ಮಾರಿಕಾಂಬಾ ಜಾತ್ರಾ ವ್ಯವಸ್ಥೆಯನ್ನು ಹಾಳು ಮಾಡುವ ಪ್ರಯತ್ನದ ವಿರುದ್ಧ ಸಮಿತಿ ಎಚ್ಚರಿಕೆ


Team Udayavani, Feb 2, 2022, 7:46 PM IST

ಮಾರಿಕಾಂಬಾ ಜಾತ್ರಾ ವ್ಯವಸ್ಥೆಯನ್ನು ಹಾಳು ಮಾಡುವ ಪ್ರಯತ್ನದ ವಿರುದ್ಧ ಸಮಿತಿ ಎಚ್ಚರಿಕೆ

ಸಾಗರ: ಇತಿಹಾಸ ಪ್ರಸಿದ್ಧವಾದ ಮಾರಿಕಾಂಬಾ ದೇವಿ ಪ್ರಮುಖ 8 ಹಿಂದುಳಿದ ಸಮಾಜದ ಆರಾಧ್ಯ ದೇವತೆಯಾಗಿದ್ದಾಳೆ. ದೇವಸ್ಥಾನದಲ್ಲಿ ಅಧಿಕಾರ ಗಿಟ್ಟಿಸಿಕೊಳ್ಳಲು ಯಾವುದೇ ರಾಜಕೀಯ ಪಕ್ಷಗಳು ಪ್ರಯತ್ನ ನಡೆಸಿ ವ್ಯವಸ್ಥೆಯನ್ನು ಹಾಳು ಮಾಡುವ ಪ್ರಯತ್ನ ನಡೆಸಬಾರದು. ಒಂದೊಮ್ಮೆ ಅಂತಹ ಪ್ರಯತ್ನಗಳು ರಾಜಕೀಯ ಪಕ್ಷಗಳು ಮಾಡಿದರೆ ಹಿಂದುಳಿದ ಸಮಾಜದ ಉಗ್ರ ಪ್ರತಿಭಟನೆ ಜೊತೆಗೆ ದೊಡ್ಡಮಟ್ಟದ ರಾಜಕೀಯ ಹಿನ್ನೆಡೆ ಅನುಭವಿಸಬೇಕಾಗುತ್ತದೆ ಎಂದು ಹರಳಯ್ಯ ಸಮಾಜದ ಅಧ್ಯಕ್ಷ ಹಾಗೂ ಮಾರಿಕಾಂಬಾ ಹಿತರಕ್ಷಣಾ ಸಮಿತಿ ಸಂಚಾಲಕ ಎಂ.ಡಿ.ಆನಂದ್ ಎಚ್ಚರಿಕೆ ನೀಡಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರಿಕಾಂಬಾ ವ್ಯವಸ್ಥಾಪಕ ಸಮಿತಿ ಸರ್ವಸದಸ್ಯರ ಸಭೆಯಲ್ಲಿ ಸದಸ್ವತ್ವ ಇಲ್ಲದ ಕೆಲವರು ಭಾಗವಹಿಸಿ ಸಭೆಯಲ್ಲಿ ಗೊಂದಲ ಸೃಷ್ಟಿ ಮಾಡಿದ್ದಾರೆ. ಸಭೆ ನಂತರ ಬೇರೆಬೇರೆ ರಾಜಕೀಯ ಪಕ್ಷದ ಮುಖಂಡರು ನಾವು ಸಭೆಯಲ್ಲಿ ಪಾಲ್ಗೊಳ್ಳುತ್ತೇವೆ, ನಮ್ಮನ್ನು ಸಮಿತಿ ಸಂಚಾಲಕರನ್ನಾಗಿ ಮಾಡಿ ಎಂದು ಒತ್ತಾಯಿಸುತ್ತಿದ್ದಾರೆ ಎಂದು ಹೇಳಿದರು.

ಮಾರಿಕಾಂಬಾ ವ್ಯವಸ್ಥಾಪಕ ಸಮಿತಿಯಲ್ಲಿ ಅಮ್ಮನಿಗೆ ನಡೆದುಕೊಳ್ಳುವವರು, ಲಾಗಾಯ್ತಿನಿಂದ ಜಾತ್ರೆ ಇನ್ನಿತರ ಸಂದರ್ಭದಲ್ಲಿ ವಿವಿಧ ಆಚರಣೆಗಳಲ್ಲಿ ಪಾಲ್ಗೊಳ್ಳುವ ಹಿಂದುಳಿದ ಸಮಾಜದವರು ಮಾತ್ರ ಸಂಚಾಲಕರಾಗಿ ಇರಬಹುದು. ಅಧಿಕಾರ, ಹಣ ಮತ್ತು ತೋಳ್ಬಲದಿಂದ ಅಧಿಕಾರಕ್ಕೆ ಬರುವ ಪ್ರಯತ್ನ ಯಾವುದೇ ರಾಜಕೀಯ ಪಕ್ಷಗಳು ಮಾಡಬಾರದು. ಹಿಂದಿನ ಯಾವ ಶಾಸಕರು ಮಾರಿಕಾಂಬಾ ವ್ಯವಸ್ಥಾಪಕ ಸಮಿತಿಯೊಳಗೆ ಹಸ್ತಕ್ಷೇಪ ಮಾಡುತ್ತಿರಲಿಲ್ಲ. ಮಾರಿಕಾಂಬಾ ದೇವಸ್ಥಾನ ಹಿಂದೂ ಸಮಾಜದ ಪ್ರತಿಷ್ಠಿತ ದೇವಸ್ಥಾನವಾಗಿದೆ. ರಾಜಕೀಯ ಮೇಲಾಟದಿಂದ ದೇವಸ್ಥಾನದೊಳಗೆ ಅನ್ಯಧರ್ಮಿಯರು ಹಕ್ಕು ಚಲಾಯಿಸುವಂತೆ ಆಗಬಾರದು ಎಂದು ಹೇಳಿದರು.

