ಬೆಂಗಳೂರು ವಿವಿ: ಎಬಿವಿಪಿ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್; ರವಿಕುಮಾರ್ ಖಂಡನೆ
ಪೊಲೀಸರು ಮನಸೋ ಇಚ್ಛೆ ಬಂದಂತೆ, ಅತ್ಯಂತ ಕ್ರೌರ್ಯವಾಗಿ ಲಾಠಿಚಾರ್ಜ್ ಮಾಡಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ
Team Udayavani, Jan 31, 2022, 6:24 PM IST
ಬೆಂಗಳೂರು: ಪ್ರತಿಭಟನಾ ನಿರತ ಎಬಿವಿಪಿ ಕಾರ್ಯಕರ್ತರ ಮೇಲೆ ಪೊಲೀಸರು ಅಮಾನುಷವಾಗಿ ಲಾಠಿಚಾರ್ಜ್ ಮಾಡಿರುವುದು ಖಂಡನೀಯ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯರಾದ ಎನ್ ರವಿಕುಮಾರ್ ಹೇಳಿದ್ದಾರೆ.
ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯವು ಸಾವಿರಾರು ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ಪರೀಕ್ಷಾ ಫಲಿತಾಂಶ ಪ್ರಕಟಿಸದಿರುವ ಹಾಗೂ ಇತರೆ ಶೈಕ್ಷಣಿಕ ಸಮಸ್ಯೆಗಳನ್ನು ಪರಿಹರಿಸಲು ಆಗ್ರಹಿಸಿ ಇಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಶಾಂತಿಯುತ ಪ್ರತಿಭಟನೆ ಮಾಡುತ್ತಿರುವ ಸಂದರ್ಭದಲ್ಲಿ ಪೊಲೀಸರು ಮನಸೋ ಇಚ್ಛೆ ಬಂದಂತೆ, ಅತ್ಯಂತ ಕ್ರೌರ್ಯವಾಗಿ ನೂರಾರು ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ಮಾಡಿರುವುದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದಿದ್ದಾರೆ.
ಕುಲಪತಿಗಳ ಜೊತೆ ವಿದ್ಯಾರ್ಥಿಗಳ ಬೇಡಿಕೆಗಳ ಈಡೇರಿಕೆ ಕುರಿತು ಮಾತುಕತೆ ನಡೆಸಬಹುದಿತ್ತು, ಅಲ್ಲದೇ ಪರಿಸ್ಥಿತಿ ತುಂಬಾ ಕೈ ಮೀರಿದ್ದರೇ ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಬಂಧಿಸಬಹುದಿತ್ತು, ಆದರೆ ಪೊಲೀಸರು ಏಕಾಏಕಿ ಲಾಠಿಚಾರ್ಜ್ ಮಾಡಿ ಹಲವಾರು ವಿದ್ಯಾರ್ಥಿಗಳ ತಲೆ ಒಡೆಯುವ ಹಾಗೂ ಕೈಕಾಲುಗಳಿಗೆ ಗಾಯಗಳಾಗುವ ರೀತಿಯಲ್ಲಿ ಅಮಾನವೀಯವಾಗಿ ಪೊಲೀಸರು ಹಲ್ಲೆ ಮಾಡಿರುವುದು ಸರಿಯಲ್ಲ ಎಂದಿದ್ದಾರೆ.
ಮಾನ್ಯ ಗೃಹ ಸಚಿವರು ಕೂಡಲೇ ತಪ್ಪಿತಸ್ಥ ಪೊಲೀಸ್ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಹಾಗೂ ಶೀಘ್ರವಾಗಿ ಪರೀಕ್ಷಾ ಫಲಿತಾಂಶ ಬಿಡುಗಡೆಗೆ ಮಾನ್ಯ ಉನ್ನತ ಶಿಕ್ಷಣ ಸಚಿವರು, ಕುಲಪತಿಗಳು ಗಮನಹರಿಸಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕೆಂದು ನಾನು ಒತ್ತಾಯಿಸುತ್ತೇನೆ ಎಂದು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Test Cricket : ಮೆಂಡಿಸ್ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.