ್ಕೆ ಪಡೆದುಚಾಲಕನನ್ನು ಠಾಣೆಗೆ ಕರೆದ್ಯೋದರು ಎಂದುಮಾಹಿತಿ ಹಕ್ಕು, ಸಾಮಾಜಿಕ ಕಾರ್ಯಕರ್ತ ವೇದಿಕೆಯ ಎಚ್‌.ಜಿ.ರಮೇಶ್‌ ಪತ್ರಿಕೆಗೆ ತಿಳಿಸಿದರು.

ಆಹಾರ ನೀರಿಕ್ಷಕರು ನೀಡಿರುವ ದೂರಿನನ್ವಯ ಪ್ರಕರಣ ದಾಖಲಿಸಿ ಕೊಂಡುತನಿಖೆ ಕೈಗೊಳ್ಳಲಾಗಿದೆ. ತನಿಖೆ ಬಳಿಕಸತ್ಯಾಂಶ ಹೊರ ಬೀಳಲಿದೆ. ಅಕ್ಕಿ ಸಾಗಾಣಿಕೆದಂಧೆ ನಡೆದಿರುವುದು ಸತ್ಯ ಎಂದು ಕಂಡು ಬಂದಲ್ಲಿ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು. ಡಿ.ಎಲ್‌. ರಾಜು, ಸಿಪಿಐ ಕುಣಿಗಲ್‌

ಬುಲೆರೋ ವಾಹನದಲ್ಲಿ ಅಕ್ಕಿ ತುಂಬಿ ಸಾಗಾಣಿಕೆ ಮಾಡಲಾಗುತ್ತಿದೆ ಎಂಬ ದೂರಿನ ಹಿನ್ನೆಲೆ, ಅಧಿಕಾರಿಗಳು ಸ್ಥಳಕ್ಕೆ ತೆರಳಿ ವಾಹನ ಹಾಗೂ ಅಕ್ಕಿ ವಶಪಡಿಸಿ ಕೊಂಡುಪೊಲೀಸರಿಗೆ ದೂರು ನೀಡಿದ್ದಾರೆ. ಈಸಂಬಂಧ ಠಾಣೆಯಲ್ಲಿ ಎಫ್‌ಐಆರ್‌ ಆಗಿದೆ. ತನಿಖೆ ನಂತರ ಸತ್ಯಾಂಶ ಹೊರ ಬರಲಿದೆ. ಮಹಾಬಲೇಶ್ವರ, ತಹಶೀಲ್ದಾರ್‌

ಟಾಪ್ ನ್ಯೂಸ್

-pumpwell

Rain: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಕೆಲವೆಡೆ ಹಾನಿ

gold

Guruvayur Devaswam ಒಡೆತನದಲ್ಲಿ 1,085 ಕೆ.ಜಿ. ಚಿನ್ನ!

nitish-kumar

Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

BELLARE-MALE

Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್‌

DANDIA-DANCE

Udupi Ucchila Dasara: ಸಾರ್ವಜನಿಕ ದಾಂಡಿಯಾ, ಗರ್ಭಾ ನೃತ್ಯ ಸಂಭ್ರಮ

siddanna-2

Guarantee ಯೋಜನೆಗಳಿಂದ ಕರ್ನಾಟಕ ನಂ. 1: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Renukaswamy ಪ್ರಕರಣ; ಜಾಮೀನು ಪಡೆದ ಮೂವರು ಜೈಲಿನಿಂದ ಬಿಡುಗಡೆ

Koratagere: ಚಿನ್ನ ನೀಡುವುದಾಗಿ ಹಣ ಪಡೆದು ವಂಚಿಸಿದ ಪ್ರಕರಣ: ಮೂವರ ಬಂಧನ

Koratagere: ಚಿನ್ನ ನೀಡುವುದಾಗಿ ಹಣ ಪಡೆದು ವಂಚಿಸಿದ ಪ್ರಕರಣ: ಮೂವರ ಬಂಧನ

Python Rescue: ಬೃಹತ್ ಗಾತ್ರದ ಹೆಬ್ಬಾವು ಸೆರೆ

Python Rescue: ಬೃಹತ್ ಗಾತ್ರದ ಹೆಬ್ಬಾವು ಸೆರೆ

Kunigal

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

V.-Somanna

Railway Development: ರಾಜ್ಯದಲ್ಲಿ ರೈಲ್ವೇ ಕ್ರಾಂತಿಗೆ ಬದ್ಧ: ಕೇಂದ್ರ ಸಚಿವ ಸೋಮಣ್ಣ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

-pumpwell

Rain: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಕೆಲವೆಡೆ ಹಾನಿ

gold

Guruvayur Devaswam ಒಡೆತನದಲ್ಲಿ 1,085 ಕೆ.ಜಿ. ಚಿನ್ನ!

nitish-kumar

Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

attack

Public place ಮೂತ್ರ ವಿಸರ್ಜಿಸಬೇಡ ಎಂದಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.