ಗುಡಿಸಲು ವಾಸಿಗಳಿಗೂ ಪರಿಹಾರ ಕೊಡಿ

ಭೂಸ್ವಾಧೀನ ಐತೀರ್ಪುಗೊಂಡ ಪ್ರಕರಣಗಳಲ್ಲಿ ಇನ್ನು 250.44 ಕೋಟಿ ಪರಿಹಾರ ಹಣ ವಿತರಿಸಲು ಬಾಕಿ

Team Udayavani, Feb 1, 2022, 5:57 PM IST

ಗುಡಿಸಲು ವಾಸಿಗಳಿಗೂ ಪರಿಹಾರ ಕೊಡಿ

ಬಾಗಲಕೋಟೆ: ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ರ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ವಿವಿಧ ಹಂತದಲ್ಲಿರುವ ಭೂಸ್ವಾಧೀನ ಪ್ರಕ್ರಿಯೆ ಚುರುಕುಗೊಳಿಸುವಂತೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸೂಚಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜರುಗಿದ ಕೃಷ್ಣಾ ಮೇಲ್ದಂಡೆ ಯೋಜನೆ ಅಡಿಯಲ್ಲಿ ಬರುವ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್‌ ನಿರ್ಮಾಣದ ವಿಷಯಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹಿನ್ನೀರ ಪ್ರದೇಶದಲ್ಲಿ ಮುಳುಗಡೆಯಾಗುವ 4871 ಎಕರೆ, ಪುನರ್ವಸತಿಗಾಗಿ 2394 ಎಕರೆ, ಕಾಲುವೆಗಾಗಿ 9173 ಎಕರೆ ಸೇರಿ ಒಟ್ಟು 16,438 ಕ್ಷೇತ್ರಕ್ಕೆ ಭೂಸ್ವಾ ಧೀನ ಪ್ರಕ್ರಿಯೆ ಪ್ರಾರಂಭಿಸಿದೆ. ಇದು ಪ್ರಕ್ರಿಯೆ ಚುರುಕಾಗಬೇಕು. ಬಾಕಿ ಭೂಸ್ವಾಧೀನ ಪ್ರಕ್ರಿಯೆ ಸಹ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚಿಸಿದರು.

ತರಬೇತಿ ಅ ಧಿಕಾರಿಗಳನ್ನು ಬಳಸಿಕೊಳ್ಳಿ: ಜಿಲ್ಲೆಗೆ ಆಗಮಿಸಿದ ಪ್ರೊಬೇಷನರಿ ಕೆಎಎಸ್‌ ಅಧಿಕಾರಿಗಳಿಗೆ ತರಬೇತಿ ನೀಡಿ ಭೂಸ್ವಾ ಧೀನ ಪ್ರಕ್ರಿಯೆಯಲ್ಲಿ ಬಳಸಿಕೊಳ್ಳಬೇಕು. ಈಗಾಗಲೇ ಒಟ್ಟು 1,33,867 ಎಕರೆ ಜಮೀನ ಪೈಕಿ 23341 ಎಕರೆ ಭೂಸ್ವಾಧೀನ ಪಡಿಸಿಕೊಂಡಿದ್ದು, 2716.51 ಕೋಟಿ ರೂ.ಗಳ ಪರಿಹಾರ ವಿತರಿಸಲಾಗಿದೆ. ಭೂಸ್ವಾಧೀನ ಐತೀರ್ಪುಗೊಂಡ ಪ್ರಕರಣಗಳಲ್ಲಿ ಇನ್ನು 250.44 ಕೋಟಿ ಪರಿಹಾರ ಹಣ ವಿತರಿಸಲು ಬಾಕಿ ಉಳಿದಿದ್ದು, ರೈತರಿಂದ ಓಚರ್‌ ಪಡೆದು ಪರಿಹಾರ ವಿತರಿಸಬೇಕು ಎಂದರು.

ವಿವಿಧ ಹಂತದಲ್ಲಿರುವ ಭೂಸ್ವಾಧೀನ, ಪುನರ್ವಸತಿ ಸೌಲಭ್ಯದ ಕಾಮಗಾರಿ, ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿ ಕಾರ ಒಳಗೊಂಡಂತೆ ಸುಮಾರು 3000 ಕೋಟಿ ಅನುದಾನ ಮಾರ್ಚ್‌ ಅಂತ್ಯಕ್ಕೆ ಅವಶ್ಯಕತೆ ಇದ್ದು, ಕ್ರಮ ವಹಿಸುವುದಾಗಿ ತಿಳಿಸಿದರು.

