ಜಗತ್ತು ಬಲಿಷ್ಠ ಭಾರತವನ್ನು ನೋಡಲು ಬಯಸುತ್ತಿದೆ: ಪ್ರಧಾನಿ ಮೋದಿ
ಆತ್ಮನಿರ್ಭರ ಅರ್ಥವ್ಯವಸ್ಥೆ ಕುರಿತು ಭಾಷಣ
Team Udayavani, Feb 2, 2022, 12:56 PM IST
ನವದೆಹಲಿ : ಆತ್ಮನಿರ್ಭರ ಅರ್ಥವ್ಯವಸ್ಥೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರನ್ನು ಉದ್ದೇಶಿಸಿ ವರ್ಚುಯಲ್ ಭಾಷಣವನ್ನು ಮಾಡಿ, ಭಾರತದ ಬಗೆಗಿನ ವಿಶ್ವದ ಬದಲಾದ ದೃಷ್ಟಿಕೋನದೊಂದಿಗೆ, ನಮ್ಮ ಆರ್ಥಿಕತೆಯನ್ನು ಬಲಪಡಿಸುವ ಮೂಲಕ ದೇಶವನ್ನು ತ್ವರಿತ ಗತಿಯಲ್ಲಿ ಮುನ್ನಡೆಸುವುದು ನಮಗೆ ಅತ್ಯಗತ್ಯವಾಗಿದೆ ಎಂದರು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟನ್ನು ಅದರ ವಿಶಾಲತೆಯನ್ನು ಗಮನದಲ್ಲಿಟ್ಟುಕೊಂಡು ಸಮಯೋಚಿತವಾಗಿ ವಿವರಿಸಿದರು. ಇಂದು ನಾನು ಬಜೆಟ್ನ ಪ್ರಮುಖ ಅಂಶಗಳತ್ತ ಗಮನ ಹರಿಸಲು ಪ್ರಯತ್ನಿಸುತ್ತೇನೆ ಎಂದರು.
ಸಾವಯವ ಕೃಷಿಯತ್ತ ಗಮನಹರಿಸಿ ಭಾರತೀಯ ಕೃಷಿಯನ್ನು ಆಧುನೀಕರಿಸುವ ಬಗ್ಗೆಯೂ ಬಜೆಟ್ ಗಮನಹರಿಸಿದೆ. ಇದರಿಂದ ಕೃಷಿ ಲಾಭದಾಯಕವಾಗಲಿದೆ. ಕಿಸಾನ್ ಡ್ರೋನ್ಗಳು ಮತ್ತು ಇತರ ಯಂತ್ರೋಪಕರಣಗಳು ರೈತರಿಗೆ ಸಮಂಜಸವಾದ ಬೆಲೆಯಲ್ಲಿ ಲಭ್ಯವಾಗಲಿವೆ ಎಂದರು.
ಗಡಿಭಾಗದ ಗ್ರಾಮಗಳ ಅಭಿವೃದ್ಧಿಗೂ ಬಜೆಟ್ನಲ್ಲಿ ಒತ್ತು ನೀಡಲಾಗಿದೆ. ಗಡಿಭಾಗದಲ್ಲಿರುವ ಶಾಲೆಗಳಲ್ಲಿ ಎನ್ಸಿಸಿ ಕೇಂದ್ರಗಳನ್ನು ತರಲಾಗುವುದು ಎಂದರು.
ಬಜೆಟ್ಗೆ ಮೆಚ್ಚುಗೆ ವ್ಯಕ್ತವಾಗಿದೆ. 7 ವರ್ಷಗಳ ಹಿಂದೆ, ಭಾರತದ GDP 1 ಲಕ್ಷ 10,000 ಕೋಟಿ ರೂ.ಗಳಷ್ಟಿತ್ತು ಆದರೆ ಇಂದು ಅದು ಸುಮಾರು 2 ಲಕ್ಷದ 30,000 ಕೋಟಿ ರೂ. ದೇಶದ ವಿದೇಶೀ ವಿನಿಮಯ ಮೀಸಲು ಕೂಡ $200 ಶತಕೋಟಿಯಿಂದ $630 ಶತಕೋಟಿಗೆ ಏರಿದೆ. ಇವೆಲ್ಲವೂ ನಮ್ಮ ಸರ್ಕಾರದ ಪರಿಣಾಮಕಾರಿ ನೀತಿಗಳಿಂದ ಸಾಧ್ಯವಾಗಿದೆ ಎಂದರು.
ಸ್ವಾವಲಂಬಿ ಮತ್ತು ಆಧುನಿಕ ಭಾರತವನ್ನು ಮಾಡುವುದು ನಮಗೆ ಬಹಳ ಮುಖ್ಯ. ಭಾರತವನ್ನು ಆಧುನಿಕತೆಯ ದಿಕ್ಕಿನಲ್ಲಿ ಮುನ್ನಡೆಸಲು ಈ ಬಜೆಟ್ ಹಲವಾರು ಪ್ರಮುಖ ನಿಬಂಧನೆಗಳನ್ನು ಹೊಂದಿದೆ. ಕಳೆದ 7 ವರ್ಷಗಳಲ್ಲಿ ಕೈಗೊಂಡ ನಿರ್ಧಾರಗಳಿಂದ ಭಾರತದ ಆರ್ಥಿಕತೆ ನಿರಂತರವಾಗಿ ವಿಸ್ತರಿಸುತ್ತಿದೆ ಎಂದರು.
ಇಲ್ಲಿ ಕೋವಿಡ್ ಸಾಂಕ್ರಾಮಿಕದ ನಂತರದ ಹೊಸ ವಿಶ್ವ ಕ್ರಮದ ಸಾಧ್ಯತೆಯಿದೆ. ಇಂದು ಭಾರತವನ್ನು ನೋಡುವ ಪ್ರಪಂಚದ ದೃಷ್ಟಿಕೋನವು ಬಹಳಷ್ಟು ಬದಲಾಗಿದೆ. ಈಗ, ಜಗತ್ತು ಬಲಿಷ್ಠ ಭಾರತವನ್ನು ನೋಡಲು ಬಯಸುತ್ತಿದೆ ಎಂದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ವೀಕ್ಷಿಸಿದರು. ಈ ವೇಳೆ ಸಚಿವ ಗೋವಿಂದ ಕಾರಜೋಳ, ಶಾಸಕರಾರ ರಾಜಕುಮಾರ ಪಾಟೀಲ್ ತೇಲ್ಕೂರ, ಎನ್, ರವಿಕುಮಾರ್, ವಿಜಯೇಂದ್ರ ಮತ್ತು ಇತರರು ಉಪಸ್ಥಿತರಿದ್ದರು.
ಮೋದಿ ಅವರ ಭಾಷಣವನ್ನು ಮಾಜಿ ಸಿಎಂ ಯಡಿಯೂರಪ್ಪ ಅವರು ನಿವಾಸದಲ್ಲಿ ವೀಕ್ಷಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ
Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ
AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ
Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್ನಲ್ಲಿ ಸಿಲುಕಿಕೊಂಡ ಮಹಿಳೆ!!
Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ
Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ
Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ
Mangaluru: ಪ್ಯಾನಿಕ್ ಬಟನ್, ಜಿಪಿಎಸ್ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ
BJP; ವಿಪಕ್ಷ ನಾಯಕ ಆರ್. ಅಶೋಕ್ ನಡೆಗೆ ಕಾಂಗ್ರೆಸ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.