ಉರ್ವಸ್ಟೋರ್‌ ಮಾರುಕಟ್ಟೆ ಉನ್ನತೀಕರಣ; ಹೊಸ ಮಾರುಕಟ್ಟೆಗೆ ಮಹಾನಗರ ಪಾಲಿಕೆ ಒಲವು


Team Udayavani, Jan 31, 2022, 6:37 PM IST

ಉರ್ವಸ್ಟೋರ್‌ ಮಾರುಕಟ್ಟೆ ಉನ್ನತೀಕರಣ; ಹೊಸ ಮಾರುಕಟ್ಟೆಗೆ ಮಹಾನಗರ ಪಾಲಿಕೆ ಒಲವು

ಉರ್ವಸ್ಟೋರ್‌: ನಗರದಲ್ಲಿ ವಿವಿಧ ಮಾರುಕಟ್ಟೆಗಳು ಅಭಿವೃದ್ಧಿಗೊಳ್ಳುತ್ತಿರುವ ಮಧ್ಯೆಯೇ, ಶಿಥಿಲಾವಸ್ಥೆ ಹಾಗೂ ಇಕ್ಕಟ್ಟಿನಲ್ಲಿರುವ ಉರ್ವಸ್ಟೋರ್‌ ಮಾರುಕಟ್ಟೆ ಕೂಡ ಶೀಘ್ರದಲ್ಲಿ ಉನ್ನತೀಕರಿಣಗೊಳ್ಳುವ ನಿರೀಕ್ಷೆಯಿದೆ.

ಮೂಲಸೌಕರ್ಯ ಕೊರತೆಯಿಂದ ನಲುಗಿರುವ ಉರ್ವಸ್ಟೋರ್‌ ಮಾರುಕಟ್ಟೆಯ ಜಾಗದಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಾಣ ಸಂಬಂಧ ಮಂಗಳೂರು ಪಾಲಿಕೆಯು ಚಿಂತನೆ ನಡೆಸಿದೆ. ಈ ಸಂಬಂಧ ಮಾರುಕಟ್ಟೆ ಪರಿಧಿಯಲ್ಲಿರುವ ಸ್ಥಳದ ಬಗ್ಗೆ ಹಾಗೂ ಅಭಿವೃದ್ಧಿಗೊಳಿಸುವ ಸಾಧ್ಯತೆಗಳ ಬಗ್ಗೆ ಅವಲೋಕನ ಆರಂಭಿಸಲಾಗಿದೆ.

ಮಹಾನಗರ ಪಾಲಿಕೆಯ ಅಧೀನದಲ್ಲಿರುವ ಉರ್ವಸ್ಟೋರ್‌ ಮಾರುಕಟ್ಟೆ ತುಂಬ ಹಳೆಯದಾಗಿದ್ದು, ಜನರಿಗೆ ಮೂಲಸೌಕರ್ಯದ ಕೊರತೆ ಎದುರಿಸುತ್ತಿದೆ. ಮಾರುಕಟ್ಟೆಯು ಸದ್ಯ ಬಹುತೇಕ ಶಿಥಿಲಾವಸ್ಥೆಯಲ್ಲಿದೆ. ಹೀಗಾಗಿ ಈ ಮಾರುಕಟ್ಟೆಯನ್ನು ಉನ್ನತೀಕರಣಗೊಳಿಸಿ ಮೂಲ ಸೌಕರ್ಯ ಒದಗಿಸುವುದು ಪಾಲಿಕೆ ಲೆಕ್ಕಾಚಾರ.

ಹೊಸ ಮಾರುಕಟ್ಟೆಗೆ ಕಾರ್ಯಸೂಚಿ
ವಾಹನಗಳ ಪಾರ್ಕಿಂಗ್‌ಗೆ ಪ್ರತ್ಯೇಕ ವ್ಯವಸ್ಥೆ ಸಹಿತ ಆಧುನಿಕ ವ್ಯವಸ್ಥೆಯನ್ನು ಕಲ್ಪಿಸುವ ಕುರಿತು ಉರ್ವಸ್ಟೋರ್‌ ಮಾರುಕಟ್ಟೆಯ ಪೂರ್ವ, ಉತ್ತರ ಹಾಗೂ ದಕ್ಷಿಣ ಭಾಗದಲ್ಲಿರುವ ಸರಕಾರಿ ಜಾಗವನ್ನು ಸೇರಿಸಿಕೊಂಡು ಹೊಸ ಮಾರುಕಟ್ಟೆ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ಕಾರ್ಪೋರೆಟರ್‌ ಶೋಭಾ ರಾಜೇಶ್‌ ಅವರು ಈ ಬಗ್ಗೆ ಪಾಲಿಕೆಗೆ ಮನವಿ ಸಲ್ಲಿಸಿದ್ದು, ಪರಿಷತ್‌ನಲ್ಲಿ ಕಾರ್ಯಸೂಚಿ ಮಂಡಿಸಲು ಕೋರಿದ್ದಾರೆ.

