![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Feb 3, 2022, 6:10 AM IST
ಪಂಜಾಬ್ನಲ್ಲಿ ಚರಣ್ಜಿತ್ ಸಿಂಗ್ ಚನ್ನಿಯನ್ನು ಕಾಂಗ್ರೆಸ್ ನೂತನ ಮುಖ್ಯಮಂತ್ರಿಯನ್ನಾಗಿ ನೇಮಿಸಿದ್ದು ಈಗ ಹಳೆಯ ಸುದ್ದಿ.
ಆದರೆ ಅಲ್ಲಿ ಒಳಜಗಳ ಮಾತ್ರ ಮುಗಿದೇ ಇಲ್ಲ. ಅದಕ್ಕೆ ಹೊಸತೊಂದು ಸಾಕ್ಷಿಯೆಂಬಂತೆ, ಪಂಜಾಬ್ ಕಾಂಗ್ರೆಸ್ನ ಮಾಜಿ ಅಧ್ಯಕ್ಷ ಸುನೀಲ್ ಜಾಖಡ್ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.
“ಕಳೆದ ವರ್ಷ, ಅಮರೀಂದರ್ ಸಿಂಗ್ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಕ್ಕಿಳಿದ ಅನಂತರ ನಾನೇ ಮುಖ್ಯಮಂತ್ರಿಯಾಗಬೇಕೆಂದು ಕಾಂಗ್ರೆಸ್ನ 42 ಶಾಸಕರು ಬಯಸಿದ್ದರು. ಈ ಮಟ್ಟದ ಬೆಂಬಲ ಬೇರಾರಿಗೂ ಸಿಕ್ಕಿರಲಿಲ್ಲ. ಆದರೆ ನಾನು ಸಿಕ್ಖ್ ಅಲ್ಲವೆಂದು ಮುಖ್ಯಮಂತ್ರಿ ಸ್ಥಾನ ನೀಡಲಿಲ್ಲ. ಇದು ಒಳಗಿನಿಂದ ನನ್ನನ್ನು ಕಾಡುತ್ತಿದೆ” ಎಂದಿದ್ದಾರೆ ಜಾಖಡ್.
ಇದು ಪಂಜಾಬ್ನಲ್ಲಿ ಕಾಂಗ್ರೆಸ್ಗೆ ಮತ್ತೊಂದು ಮುಜುಗರ ತರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ಈಗಾಗಲೇ ಮುಖ್ಯಮಂತ್ರಿ ಚನ್ನಿ ಹಾಗೂ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ನಡುವೆ ಸಿಎಂ ಸ್ಥಾನಕ್ಕೆ ತಣ್ಣನೆಯ ಪೈಪೋಟಿ ನಡೆಯುತ್ತಿದೆ. ಅದರ ನಡುವೆಯೇ ಕಾಂಗ್ರೆಸ್ ಸಿಕ್ಖ್ ವಿರೋಧಿ ಎನ್ನುವಂಥ ಹೇಳಿಕೆಯೊಂದು ಜಾಖಡ್ ನೀಡಿರುವುದು ಚುನಾವಣೆಯಲ್ಲಿ ಕಾಂಗ್ರೆಸ್ಸನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.