ಗಂಗಾಮತ ಸಮಾಜದ ಉಪಾಧ್ಯಕ್ಷ ಧರ್ಮರಾಜ್ ಮಾತನಾಡಿ, ಮಾರಿಕಾಂಬಾ ದೇವಸ್ಥಾನಕ್ಕೆ 100 ವರ್ಷಗಳ ಇತಿಹಾಸವಿದೆ. ಹರಳಯ್ಯ, ಮೋಚಿ, ಸಮಗಾರ, ಚಮ್ಮಾರ, ಡೋರರು, ಛಲವಾದಿ, ಅಸಾದಿ, ಉಪ್ಪಾರ, ಮಡಿವಾಳ, ಕುರುಬ, ಚಾರೋಡಿ, ಗುಡಿಗಾರರು, ಗಂಗಾಮತಸ್ಥರು ನಿರಂತರ ಅಮ್ಮನ ಸೇವೆ ಮಾಡಿಕೊಂಡು ಬರುತ್ತಿದ್ದೇವೆ. ಆದರೆ ಈಚೆಗೆ ನಡೆದ ಸರ್ವಸದಸ್ಯರ ಸಭೆಯಲ್ಲಿ ಸದಸ್ಯರಲ್ಲದ, ದೇವಸ್ಥಾನದ ಇತಿಹಾಸ ಗೊತ್ತಿಲ್ಲದ ಕೆಲವರು ಅನಗತ್ಯ ಪ್ರವೇಶ ಮಾಡಿ ಗೊಂದಲ ಸೃಷ್ಟಿ ಮಾಡಿದ್ದನ್ನು ನಮ್ಮ 8 ಸಮಾಜ ತೀವ್ರವಾಗಿ ಖಂಡಿಸುತ್ತದೆ. ದೇವಸ್ಥಾನದೊಳಕ್ಕೆ ಯಾವುದೇ ರಾಜಕೀಯ ತರುವ ಪ್ರಯತ್ನ ಯಾವ ಪಕ್ಷದವರೂ ಮಾಡಬಾರದು. ಅಂತಹ ಪ್ರಕ್ರಿಯೆ ಯಾವುದಾದರೂ ರಾಜಕೀಯ ಪಕ್ಷದಿಂದ ನಡೆದರೆ ನಮ್ಮ 8 ಸಮಾಜ ಅವರ ವಿರುದ್ಧ ಉಗ್ರವಾದ ಪ್ರತಿಭಟನೆ ಹಮ್ಮಿಕೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಗೋಷ್ಠಿಯಲ್ಲಿ ಉಪ್ಪಾರ ಸಮಾಜದ ಅಧ್ಯಕ್ಷ ರಾಮಪ್ಪ ಟಿ., ಕಾರ್ಯದರ್ಶಿ ಈಶ್ವರ್, ಚಾರೋಡಿ ಆಚಾರ್ ಸಮಾಜದ ಅಧ್ಯಕ್ಷ ಜಿ.ಕುಮಾರ್, ಮಡಿವಾಳ ಸಮಾಜದ ಅಧ್ಯಕ್ಷ ಕೊಟ್ರಪ್ಪ, ಪ್ರಮುಖರಾದ ಮಂಜುನಾಥ್, ಹನುಮಂತಪ್ಪ, ಜಗನ್ನಾಥ್, ರಾಘವೇಂದ್ರ, ಶ್ರೀಧರ್ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Iceland: 8 ವರ್ಷ ಬಳಿಕ ಐಸ್‌ಲ್ಯಾಂಡ್‌ಗೆ ಹಿಮಕರಡಿ ಭೇಟಿ; ಗುಂಡಿಕ್ಕಿ ಹತ್ಯೆ

Iceland: 8 ವರ್ಷ ಬಳಿಕ ಐಸ್‌ಲ್ಯಾಂಡ್‌ಗೆ ಹಿಮಕರಡಿ ಭೇಟಿ; ಗುಂಡಿಕ್ಕಿ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.