ಉದಗಟ್ಟಿಗೆ 1 ಕೋಟಿ ಅನುದಾನ: ಉದಗಟ್ಟಿ ಪುನರ್ವಸತಿ ಕೇಂದ್ರದ ಅಭಿವೃದ್ಧಿªಗೆ 1 ಕೋಟಿ ನೀಡಲು ತಿಳಿಸಿದ ಕಾರಜೋಳ ಅವರು, ಮುಳುಗಡೆ ಪ್ರದೇಶದಲ್ಲಿ ಸರಕಾರಿ ಗೌಂಟನ್‌ ಜಾಗದಲ್ಲಿ ಮನೆ, ಗುಡಿಸಲು ಕಟ್ಟಿಕೊಂಡವರಿಗೂ ಪರಿಹಾರ ನೀಡಬೇಕು. ಪುನರ್ವಸತಿ ನಿರ್ಮಾಣದ ನಂತರ ಉಳಿದ ಜಮೀನನ್ನು ಸರಕಾರಿ ಶಾಲೆ, ಕಾಲೇಜು, ವಸತಿ ನಿಲಯಗಳಿಗೆ ಅವಕಾಶವಿದ್ದಲ್ಲಿ ಈ ಕುರಿತು ಸಭೆ ನಡೆಸಿ ತೀರ್ಮಾನಿಸಲು ಹೇಳಿದರು.

3ನೇ ಹಂತದ ಗ್ರಾಮೀಣ ಮತ್ತು ನಗರ ಸೇರಿ ಒಟ್ಟು 25,550 ಕಟ್ಟಡಗಳ ಪೈಕಿ 2,383 ಕಟ್ಟಡಗಳಿಗೆ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಲಾಗಿದ್ದು, ಸದ್ಯ 4 ಗ್ರಾಮಗಳ 3739 ಕಟ್ಟಡಗಳ ಐ ತೀರ್ಪು ಹಂತದಲ್ಲಿವೆ. ಪುನರ್ವಸತಿಗಾಗಿ 1821.23 ಎಕರೆ, ನ್ಯಾಯಾಲಯದಿಂದ ತಡೆಯಾಜ್ಞೆ 487.14 ಎಕರೆ, ಅಧಿ ಸೂಚನೆ ಹಂತದಲ್ಲಿರುವ 99.01 ಎಕರೆ, ಪ್ರಸ್ತಾವನೆ ಹಂತದಲ್ಲಿ 2295.13 ಎಕರೆ ಇರುವುದಾಗಿ ಯುಕೆಪಿಯ ವಿಶೇಷ ಜಿಲ್ಲಾ ಧಿಕಾರಿ ಸೋಮಲಿಂಗ ಗೆನ್ನೂರ ಸಭೆಗೆ
ತಿಳಿಸಿದರು.

ಯುಕೆಪಿ ಹಂತ 1 ಮತ್ತು 2ರಲ್ಲಿ ಕೃಷ್ಣಾ ಕಣಿವೆಯ ಸ್ಕೀಮ್‌-1ನೇ ತೀರ್ಪಿನನ್ವಯ 173 ಟಿ.ಎಂಸಿ ನೀರು ಹಂಚಿಕೆಯಾಗಿದ್ದು, ಎಫ್‌ಆರ್‌ಎಲ್‌ 519.600 ಮೀಟರ್‌ವರೆಗೆ ನೀರನ್ನು ಸಂಗ್ರಹಿಸಿ 11 ಯೋಜನೆಗಳಿಂದ ಯೋಜಿತ 6.20 ಲಕ್ಷ ಹೆಕ್ಟೇರ್‌ ಜಮೀನಿಗೆ ನೀರಾವರಿ ಸೌಲಭ್ಯ ಒದಗಿಸಿದೆ. ನಾರಾಯಣರ ಜಲಾಶಯ ವ್ಯಾಪ್ತಿಯ 37010 ಎಕರೆ, ಆಲಮಟ್ಟಿ ಜಲಾಶಯ ವ್ಯಾಪ್ತಿಯ 138460 ಎಕರೆ, ಭೀಮಾ ಬ್ರಿಡ್ಜ್ಗಾಗಿ 289 ಎಕರೆ, ಸನ್ನತಿ ಬ್ರಿಡ್ಜ್ ಕಂ ಬ್ಯಾರೇಜ್‌ಗಾಗಿ 1024 ಸೇರಿ ಒಟ್ಟು 176783 ಎಕರೆ ಜಮೀನು ಭೂಸ್ವಾಧಿಧೀನಪಡಿಸಿಕೊಳ್ಳಲಾಗಿದೆ ಎಂದರು.

ಶಾಸಕ ವೀರಣ್ಣ ಚರಂತಿಮಠ, ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಕುಮಾರ, ಯುಕೆಪಿಯ ಆಯುಕ್ತ ಶಿವಯೋಗಿ ಕಳಸದ, ಅಪರ ಜಿಲ್ಲಾ ಧಿಕಾರಿ ಮಹಾದೇವ ಮುರಗಿ, ಯುಕೆಪಿಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎಚ್‌.ಡಿ. ದಾಸರ, ಉಪ ವಿಭಾಗಾಧಿಕಾರಿ ಎಂ. ಗಂಗಪ್ಪ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ..ರಾತ್ರಿಯಿಡಿ ಸಾಗುವ ರಥೋತ್ಸವ

ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ… ರಾತ್ರಿಯಿಡಿ ಸಾಗುವ ರಥೋತ್ಸವ

Pak flag ಹಾರಾಡುವ ರೀಲ್ಸ್ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ; ಪ್ರಕರಣ ದಾಖಲು

Pak flag ಹಾರಾಡುವ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.