ಸದ್ಯ ನಗರದಲ್ಲಿ ಕಂಕನಾಡಿ, ಕದ್ರಿ ಹೊಸ ಮಾರುಕಟ್ಟೆ ಸುಸಜ್ಜಿತವಾಗಿ ರೂಪುಗೊಳ್ಳುತ್ತಿದೆ. ಕೆಲವೇ ತಿಂಗಳುಗಳಲ್ಲಿ ಈ ಮಾರುಕಟ್ಟೆಗಳು ಲೋಕಾರ್ಪಣೆಗೊಳ್ಳುವ ನಿರೀಕ್ಷೆಯೂ ಇದೆ. ಜತೆಗೆ ನಗರದ ವಿವಿಧ ಮಾರುಕಟ್ಟೆಗಳು ಅಭಿವೃದ್ಧಿಯನ್ನು ಕಂಡಿದೆ. ಆದರೆ, ಉರ್ವಸ್ಟೋರ್‌ ಮಾರುಕಟ್ಟೆ ಮಾತ್ರ ಅಭಿವೃದ್ಧಿಯಾಗದೆ ಮೂಲಸೌಕರ್ಯ ಕೊರತೆ ಎದುರಿಸುತ್ತಿದೆ. ಹೀಗಾಗಿ ಈ ಮಾರುಕಟ್ಟೆಯನ್ನು ಉನ್ನತೀಕರಿಸಲು ಇದೀಗ ಚಿಂತನೆ ನಡೆಸಲಾಗಿದೆ.

ಜಮೀನಿಗೆ ಎದುರಾಗಿದೆ
ತಾಂತ್ರಿಕ ತಾಪತ್ರಯ!
ಉರ್ವಸ್ಟೋರ್‌ ಮಾರುಕಟ್ಟೆ ವ್ಯಾಪ್ತಿಯಲ್ಲಿ 1.77 ಎಕ್ರೆ ಸರಕಾರಿ, ಪಾಲಿಕೆಯ ಜಮೀನು ಇರುವ ಬಗ್ಗೆ ಮೋಜಣಿದಾರರ ನಕ್ಷೆಯಲ್ಲಿ ಉಲ್ಲೇಖೀಸಲಾಗಿದೆ. ಆದರೆ ಈ ಜಮೀನಿನಲ್ಲಿ 88 ಸೆಂಟ್ಸ್‌ ಜಮೀನನ್ನು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (ಮುಡಾ) ಅಭಿವೃದ್ಧಿಪಡಿಸಲು ಈ ಹಿಂದೆಯೇ ಲೀಸ್‌ಗೆ ನೀಡಲಾಗಿತ್ತು. ಉರ್ವಸ್ಟೋರ್‌ ಮಾರುಕಟ್ಟೆ ಅಭಿವೃದ್ಧಿ ಕಾರಣದಿಂದ ಇದನ್ನು ರದ್ದುಪಡಿಸುವಂತೆ ಪಾಲಿಕೆಯು 2019ರಲ್ಲಿ ಪ್ರಸ್ತಾವ ಮಾಡಿತ್ತು. ಆದರೆ ಇದು ಇನ್ನಷ್ಟೇ ಇತ್ಯರ್ಥವಾಗಬೇಕಿದೆ. ಇದರ ಜತೆಗೆ ಐ ಜಮೀನಿನ ಪೈಕಿ ಭ್ರಷ್ಟಾಚಾರ ನಿಗ್ರಹದಳ ಇಲಾಖೆಯವರು 15 ಸೆಂಟ್ಸ್‌ ಸರಕಾರಿ ಜಮೀನಿಗೆ ನಿರಾಪೇಕ್ಷಣಾ ಪತ್ರ ನೀಡುವಂತೆ ಪಾಲಿಕೆಯನ್ನು ಕೋರಿದ್ದಾರೆ. ಹೀಗಾಗಿ ಈ ಎರಡು ಸಂಗತಿಗಳನ್ನು ಮೊದಲು ಇತ್ಯರ್ಥ ಮಾಡಿದ ಬಳಿಕವಷ್ಟೇ ಮಾರುಕಟ್ಟೆ ಅಭಿವೃದ್ಧಿ ಪ್ರಕ್ರಿಯೆ ಆರಂಭವಾಗುವ ಸಾಧ್ಯತೆಯಿದೆ.

ಹೊಸ ಮಾರುಕಟ್ಟೆಗೆ ಆದ್ಯತೆ
ಉರ್ವಸ್ಟೋರ್‌ ಮಾರುಕಟ್ಟೆ ಅಭಿವೃದ್ಧಿಪಡಿಸುವ ಬಗ್ಗೆ ಬಹು ಬೇಡಿಕೆಯಿದೆ. ಇಲ್ಲಿ ಹೊಸ ಮಾರುಕಟ್ಟೆ ನಿರ್ಮಾಣಕ್ಕೆ ಈಗಾಗಲೇ ಚಿಂತನೆ ನಡೆಸಲಾಗಿದೆ. ಮಾರುಕಟ್ಟೆ ವ್ಯಾಪ್ತಿಯ ಜಮೀನಿಗೆ ಸಂಬಂಧಿಸಿ ಮುಡಾ ಹಾಗೂ ಭ್ರಷ್ಟಾಚಾರ ನಿಗ್ರಹದಳ ಇಲಾಖೆಯ ಕೋರಿಕೆ ವಿಚಾರವೂ ಪರಿಶೀಲನಾ ಹಂತದಲ್ಲಿದೆ. ಪಾಲಿಕೆ ಸಾಮಾನ್ಯ ಸಭೆಯಲ್ಲಿ ಈ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು.
-ಪ್ರೇಮಾನಂದ ಶೆಟ್ಟಿ,
ಮೇಯರ್‌, ಮಂಗಳೂರು ಪಾಲಿಕೆ

-ದಿನೇಶ್‌ ಇರಾ

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.